Breaking News

ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬರ್ತಾರೆ.

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಆತ್ಮಾವಲೋಕನ ಪರ್ವ ಶುರುವಾಗಿದೆ. ಇಂದು ಸೋಮವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಳಗಾವಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಇಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಡಾ. ಗುರುದೇವ ರಾನಡೆ ಮಂದಿರ ಎಸಿಪಿಆರ್ ನ ನವೀಕೃತ ಕಟ್ಟಡದ ಲೋಕಾರ್ಪಣೆ ಮತ್ತು ಪಾತವೇಟು ಗಾಡ್ ನಿಯತಕಾಲಿಕೆಯ 200ನೇ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ‌ ಬೊಮ್ಮಾಯಿ ಅವರು ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಯುಕೆ-27 ಹೋಟೆಲ್ ನಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಸೋತ ಅಭ್ಯರ್ಥಿಗಳ ಜೊತೆಗೆ ಬೊಮ್ಮಾಯಿ, ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಸೋತ ಅಭ್ಯರ್ಥಿಗಳು ತಮ್ಮ ಸೋಲಿಗೆ ಕೆಲ ಸ್ವಪಕ್ಷಿಯರೇ ಕಾರಣ ಎಂಬ ದೂರನ್ನು ಬಸವರಾಜ ಬೊಮ್ಮಾಯಿ ಅವರ ಮುಂದಿಡಲಿದ್ದು, ಆರೋಪ-ಪ್ರತ್ಯಾರೋಪ ಜೋರಾಗಿ ಕೇಳ ಬರುವ ಸಾಧ್ಯತೆಯಿದೆ. ಇನ್ನು ಯಾರು..? ಯಾರ ಮೇಲೆ ಆರೋಪ ಮಾಡುತ್ತಾರೆ ಎಂಬುದು ಸಧ್ಯ ತೀವ್ರ ಕುತೂಹಲ‌ ಮೂಡಿಸಿದೆ.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.