ಗೆಲ್ಲುವ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ವು- ಆರ್ ಅಶೋಕ

ಬೆಳಗಾವಿ-ಬೆಳಗಾವಿಯಲ್ಲಿ ಶಿವಸೇನೆ ನಿಷೇಧ ಮಾಡಲು ಕಾನೂನಿನಲ್ಲಿ ಇದೆಯೋ ಇಲ್ಲವೋ ಎನ್ನುವುದು ಸರಕಾರ ಚಿಂತನೆ ಮಾಡಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಶನಿವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುವ ಶಿವಸೇನೆ ಒಂದು ರಾಜಕೀಯ ಪಕ್ಷವಾಗಿರುವುದರಿಂದ ಅದನ್ನು ನಿಷೇಧ ಮಾಡಲು ಅಧಿಕಾರ ಇರುವುದಿಲ್ಲ. ಅದನ್ನು ನಿಷೇಧ ಮಾಡಲು ಅವಕಾಶ ಇದೆಯೋ ಇಲ್ಲ ಎನ್ನುವುದು ಚರ್ಚೆ ಮಾಡುತ್ತೇವೆ ಎಂದರು.

ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿರುವ ಶಿವಸೇನೆಗೆ ಸರಕಾರದಿಂದ ಎಬಿಸಿಡಿಯಿಂದ ಹಿಡಿದು ಕನ್ನಡ  ಅಕ್ಷರ ಮಾಲೆ ಕಲಿಸಿಕೊಟ್ಟು ತಕ್ಕ ಪಾಠ ಕಲಿಸಲಾಗುವುದು ಎಂದು ಖಡಕ ಎಚ್ಚರಿಕೆ ನೀಡಿದರು.

ಬೆಳಗಾವಿ ಸೇರಿದಂತೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ಹೊಂದಾಣಿಕೆ ಮಾಡುವ ಪ್ರಶ್ನೆಯೇ ಬರುವುದಿಲ್ಲ. ನೆಲ, ಜಲ ವಿಚಾರಕ್ಕೆ ಬಂದರೆ ಯಾವುದೇ ಬೆಲೆ ತೆತ್ತಾದರೂ ಸರಕಾರ ರಕ್ಷಣೆ ಮಾಡುತ್ತೇವೆ. ಶಿವಸೇನೆಯ ಪುಂಡಾಟಿಕೆಗೆ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಪುನರುಚ್ಚರಿಸಿದರು.

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸಲು ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಪುಂಡಾಟಿಕೆ ಮಾಡುವ ಎಂಇಎಸ್, ಶಿವಸೇನೆಯ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ. ಅವರನ್ನು ಮಟ್ಟ ಹಾಕಿ ಶಾಂತಿ ನೆಲಸುವ ಕೆಲಸ ಸರಕಾರ ಮಾಡಲಿದೆ ಎಂದರು.

ಬೆಳಗಾವಿ ಲೋಕಸಭಾ ಉಪಚುನಾವಣೆಯ ಕುರಿತು ಶುಕ್ರವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಚರ್ಚೆಯಾಗಿದೆ. ಆಕಾಂಕ್ಷಿಗಳು ಹೆಚ್ಚಿದ್ದಾರೆ. ಸುರೇಶ ಅಂಗಡಿ ಅವರ ಕುಟುಂಬವು ಬಿಜೆಪಿಯಲ್ಲಿ ಒಡನಾಟ ಇದೆ. ಅದನ್ನು ಕೂಡ ನಾನು ಕೇಂದ್ರದ ನಾಯಕರ ಗಮನಕ್ಕೆ ತಂದಿದ್ದೇನೆ. ಅಲ್ಲದೆ ಕಾರ್ಯಕರ್ತರು ಸಹ ತುಂಬಾ ಜನ ಇದ್ದಾರೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎನ್ನುವುದು ಕಾದು ನೋಡಬೇಕೆಂದರು.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *