ಬೆಳಗಾವಿ: ಸಿಲೆಂಡರ್ ಸ್ಪೋಟಕ್ಕೆ ಓರ್ವ ಬಲಿ..

ಬೆಳಗಾವಿ-ಅಡುಗೆ ಅನಿಲದ ಸಿಲೆಂಡರ್ ಸ್ಪೋಟಗೊಂಡ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪೋಲೀಸ್ ಠಾಣಾ ವ್ಯಾಪ್ತಿಯ ನಾಗನೂರು ಗ್ರಾಮದಲ್ಲಿ ನಡೆದಿದೆ.

ಬಾಡಿಗೆ ಮನೆಯಲ್ಲಿ ಮೊದಲ ಮಹಡಿಯಲ್ಲಿ ವಾಸವಾಗಿದ್ದ,19 ವರ್ಷದ ಶ್ರೀಧರ ಪ್ಯಾಟಿ,ಮೃತ ದುರ್ದೈವಿಯಾಗಿದ್ದು ಈತ ನರ್ಸಿಂಗ್ ವಿಧ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.

ಮೊದಲ ಮಹಡಿಯಲ್ಲಿ ಸಿಲೆಂಡರ್ ಬ್ಲಾಸ್ಟ್ ಆದ ಕಾರಣ ಮನೆಯೂ ದ್ವಂಸಗೊಂಡಿದ್ದು ಮನೆಯಲ್ಲಿ ವಾಸವಿದ್ದ ನರ್ಸಿಂಗ್ ಕಾಲೇಜು ವಿಧ್ಯಾರ್ಥಿ ಬಲಿಯಾಗಿದ್ದು ಈ ಘಟನೆಯಿಂದಾಗಿ ನಾಗನೂರ ಗ್ರಾಮದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು

ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

Check Also

ಬೈಕ್ ಮೇಲೆ ಹೋಗುವಾಗ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯ

ಯಮಕನಮರ್ಡಿ- ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಂಕಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ …

Leave a Reply

Your email address will not be published. Required fields are marked *