ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ- ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ವೀರಮರಣ ಹೊಂದಿದ ಘಟನೆ ನಡೆದಿದೆ.

ಗೋಕಾಕ ತಾಲ್ಲೂಕಿನ ಶಿವಾಪುರ ,ಕೊಣ್ಣೂರ ಗ್ರಾಮದ *ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಎಂಬುವರು ನಾಗಾಲ್ಯಾಂಡ ಗಡಿಯಲ್ಲಿ ಗಸ್ತು ತಿರುಗುವಾಗ ಅವರ ವಾಹನ ಅಪಘಾತಕ್ಕೀಡಾಗಿ ಮಂಜುನಾಥ ವೀರಮರಣ ಹೊಂದಿದ್ದಾರೆ.

18 ವರ್ಷಗಳಿಂದ ಮದ್ರಾಸ ಎಂಜಿನಿಯರಿಂಗ್ ಗ್ರೂಪದಲ್ಲಿ ನೇಮಕಗೊಂಡು ನಾಗಲ್ಯಾಂಡ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಚಾಲಕನಿದ್ದು ತಮ್ಮ ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇವರ ಪಾರ್ಥಿವ ಶರೀರ ನಾಳೆ ದಿ.12 ರಂದು ಸಾಯಂಕಾಲ ,6ಘಂಟೆ ಸುಮಾರಿಗೆ ಗೋವಾ ಮಾರ್ಗವಾಗಿ ಸ್ವಗ್ರಾಮಕ್ಕೆ ಬರಲಿದೆ.ಪಾರ್ಥೀವಶರೀರವನ್ನು ಗೋವಾದಿಂದ ಗೋಕಾಕ ತಾಲ್ಲೂಕಿನ ಕೊನ್ನೂರ,ಶಿವಾಪೂರ ಗ್ರಾಮಕ್ಕೆ ಕೊಂಡುಯ್ಯುವಾಗ ಬೆಳಗಾವಿಯಲ್ಲೂ ಯೋಧನ ಅಂತಿಮ ದರ್ಶನದ ವ್ಯೆವಸ್ಥೆ ಮಾಡುವ ಸಾಧ್ಯತೆ ಇದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *