ಬೆಳಗಾವಿ – ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಮುಖ್ಯ ಆರೋಪಿಯನ್ನು ಮಾರ್ಕೆಟ್ ಠಾಣೆಯ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಾ ಮಾಜಿ ಶಾಸಕ ಮಾಮಲೇದಾರ ಮೇಲೆ ಹಲ್ಲೆ ಪ್ರಕರಣದ ಅಟೋ ಚಾಲಕ ಆರೋಪಿ ಮುಜಾಹಿದ್ ಶಕೀಲ ಸನದಿ ಎಂಬಾತನನ್ನು ಬಂಧಿಸಲಾಗಿದೆ.ಬೆಳಗಾವಿ ಸುಭಾಶ ನಗರ ನಿವಾಸಿ ಮುಜಾಹಿದ ನನ್ನು ಬಂಧಿಸಿದ ಮಾರ್ಕೆಟ್ ಪೊಲೀಸ್ರು ತನಿಖೆ ಮುಂದುವರೆಸಿದ್ದು ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟ್ಟಿ ಪರೀಶಿಲನೆ ಮಾಡಿದ್ದಾರೆ. …
Read More »ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಸರ್ಜರಿ ಸಕ್ಸೆಸ್…..!!!
ಬೆಳಗಾವಿ-ಗರ್ಭಿಣಿ ಮಹಿಳೆಯಲ್ಲಿದ್ದ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುತ್ತಿರುವದನ್ನು ಗಮನಿಸಿದ ವೈದ್ಯರು ಹೆರಿಗೆ ನಂತರ, ನವಜಾತ ಶಿಶುವಿನ ಹೊಟ್ಟೆಯೊಳಗೆ ಬೆಳೆಯುತ್ತಿದ್ದ ಭ್ರೂಣವನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಚಿಕ್ಕಮಕ್ಕಳ ಶಸ್ತ್ರಚಿಕಿತ್ಸಕರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಚಂದಗಡದ 7 ತಿಂಗಳ ಗರ್ಭಿಣಿ ಮಹಿಳೆಯೋರ್ವಳನ್ನು ಗಡಹಿಂಗ್ಲಜನ ಡಾ. ಸಂಜಯ ಶಾನಬಾಗ ಅವರು ತಪಾಸಣೆಗೊಳ್ಪಡಿಸಿದಾಗ ಮೊದಲು ಚೀಲದಂತೆ ಕಂಡಿತು. ನಂತರ ಸಮಗ್ರವಾಗಿ ತಪಾಸಿಸಿದಾಗ ಭ್ರೂಣದೊಳಗೆ …
Read More »ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪುತ್ರ ಮೃಣಾಲ ಬರ್ತ್ ಡೇ ವಿಶ್ ಮಾಡಿದ್ದು ಹೀಗೆ…..!!!!
ಬೆಳಗಾವಿ- ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನುಮದಿನ ಅಭಿಮಾನಿಗಳು,ಬೆಂಬಲಿಗರು ಹಿತೈಷಿಗಳು, ಹಾಗು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಬ್ಬಾಳಕರ್ ನಿವಾಸಕ್ಕೆ ತೆರಳಿ ಜನುಮದಿನದ ಶುಭಾಶಯ ಕೋರುತ್ತಿದ್ದು ಹೆಬ್ಬಾಳಕರ್ ಪುತ್ರ ಮೃಣಾಲ ತಾಯಿಗೆ ಅಮ್ಮ ನೀನೇ ನನ್ನ ಜಗತ್ತು ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಬರ್ತ್ ಡೇ ವಿಶ್ ಎಲ್ಲರ ಗಮನ ಸೆಳೆಯುತ್ತಿದೆ. ಅವ್ವ ನೀನೇ ನನ್ನ ಶಕ್ತಿ,ನೀನೇ ನನಗೆ ಪ್ರೇರಣೆ,ನಿನ್ನ ಆಶೀರ್ವಾದವೇ ನನಗೆ ಶ್ರೀರಕ್ಷೆ,ನೀನೇ ನನ್ನ ಜಗತ್ತು …
Read More »ಬೆಳಗಾವಿ ಜಿಲ್ಲೆಯ ವೀರ ಯೋಧ ನಿಧನ
ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಿಧನರಾದರು. ನಮ್ಮ ಹೆಮ್ಮೆಯ ವೀರ ಯೋಧ ದೇಶದ ರಕ್ಷಣೆಗಾಗಿ ಅವರು ಸಲ್ಲಿಸಿದ ಸೇವೆ ಎಂದೆಂದಿಗೂ ಅಮರ. ಕಲ್ಲೋಳಿ ಪಟ್ಟಣದಲ್ಲಿ 2000 ನೇ ಇಸ್ವಿಯಲ್ಲಿ ಜನಿಸಿದ ಪ್ರವೀಣ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಕಲ್ಲೋಳಿ, ಖನಗಾಂವ ಗ್ರಾಮದಲ್ಲಿ ಮುಗಿಸಿ,ಪಿಯುಸಿ,ಪದವಿ ಶಿಕ್ಷಣವನ್ನು ಗೋಕಾಕದಲ್ಲಿ ಮುಗಿಸಿದರು. ಫೇ 12,2020 ರಲ್ಲಿ …
Read More »ಭೀಮಗಡ ಅಭಯಾರಣ್ಯದಲ್ಲಿ ಸಫಾರಿ ಯೋಜನೆ ಕೈಬಿಡಲು ಒತ್ತಾಯ
ಬೆಳಗಾವಿ-ರಾಜ್ಯಸರ್ಕಾರ ಖಾನಾಪುರ ತಾಲೂಕಿನ ಭೀಮಗಡ ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ವನ್ಯಜೀವಿ, ಪರಿಸರ ಅಭಿವೃದ್ಧಿ ವೇದಿಕೆ ಪದಾಧಕಾರಿಗಳು ಗುರುವಾರ ಬೆಳಗಾವಿ ಪ್ರಾದೇಶಿಕ ಆಯುಕ್ತರು ಮತ್ತು ಉಪ ಅರಣ್ಯಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಖಾನಾಪುರ ತಾಲೂಕಿನ ಭೀಮಗಡ ಅಭಿಯಾರಣ್ಯದಲ್ಲಿ ಸಫಾರಿ ಯೋಜನೆ ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ಭೀಮಗಡ ವನ್ಯಜೀವಿ ಅಭಯಾರಣ್ಯದಲ್ಲಿ 18 ಕಿ.ಮೀ. ಸಫಾರಿಗಾಗಿ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವರ್ಕ್ ಫ್ರಾಮ್ ಹೋಮ್….!!!
ಬೆಳಗಾವಿ- ರಸ್ತೆ ಅಪಘಾತದದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಚವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಇಲಾಖೆಯ ಕಾರ್ಯವೈಖರಿಯನ್ನು ಆನ್ ಲೈನ್ ಮೂಲಕ ಪರಶೀಲಿಸುತ್ತಿದ್ದು ವರ್ಕ್ ಫ್ರಾಮ್ ಹೋಮ್ ಸಿಸ್ಟಮ್ ಅನುಸರಿಸುತ್ತಿದ್ದಾರೆ. ಸೋಮವಾರ,ಸಿಎಂ ಸಿದ್ರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ನಡೆದ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರುಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು……!!!
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಂದು ಕಡೆ ಅಧಿಕಾರಿಗಳ ನಡುವೆ ತಿಕ್ಕಾಟ ಇನ್ನೊಂದು ಕಡೆ ಪಾಲಿಕೆ ಆಯುಕ್ತರನ್ನೇ ವರ್ಗಾವಣೆ ಮಾಡುವಂತೆ ಪಾಲಿಕೆ ಸಿಬ್ಬಂದಿಗಳ ಸಂಘ ಪಟ್ಟು ಹಿಡಿದ ಬೆನ್ನಲ್ಲಿಯೇ ಇಂದು ಇಬ್ಬರು ಪಾಲಿಕೆ ಸದಸ್ಯರ ಸದಸ್ಯತ್ವ ರದ್ದಾಗಿದೆ. ಬೆಳಗಾವಿ-ಬೆಳಗಾವಿ ನಗರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ತಿನಿಸುಕಟ್ಟೆ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ತಮ್ಮ ಕುಟುಂಬದವರಿಗೆ ಮಳಿಗೆಗಳನ್ನು ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಇಬ್ಬರು …
Read More »ಬೆಳಗಾವಿಯಲ್ಲಿ ವ್ಯಕ್ತಿಯೋರ್ವನ ಕೊಲೆ
ಬೆಳಗಾವಿ-ಇಲ್ಲಿನ ರಾಮತೀರ್ಥ ನಗರದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಪ್ರಕರಣ ಸಂಬಂಧ ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕೋಡಿ ತಾಲೂಕಿನ ಅಮಿತ ರಾಯಬಾಗ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಪತ್ನಿ, ಇಬ್ಬರು ಮಕ್ಕಳೊಂದಿಗೆ ರಾಮತೀರ್ಥ ನಗರದಲ್ಲಿ ವಾಸವಾಗಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಕತ್ತು ಹಿಸುಕು ಕೊಲೆ ಮಾಡಲಾಗಿದೆ. ಪತಿ ನಿತ್ಯ ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದರಿಂದ ಪತ್ನಿಯೇ ಕೊಲೆ ಮಾಡಿರಬಹುದು ಎಂದು …
Read More »ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು
ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ ನಿವಾಸಿ ಡ್ರೈವರ್ ಸಾಗರ್(55), ಗಣೇಶಪುರ ನಿವಾಸಿ ನೀತಾ ಪಾಟೀಲ್(50) ಮೃತರ ಗುರುತು ಪತ್ತೆಯಾಗಿದ್ದು ಉಳಿದವರ ಗುರುತು ಪತ್ತೆ ಹೆಚ್ಚುತ್ತಿದ್ದಾರೆ ಮಹಾ ಕುಂಭ ಮೇಳಕ್ಕೆ ಹೋಗಿ ವಾಪಾಸ್ ಆಗ್ತಿದ್ದ ಭಕ್ತರ ವಾಹನ ಅಪಘಾತಕ್ಕೀಡಾಗಿದೆ. ಬೆಳಗಾವಿಯ ನಾಲ್ವರ ದುರ್ಮರಣ ಹೊಂದಿದ್ದಾರೆ.ಇಬ್ಬರು ಸ್ಥಳೀಯ ಇಂದೋರ್ ನಿವಾಸಿಗಳು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ …
Read More »ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!
ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ನಾಟಿ ವೈದ್ಯ ನೀಡಿದ ಚಿಕಿತ್ಸೆಯ ಕುರಿತು ಸದನದಲ್ಲೂ ಮಾತಾಡಿದ್ದಾರೆ. ಇವರ ಚಿಕತ್ಸೆಯ ಚಮತ್ಕಾರ ನೋಡಿ ಕೇಂದ್ರ ಸರ್ಕಾರವೂ ಈ ನಾಟಿ ವೈದ್ಯರಿಂದ ಚಿಕಿತ್ಸಾ ವಿಧಾನದ ಬಗ್ಗೆ ICMR ಮೂಲಕ ವರದಿ ಪಡೆದಿದೆ. ಅನೇಕ ರೋಗಗಳಿಗೆ ಈ ನಾಟಿ ವೈದ್ಯರ ಬಳಿ ಔಷಧಿ ಇದೆ. ಇವರಿಂದ ಔಷಧಿ ಪಡೆದ ಸಾವಿರಾರು …
Read More »