ಬೆಳಗಾವಿಯ ಇಬ್ಬರು ಮಿನಿಸ್ಟರ್ ಗಳು ವ್ಯಾಕ್ಸೀನ್ ಡಿಪೋಗೆ ಹೋಗಿದ್ದು ಯಾಕೆ ಗೊತ್ತಾ..??

ವ್ಯಾಕ್ಸಿನ ಡಿಪೋ ರಕ್ಷಣೆಗೆ ಕ್ರಮ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ:
ಟಿಳಕವಾಡಿ ವ್ಯಾಕ್ಸಿನ ಡಿಪೋವನ್ನು ಯಥಾಸ್ಥಿತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಟಿಳಕವಾಡಿಯ ವ್ಯಾಕ್ಸಿನ ಡಿಪೋಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇದು ಐತಿಹಾಸಿಕ ಲಸಿಕಾ ಸಂಸ್ಥೆಯಾಗಿತ್ತು. ೨೦೦೬ರಲ್ಲಿ ಇದನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸ್ಮಾರ್ಟಸಿಟಿ ಕಾಮಗಾರಿಗಳನ್ನು ಆರೋಗ್ಯ ಇಲಾಖೆ ಗಮನಕ್ಕೆ ತಾರದೇ ಕೈಗೊಳ್ಳಲಾಗಿದೆ. ಇಲ್ಲಿನ ಔಷಧಿಯುಕ್ತ ಮರಗಳನ್ನು ಕಡಿದು ಸಾಗಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಸ್ಮಾರ್ಟಸಿಟಿ ಎಂಡಿ ವಿರುದ್ಧ ದೂರು ನೀಡಿರುವುದು ಆಶ್ಚರ್ಯವಾಗಿದೆ ಎಂದರು.
ಈಗಾಗಲೇ ಸ್ಮಾರ್ಟಸಿಟಿ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ಇದಕ್ಕೆ ಕೊನೆಹಾಡಬೇಕಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಾರೆ. ಈ ಪ್ರಕರಣ ನ್ಯಾಯಾಲಯಕ್ಕೂ ಹೋಗಿದೆ. ಈ ಕುರಿತು ನಾವು ಮಾಹಿತಿ ಪಡೆದಿದ್ದೇವೆ. ಪೊಲೀಸ್ ತನಿಖೆಯಿಂದ ಸತ್ಯಾಂಶ ಕಂಡುಹಿಡಿಯಬೇಕಿದೆ. ತನಿಖೆ ಆಧಾರದ ಮೇಲೆ ಆಯಾ ಇಲಾಖೆಯ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ರಾಜಕೀಯ ವ್ಯವಸ್ಥೆ ಒತ್ತಡ ಇರಬಹುದು. ಮಾಹಿತಿ ಹಕ್ಕಿನಡಿ ಕೆಲವರು ಅರ್ಜಿ ಸಲ್ಲಿಸಿದ್ದರು. ಈಗ ಜಿಲ್ಲಾ ಆರೋಗ್ಯಾಧಿಕಾರಿ ಅನಿವಾರ್ಯವಾಗಿ ಠಾಣೆಗೆ ದೂರು ಕೊಟ್ಟಿದ್ದಾರೆ. ಸ್ಮಾರ್ಟಸಿಟಿ ಯೋಜನೆಯಡಿ ವ್ಯಾಕ್ಸಿನ್ ಡಿಪೋ ವ್ಯಾಪ್ತಿಯಲ್ಲಿ ಫುಟ್ಫಾತ್, ಕಟ್ಟಡ ನಿರ್ಮಿಸಲಾಗಿದೆ. ಇನ್ನು ೯ ಕೋಟಿ ಕಾಮಗಾರಿ ಬಾಕಿ ಇದೆ ಎಂದರು.
ವ್ಯಾಕ್ಸಿನ ಡಿಪೋವನ್ನು ಯಥಾಸ್ಥಿತಿ ಕಾಪಾಡುವುದರ ಜೊತೆಗೆ ಈ ಸಂಬಂಧ ಸ್ಮಾರ್ಟಸಿಟಿ, ಆರೋಗ್ಯ ಇಲಾಖೆ, ಜಿಲ್ಲಾಧಿಕಾರಿ ಜೊತೆಗೆ ಸಭೆ ನಡಿಸಿ, ಪರಿಹಾರ ಕಂಡುಕೊಳ್ಳಬೇಕಿದೆ. ಅಲ್ಲದೇ, ವ್ಯಾಕ್ಸಿನ ಡಿಪೋದ ವ್ಯಾಪ್ತಿಯಲ್ಲಿನ ಔಷಧಿಯುಕ್ತ ಗಿಡಮರಗಳನ್ನು ಕಡಿದು ಹಾನಿಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *