Breaking News

ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ

ಬೆಳಗಾವಿ-ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ.ಮುಖಕ್ಕೆ ಮಾಸ್ಕ ಹಾಕೊಂಡು,ಎಸಿಬಿ ಅಧಿಕಾರಿಗಳು ನಾಲ್ಕು ಕಡೆ ದಾಳಿ ಮಾಡಿದ್ದಾರೆ.

ಬೆಳಗಾವಿಯ ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರುಕ್ಮಿಣಿ ನಗರದ ನಿವಾಸ ಮತ್ತು, ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಇನ್ವೆಸ್ಟಿಗೇಷನ್ ಯೂನಿಟ್ 3ರ ಅಸಿಸ್ಟೆಂಟ್ ಕಂಟ್ರೋಲರ್ ಆಗಿದ್ದಾರೆ.

ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ಮಾಡಿದ 30 ಸಿಬ್ಬಂದಿಯ ತಂಡಗಳು ಪರಶೀಲನೆ ಮಾಡುತ್ತಿವೆ. ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡರ ನೇತೃತ್ವದಲ್ಲಿ ದಾಳಿ ನಡೆದಿದೆ.ಬೆಳಗಾವಿಯ ರುಕ್ಮಿಣಿ ನಗರದ ಮನೆ, ಕಚೇರಿ, ಬಾಡಿಗೆ ಮನೆ.ಬಸವನ ಕುಡಚಿಯಲ್ಲಿರುವ ಅಳಿಯ ಸದಾನಂದ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಓರ್ವ ಡಿವೈಎಸ್‌ಪಿ, ಏಳು ಇನ್ಸ್‌ಪೆಕ್ಟರ್, 20 ಜನ ಸಿಬ್ಬಂದಿಯಿಂದ ದಾಳಿ ನಡೆದಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *