Breaking News
Home / Breaking News / ಕರ್ನಾಟಕ ಬಂದ್, ಬೆಳಗಾವಿಯಲ್ಲಿ ಪ್ರತಿಭಟನೆಗೆ ಸೀಮಿತ…

ಕರ್ನಾಟಕ ಬಂದ್, ಬೆಳಗಾವಿಯಲ್ಲಿ ಪ್ರತಿಭಟನೆಗೆ ಸೀಮಿತ…

ಬೆಳಗಾವಿ- ಇಂದು ವಿವಿಧ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಬೆಳಗಾವಿಯಲ್ಲಿ ಬಂದ್ ಬಿಸಿ ತಟ್ಟಿಲ್ಲ,ಇಲ್ಲಿ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದುಕೊಂಡಿದ್ದು ಬಂದ್ ಪ್ರತಿಭಟನೆಗೆ ಸೀಮಿತವಾಗಿದೆ.

ಇಂದು ಬೆಳ್ಳಂ ಬೆಳಗ್ಗೆ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲಿ ಕಾವೇರಿ ನಮ್ಮದು,ಎಂದು ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡುವ ಮೂಲಕ ತಮಿಳುನಾಡಿಗೆ ನೀರು ಬಿಟ್ಡಿರುವ ರಾಜ್ಯ ಸರ್ಕಾರದ ರಾಜ್ಯವಿರೋಧಿ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ರು

ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲಿ ಕರವೇ (ಶಿವರಾಮೇಗೌಡ ಬಣ) ಕಾರ್ಯಕರ್ತರು ಬಸ್ ಸಂಚಾರವನ್ನು ತಡೆಯುವ ಪ್ರಯತ್ನ ಮಾಡಿದಾಗ ಪೋಲೀಸರು ಹದಿನೈದಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ್ರು.

ಇಂದು ಕರ್ನಾಟಕ ಬಂದ್ ಕರೆ ಹಿನ್ನಲೆಯಲ್ಲಿ ವಿವಿಧ ಕನ್ನಡಪರ,ರೈತಪರ ಸಂಘಟನೆಗಳು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸರದಿಯಂತೆ ಪ್ರತಿಭಟನೆ ನಡೆಸಿದ್ದು ಕರ್ನಾಟಕ ಬಂದ್ ಬೆಳಗಾವಿಯಲ್ಲಿ ಪ್ರತಿಭಟನೆಗೆ ಸೀಮಿತವಾಗಿದೆ.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *