Breaking News

ಲಾಕ್ ಡೌನ್ ಸಂಕಷ್ಟ, ಬೆಳಗಾವಿಯ ನೇಕಾರ ಕೂಲಿ ಕಾರ್ಮಿಕನ ಆತ್ಮಹತ್ಯೆ

ಬೆಳಗಾವಿ- ಲಾಕ್‌ಡೌನ್‌ನಿಂದ ಉದ್ಯೋಗ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಂಕಷ್ಟೊಳಗಾದ ಬೆಳಗಾವಿಯ ನೇಕಾರ ಕೂಲಿಕಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ವಡಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ನೇಕಾರ ಕೂಲಿಕಾರ್ಮಿಕ ಸುಜಿತ್ ಉಪರಿ(38) ನೇಣಿಗೆ ಶರಣಾಗಿದ್ದಾನೆ.
ಬೆಳಗಾವಿಯ ವಡಗಾವಿಯ ಲಕ್ಷ್ಮೀ ನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಲಾಕ್‌ಡೌನ್ ಹಿನ್ನೆಲೆ ಬೆಳಗಾವಿಯಲ್ಲಿ ವಿದ್ಯುತ್ ಮಗ್ಗಗಳು ಬಂದ್ ಆಗಿದ್ದವು. ಕೆಲಸ ಇಲ್ಲದೇ ಕೈಸಾಲ ಮಾಡಿದ್ದ ನೇಕಾರ ಕಾರ್ಮಿಕ ಸುಜಿತ್. ವಿದ್ಯುತ್ ಮಗ್ಗವಿದ್ದ ನೇಕಾರರ ಬಳಿ ಕೆಲಸಕ್ಕೆ ಹೋಗುತ್ತಿದ್ದ , ದುಡಿಯಲು ಕೆಲಸವಿಲ್ಲದೇ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದ. ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ ನೇಕಾರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *