Breaking News

ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಬೆಳಗಾವಿ- ಬೆಂಗಳೂರು ಬೈಕ್ ರ್ಯಾಲಿ,..

ಬೆಳಗಾವಿ- ಮಹಾದಾಯಿ ಯೋಜನೆ ಅನುಷ್ಠಾನ, ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬೆಳಗಾವಿಯಿಂದ ಬೆಂಗಳೂರಿನ ವರೆಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಿದೆ.

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸೇರಿದ ಕನ್ನಡ ಸಂಘಟನೆಗಳ ಒಕ್ಕೂಟ, ಹಾಗೂ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸೇರಿ ,ಮಹಾದಾಯಿ ಯೋಜನೆ ಜಾರಿಯಾಗಲೇಬೇಕು ,ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಲೇಬೇಕು ಎಂದು ಘೋಷಣೆಗಳನ್ನು ಕೂಗುವ ಮೂಲಕ.ಪ್ರತಿಭಟನಾ ರ್ಯಾಲಿ ಆರಂಭಿಸಿದರು

ರಾಷ್ಟ್ರೀಯ ಹೆದ್ದಾರಿಯವರೆಗೆ ಪಾದಯಾತ್ರೆ ಮೂಲಕ ತೆರಳಿ ನಂತರ ಬೈಕ್ ರ್ಯಾಲಿಯ ಮೂಲಕ ಕನ್ನಡದ ಕಾರ್ಯಕರ್ತರು ಬೆಂಗಳೂರಿಗೆ ತಲುಪಲಿದ್ದಾರೆ.ಬೆಂಗಳೂರಿಗೆ ಈ ರ್ಯಾಲಿ ತಲುಪುವಷ್ಟರಲ್ಲಿ ಈ ರ್ಯಾಲಿಯಲ್ಲಿ ಸುಮಾರು ಹತ್ತು ಸಾವಿರ ಕನ್ನಡದ ಕಾರ್ಯಕರ್ತರು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಗುವದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *