Breaking News
Home / Breaking News / ಅಪರಿಚಿತ ವಾಹನ ಹಾಯ್ದು ಸವದತ್ತಿ ಠಾಣೆ ಎಎಸ್‌ಐ ದುರ್ಮರಣ

ಅಪರಿಚಿತ ವಾಹನ ಹಾಯ್ದು ಸವದತ್ತಿ ಠಾಣೆ ಎಎಸ್‌ಐ ದುರ್ಮರಣ

ಬೆಳಗಾವಿ-ಅಪರಿಚಿತ ವಾಹನ ಹಾಯ್ದು ಸವದತ್ತಿ ಠಾಣೆ ಎಎಸ್‌ಐ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಠಾಣೆ ಎಎಸ್ಐ ಯಲ್ಲಪ್ಪ ತಳವಾರ(59) ಸಾವನ್ನೊಪ್ಪಿದ್ದಾರೆ. ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದ್ದು ಘಟನಾ ಸ್ಥಳಕ್ಕೆ ಸವದತ್ತಿ ಠಾಣೆಯ ಪೋಲೀಸ್ ಅಧಿಕಾರಿಗಳು ತೆರಳಿ ತನಿಖೆ ಆರಂಭಿಸಿದ್ದಾರೆ.

ಸವದತ್ತಿ ಪಟ್ಟಣದ ಹೊರ ವಲಯದಲ್ಲಿ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ಯಲ್ಲಪ್ಪ ತಳವಾರ್‌ ಬೈಲಹೊಂಗಲ ತಾಲೂಕಿನ ಅನಿಗೋಳ ನಿವಾಸಿ ಎನ್ನಲಾಗಿದೆ. ಸವದತ್ತಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *