ನಮ್ಮ ನಡೆ…ನಿಮ್ಮ ಕಡೆ….ತಾಲ್ಲೂಕಾ ಕೇಂದ್ರಗಳಲ್ಲಿ ಡಿಸಿ,ಎಸ್ಪಿ ಸಿಇಓ ಲಭ್ಯ…!!

ಸಾರ್ವಜನಿಕ ಭೇಟಿಗೆ ಡಿಸಿ, ಎಸ್.ಪಿ. ಸಿಇಓ ಲಭ್ಯ
———————————————————–
ಅ.14 ರಂದು ಬೈಲಹೊಂಗಲ, ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಭೇಟಿಗೆ ಅವಕಾಶ

ಬೆಳಗಾವಿ, -ಜಿಲ್ಲಾಧಿಕಾರಿ ನಿತೇಶ್ ಪಾಟೀಲ, , ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.

ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.

ಈ ಎರಡೂ ತಾಲ್ಲೂಕಿನ ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****

Check Also

ಬೆಳಗಾವಿ -ಸಾಲಭಾದೆಗೆ ನೇಕಾರ ಆತ್ಮಹತ್ಯೆ

ಬೆಳಗಾವಿ-ಸಾಲಭಾದೆಗೆ ಬೇಸತ್ತು ನೇಣುಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ. ಪರುಶರಾಮ ವಾಗೂಕರ (47) …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.