ಪಾದಯಾತ್ರೆಯ ಮುನ್ನಾ ದಿನ ರೆಬೆಲ್ ಗಳ ರಹಸ್ಯ ಸಭೆ.

ಬೆಂಗಳೂರು- ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ.

ಪಾದಯಾತ್ರೆಯ ಮುನ್ನಾ ದಿನ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಕುಮಾರ ಬಂಗಾರಪ್ಪನವರ ನಿವಾಸದಲ್ಲಿ ಬಿಜೆಪಿಯ ಬಸನಗೌಡ ಯತ್ನಾಳ, ರಮೇಶ್ ಜಾರಕಿಹೊಳಿ,ಪ್ರತಾಪಸಿಂಹ ಮತ್ತು ಕುಮಾರ ಬಂಗಾರಪ್ಪನವರು ರಹಸ್ಯ ಸಭೆ ನಡೆಸಿದ್ದು ಈ ಭೇಟಿಯ ರಹಸ್ಯ ಏನು ? ಎನ್ನುವದು ಈಗ ತೀವ್ತ ಕುತೂಹಲ ಕೆರಳಿಸಿದೆ.

ಸಭೆಯ ಬಳಿಕ ಮಾತನಾಡಿದ ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷದಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರವೇ ಅಂತಿಮ ನಾವೆಲ್ಲ ಕೇಂದ್ರದ ಬಿಜೆಪಿ ನಾಯಕರ ಆದೇಶ ಪಾಲನೆ ಮಾಡುತ್ತೇವೆ ಎಂದರು

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *