ಬೆಳಗಾವಿಯಲ್ಲಿ ಕರುಣೆ ತೋರದ ವರುಣ, ಗೋಡೆ ಕುಸಿದು,ಯುವಕನ ಬಲಿ…

ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು

ಹಾವೇರಿ: ಮನೆ ಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುಸ್ತಾಕ್ ಯರಗುಪ್ಪಿ(27) ಎಂದು ಗುರುತಿಸಲಾಗಿದೆ. ಮನೆ ಶಿಥಿಲಗೊಂಡಿದ್ದರಿಂದ ಜಿಟಿ ಜಿಟಿ ಮಳೆಗೆ ನೆನೆದು, ಗೋಡೆ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ. ತಡರಾತ್ರಿ ಮನೆ ಕುಸಿದು ಬಿದ್ದು ಮುಸ್ತಾಕ್‍ಗೆ ಗಂಭೀರವಾಗಿ ಗಾಯವಾಗಿತ್ತು.

ತಕ್ಷಣ ಕುಟುಂಬಸ್ಥರು ಸ್ಥಳೀಯರ ಸಹಾಯ ತೆಗೆದುಕೊಂಡು ಮುಸ್ತಾಕ್‍ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮುಸ್ತಾಕ್ ಮೃತಪಟ್ಟಿದ್ದಾನೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *