ಲಾಕ್ ಡೌನ್ ಸಡಲಿಕೆ ನಂತರ ಬೆಂಗಳೂರಿನಿಂದ ಬೆಳಗಾವಿಗೆ ಬಂತು ಸೂಪರ್ ಫಾಸ್ಟ್ ರೈಲು

ಬೆಳಗಾವಿ-ಲಾಕ್ ಡೌನ್ ಮಧ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ,ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರ ಇಚ್ಛಾಶಕ್ತಿಯ ಪರಿಣಾಮವಾಗಿ ಬೆಂಗಳೂರಿಂದ ವಿಶೇಷ ರೈಲು ಇಂದು ಸಂಜೆ ಬರೊಬ್ಬರಿ 7 ಗಂಟೆಗೆ ಬೆಳಗಾವಿಗೆ ತಲುಪಿತು.

ಬೆಂಗಳೂರು ಬೆಳಗಾವಿ ಸೂಪರ್‌ಫಾಸ್ಟ್ ಎಕ್ಸಪ್ರೆಸ್ ರೈಲು ಬೆಳಗಾವಿಗೆ ಆಗಮಿಸಿದ್ದು ಬೆಂಗಳೂರಿಂದ ಬೆಳಗಾವಿಗೆ ಆಗಮಿಸಿದ 171 ಪ್ರಯಾಣಿಕರು ಆಗಮಿಸಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಬಳಿಕ ಸಂಚಾರ ಆರಂಭಿಸಿದ ಮೊದಲ ರೈಲು ಇದಾಗಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ರೇಲ್ವೆ ನಿಲ್ದಾಣದಿಂದ ಪ್ರಯಾಣಿಕರು ಹೊರಬಂದರು

ರೇಲ್ವೆ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಯಾಣಿಕರಿಗೆ ಮಾಸ್ಕ್ ವಿತರಣೆ ಮಾಡಲಾಯಿತು

ಇದೇ ರೈಲು ನಾಳೆ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿಗೆ ಹೋಗಲಿದ್ದು 300 ಪ್ರಯಾಣಿಕರು ಬೆಳಗಾವಿಯಿಂದ ಬೆಂಗಳೂರಿಗೆ ಹೋಗಲು ಮುಂಗಡ ಬುಕ್ಕಿಂಗ್ ಮಾಡಿದ್ದಾರೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *