Breaking News
Home / Breaking News / 5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!!

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!!

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ

ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ ಆದೇಶವನ್ನು ಹೊರಡಿಸಿದೆ. ಹಾಗೂ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ

ರಾಜ್ಯದ 5, 8, 9, 11ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೇಲ್ಮನವಿಯ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ನಡೆಸಿ ತೀರ್ಪು ಅನ್ನು ಕಾಯ್ದಿರಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು.
ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ನೀಡಲಾಗಿತ್ತು. ಮೇಲ್ಮನವಿ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆಯನ್ನು ನೀಡಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ವಿಭಾಗೀಯ ಪೀಠದ ತೀರ್ಪು ಅನ್ನು ಕಾಯ್ದಿರಿಸಿತ್ತು.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನರಹಿತ, ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸುವ ವಿಚಾರದ ಕುರಿತಂತೆ ಅನಿಶ್ಚಿತತೆಯು ಮುಂದುವರೆದಿತ್ತು. ಪರೀಕ್ಷೆಯು ನಡೆಯುತ್ತದೆಯೇ ಅಥವಾ ರದ್ದಾಗುತ್ತದೆಯೇ ಎಂಬುದರ ಕುರಿತಾಗಿ ಗೊಂದಲವು ಮುಂದುವರೆದಿದ್ದು, ಮಕ್ಕಳು ಹಾಗೂ ಪೋಷಕರ ಸ್ಥಿತಿಯು ಅಯೋಮಯವಾಗಿತ್ತು. ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಅನ್ನು ಪ್ರಕಟಿಸಿದೆ.

ಪರೀಕ್ಷೆಗೆ ಹೊಸ ವೇಳಾಪಟ್ಟಿ…

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ 28 ರ ವರೆಗೆ ಪರೀಕ್ಷೆ ನಡೆಯಲಿದೆ.

5ನೇ ತರಗತಿ

ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ

8ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *