Breaking News

ಹಠಗಾರ ಸಾಹುಕಾರ್ ಗೆ ಬೆಳಗಾವಿ ಉಸ್ತುವಾರಿ ಪಟ್ಟ

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ.
ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ ಹಠಕ್ಕೆ ಬಿದ್ದು ಜಲಸಂಪನ್ಮೂಲ ಖಾತೆ ತಮ್ಮದಾಗಿಸಿಕೊಂಡಿದ್ದರು. ಇದೀಗ ಬೆಳಗಾವಿ ಉಸ್ತುವಾರಿ ಆಗಿರುವ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *