Breaking News

ಚಿಕಿತ್ಸೆ ಸಿಗದೇ ಭೀಮ್ಸ್ ನಲ್ಲಿ,ನರಳಾಡಿ ಜೀವ ಬಿಟ್ಟ ಯುವತಿ

ಬೆಳಗಾವಿ- ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಾಗಿದೆ,ಸೊಂಕಿತರ ಚಿಕಿತ್ಸೆಗೆ ಎಲ್ಲ ವ್ಯೆವಸ್ಥೆ ಮಾಡಿದ್ದೇವೆ,ಎಂದು ಜಿಲ್ಲಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಸಮರ್ಥನೆ ಮಾಡಿಕೊಂಡ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮೊತ್ತೊಂದು ಘಟನೆ ನಡೆದಿದೆ.ಮೂವತ್ತು ವರ್ಷದ ಯುವತಿ ಆಸ್ಪತ್ರೆಯಲ್ಲಿ ನರಳಾಡಿ ಜೀವ ಬಿಟ್ಟಿರುವ ಅಮಾನವೀಯ ಘಟನೆಗೆ ಭೀಮ್ಸ್ ಆಸ್ಪತ್ರೆ ಮತ್ತೊಮ್ಮೆ ಸಾಕ್ಷಿಯಾಗಿದೆ.

ಅಥಣಿ ತಾಲ್ಲೂಕಿನ 65 ವರ್ಷದ ವೃದ್ಧನೊಬ್ನ ನರಳಿ,ನರಳಿ ಜೀವ ಬಿಟ್ಟ ಬೆನ್ನಲ್ಲಿಯೇ ಮೂವತ್ತು ವರ್ಷದ ಯುವತಿ ಅದೇ ರೀತಿ ಮೃತಪಟ್ಟಿದ್ದು ಭೀಮ್ಸ್ ಬೆಳಗಾವಿಯ ಸರ್ಕಾರಿ ದವಾಖಾನೆ ಅಲ್ಲ ಅದೊಂದು ಕಸಾಯಿ ಖಾನೆ ಅನ್ನೋದು ಮತ್ತೊಮ್ಮೆ ಸಾಭೀತಾಗಿದೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾಳೆ ಬಿಮ್ಸ್ ಆಸ್ಪತ್ರೆಯಲ್ಲಿ ನರಳಿ ನರಳಿ ಮೃತಪಟ್ಟ 30 ವರ್ಷದ ಯುವತಿ. ಯುವತಿಯ ಕೊನೆಯ ಘಳಿಗೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿವೆ.

ಕಾಗವಾಡ ತಾಲೂಕಿನ ಗ್ರಾಮವೊಂದರ 35ವರ್ಷದ ಯುವತಿ ಸಾವನ್ನೊಪ್ಪದ್ದು,ಈ ಯುವತಿ
ತೀವ್ರ ಮಧುಮೇಹದಿಂದ ಬಳಲುತ್ತಿದ್ದಳು 35 ವರ್ಷದ ಯುವತಿ. ಬಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿದಾಗ ಕೊರೊನಾ ದೃಢವಾಗಿತ್ತು.
ಬಳಿಕ ಕೊವಿಡ್ ವಾರ್ಡ್‌ಗೆ ಈ ಯುವತಿಯನ್ನು ಶಿಫ್ಟ್ ಮಾಡಲಾಗಿತ್ತು. ಯುವತಿ ಮಧುಮೇಹದಿಂದ ಬಳಲುತ್ತಿದ್ದರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *