ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ,ಎಲ್ಲರ ಗಮನ ಸೆಳೆದ ಎಡಿಜಿಪಿ ಅಲೋಕ್ ಕುಮಾರ್

 

ಬೆಳಗಾವಿ-ದಕ್ಷತೆ ಪ್ರಾಮಾಣಿಕತೆಗೆ ಹೆಸರಾಗಿರುವ ಪೋಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಇಂದು ಬೆಳಗಾವಿಯಲ್ಲಿ ಸೈಕಲ್ ಓಡಿಸಿ ಎಲ್ಲರ ನ ಸೆಳೆದರು ಅವರ ಜೊತೆ ಅನೇಕ ಪೋಲೀಸ್ ಅಧಿಕಾರಿಗಳು ಸೈಕಲ್ ತುಳಿದು ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು.

ಕೆ ಎಸ್ ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು,ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಬೆಳ್ಳಂ ಬೆಳಗ್ಗೆ ಸೈಕಲ್ ಜಾಥಾ ಶುರುವಾಯಿತು ಈ ಜಾಥಾದಲ್ಲಿ,ಬೆಳಗಾವಿ ಪೋಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕೋಬ್ರಾ,ಐಟಿಬಿಟಿ ಟ್ರೇನಿಂಗ್ ಸೆಂಟರ್ ಅಧಿಕಾರಿಗಳು ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳು ಜಾಥಾ ದಲ್ಲಿ ಭಾಗವಹಿಸಿದ್ದವು.

ಈ ಸೈಕಲ್ ಜಾಥಾ ಬೆಳಗಾವಿಯ ಸುವರ್ಣ ವಿಧಾನಸೌಧದಿಂದ ಆರಂಭವಾಗಿ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಆಗಮಿಸಿದ ಜಾಥಾ ಎಲ್ಲರ ಗಮನ ಸೆಳೆಯಿತು.

ಸಂಧರ್ಭದಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಸದೃಡ ಆರೋಗ್ಯಕ್ಕಾಗಿ ನಿತ್ಯ ಸೈಕಲ್ ಉಪಯೋಗಿಸಬೇಕು,ಪ್ರತಿದಿನ ನಾಲ್ಕೈದು ಕಿ.ಮೀ ಸೈಕಲ್ ತುಳಿದರೆ ಆರೋಗ್ಯ ಚನ್ನಾಗಿರುತ್ತದೆ.ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಬಹುದಾಗಿದೆ ಎಂದರು

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *