Breaking News

ಒಂದ ವರ್ಷದಾಗ ಬೆಳಗಾವಿ ರೇಲ್ವೆ ಸ್ಟೇಶನ್ ಲಕ,ಲಕಾ ಅಂತ ಹೊಳಿತೈತಿ…..!!!

ನೂತನ ರೈಲುನಿಲ್ದಾಣ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಸಚಿವ ಸುರೇಶ್ ಅಂಗಡಿ ಸೂಚನೆ

ಬೆಳಗಾವಿ, ಜೂನ್ 4(ಕರ್ನಾಟಕ ವಾರ್ತೆ): ನಗರದ ನೂತನ ರೈಲುನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಯು ನವೆಂಬರ್ 2020 ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕಾಮಗಾರಿ ನಿಧಾನಗೊಂಡಿರುತ್ತದೆ ಎಂದು ತಿಳಿಸಿದರು.

ಆದಾಗ್ಯೂ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಮಾರ್ಚ್ 2021 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೇಲ್ ವಿಕಾಸ ನಿಗಮ ಮತ್ತು ರೈಲ್ವೆ ಇಲಾಖೆಯ ಸ್ಥಳೀಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
***

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *