Breaking News
Home / LOCAL NEWS (page 2)

LOCAL NEWS

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಕಿತಾಪತಿ,ಕಾಂಗ್ರೆಸ್ ಬಿಜೆಪಿಗೆ ಕಿರಿಕಿರಿ…..!!

ಬೆಳಗಾವಿ-ಚುನಾವಣೆ ಬಂದಾಗ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ,ರಾಜಕೀಯ ಬೇಳೆ ಬೇಯಿಸುತ್ತ ಬಂದಿರುವ ನಾಡದ್ರೋಹಿ ಎಂಇಎಸ್ ನಾಯಕರು ಈಗ ಮತ್ತೆ ಬಾಲ ಬಿಚ್ಚಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಸ್ಪರ್ದೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ಸೇರಿದ ಎಂಇಎಸ್ ನಾಯಕರು ಸಂಘಟನೆಯ ಅಸ್ತಿತ್ವಕ್ಕೆ ಲೋಕಸಭೆ ಚುನಾವಣೆಗೆ ನಿಲ್ಲಬೇಕು.ಈ ಬಾರಿ ಎಂಇಎಸ್ ಅಭ್ಯರ್ಥಿಯನ್ನು ಬೆಳಗಾವಿ ಮತ್ತು ಕಾರವಾರ ಎರಡೂ ಕ್ಷೇತ್ರಗಳಿಂದ ಕಣಕ್ಕಿಳಿಸಬೇಕು ಎಂದು ಎಂಇಎಸ್ …

Read More »

ಬೆಳಗಾವಿಯಿಂದ ಬಹುತೇಕ ಇವರೇ ಫೈನಲ್ ಆಗುವ ಸಾಧ್ಯತೆ….

ಬೆಳಗಾವಿ-ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.ಉಳಿದ ಇಪ್ಪತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ,ಐದು ಸೀಟುಗಳು ಘೋಷಣೆ ಆಗಬೇಕಿವೆ,ಈ ಐದು ಸೀಟುಗಳಲ್ಲಿ ಬೆಳಗಾವಿ ಮತ್ತು ಉತ್ತರ ಕನ್ನಡ (ಕಾರವಾರ) ಕ್ಷೇತ್ರಗಳು ಇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ಮಂಗಲಾ ಅಂಗಡಿ ಬದಲು ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಸ್ವತಃ ಮಂಗಲಾ ಅಂಗಡಿ ಅವರೇ ಮಾಹಿತಿ ನೀಡಿದ್ದರು,ಇದಾದ …

Read More »

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!!

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ …

Read More »

ಈ ಹುಡುಗಿ ನಮ್ಮ ಕ್ರಾಂತಿಯ ನೆಲದವಳು..ಇವಳು ನಮ್ಮವಳು…!!

    ಬೆಳಗಾವಿ: ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಚೆನ್ನಮ್ಮನ ನಾಡು‌ ಬೈಲಹೊಂಗಲ. ಕ್ರಾಂತಿಗೆ ಹೆಸರಾದ ಈ ನಾಡು ಅನೇಕ ಶೂರ, ಧೀರರನ್ನು ನಾಡಿಗೆ ಕೊಟ್ಟಿದೆ. ಮಹಿಳಾ ಐಪಿಎಲ್ ನಲ್ಲಿ‌ ಮಿಂಚಿದ ಶ್ರೇಯಾಂಕಾ ಪಾಟೀಲ್ ಕೂಡ ಇದೇ ನಾಡಿನ ಮೊಮ್ಮಗಳು. ಹಾಗಾಗಿ, ಇಲ್ಲಿನ ಜನ ಮತ್ತಷ್ಟು ಅಭಿಮಾನ ಪಡುತ್ತಿದ್ದಾರೆ. ಇತ್ತಿಚೆಗಷ್ಟೇ ಮುಕ್ತಾಯವಾದ ಮಹಿಳಾ ಐಪಿಎಲ್ ನಲ್ಲಿ ಬೆಂಗಳೂರು …

Read More »

ಸಾಂಬ್ರಾ ವಿಮಾನ ‌ನಿಲ್ದಾಣದಲ್ಲಿ ಒಂದೂವರೆ ಲಕ್ಷ ‌ಹಣ ಸೀಜ್!

ಬೆಳಗಾವಿ- ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದೂವರೆ ಲಕ್ಷ ರೂ ಹಣವನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೀಜ್ ಮಾಡಿಲಾಗಿದೆ. ಏರ್ಪೋರ್ಟ್ ಸಿಬ್ಬಂದಿ ತಪಾಸಣೆ ವೇಳೆ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಳಿಕ ಏರ್ಪೋರ್ಟ್ ಸಿಬ್ಬಂದಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚುನಾವಣೆ ಸಿಬ್ಬಂದಿಯ ಪರಿಶೀಲನೆ ವೇಳೆ ಎರಡು ಲಕ್ಷ ಹಣ ಸಾಗಿಸುತ್ತಿರುವುದು ದೃಢವಾಗಿದೆ. ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗುತ್ತಿದ್ದ ಜಸ್ವಿರ್ ಸಿಂಗ್ 2ಲಕ್ಷ ಹಣ ಸಾಗಿಸುತ್ತಿದ್ದರು. …

Read More »

ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು,.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಹೊರಬಿತ್ತು ಸುತ್ತೋಲೆ…

ಬೆಳಗಾವಿ- ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಡವಟ್ಟಾಗಿದೆ.ಪ್ರಾಮಾಣಿಕ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರವನ್ನು ದೃಡಪಡಿಸಿ, ಪರೀಕ್ಷೆಯನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ. ಬಿಕಾಂ ಪದವಿಯ ಐದನೇಯ ಸೆಮಿಸ್ಟರ್ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಪರೀಕ್ಷೆಯನ್ನು ರದ್ದು ಪಡಿಸಿ,ವಿಶ್ವವಿದ್ಯಾಲಯದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

Read More »

ಬೆಳಗಾವಿ; ಬಿಜೆಪಿ ಪಟ್ಟಿಯಲ್ಲಿ ಯಾರ ಹೆಸರು ಗಟ್ಟಿ….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರಾಗ್ತಾರೆ ? ಇಂದು ಬಿಡುಗಡೆಯಾಗುವ ಬಿಜೆಪಿಯ ಅಂತಿಮ ಪಟ್ಟಿಯಲ್ಲಿ ಯಾರ ಹೆಸರು ಗಟ್ಟಿಯಾಗಿ ಉಳಿದುಕೊಳ್ಳುತ್ತದೆ ಎನ್ನುವ ವಿಚಾರವನ್ನು ತಿಳಿದುಕೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಈ ಕ್ಷಣದವರೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗ್ತಾರೆ,ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಹಾಲಿ ಸಂಸದೆ ಮಂಗಲಾ ಅಂಗಡಿಯವರು ಈ ವಿಚಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಕೆಲವು ಜನ ಬಿಜೆಪಿ ನಾಯಕರು ಜಗದೀಶ್ …

Read More »

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್…

ದೆಹಲಿ, ಮಾರ್ಚ್‌ 21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಅರೆಸ್ಟ್‌ ಮಾಡಲಾಗಿದೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ …

Read More »

ಬೆಳಗಾವಿ,ಚಿಕ್ಕೋಡಿ, ಕಾಂಗ್ರೆಸ್ ಪಕ್ಷದ ಇಬ್ಬರೂ, ಅಭ್ಯರ್ಥಿಗಳು ಡಿಗ್ರಿ ಹೋಲ್ಡರ್ಸ್…!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃನಾಲ ಹೆಬ್ಬಾಳಕರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇಬ್ಬರೂ ಮಂತ್ರಿ ಮಕ್ಕಳು,ಪದವೀಧರರು,ಕೋಟ್ಯಾಧೀಶರು ಎನ್ನುವದು ವಿಶೇಷ,ವಿಭಿನ್ನ ಮತ್ತು ವಿಶಿಷ್ಠವಾಗಿದೆ. ಬೆಳಗಾವಿ ಅಭ್ಯರ್ಥಿ ಮೃನಾಲ ಸಿವ್ಹಿಲ್ ಇಂಜಿನಿಯರ್ ,ಚಿಕ್ಕೋಡಿ ಅಭ್ಯರ್ಥಿ,ಪ್ರಿಯಾಂಕಾ MBA ಪದವೀಧರರು ಈ ಇಬ್ಬರೂ ಅಭ್ಯರ್ಥಿಗಳು ಹಲವಾರು ಕಂಪನಿಗಳ ಪಾಲುದಾರರು,ಕೆಲವು ಕಂಪನಿಗಳ ಮಾಲೀಕರು ಜೊತೆಗೆ ಇಬ್ಬರೂ ಕೋಟ್ಯಾಧೀಶರಾಗಿದ್ದಾರೆ.ಇವರಿಬ್ಬರೂ ಪೋಷಕರ ಗರಡಿಯಲ್ಲಿ ಪಳಗಿದವರಾಗಿದ್ದು ಫೌಂಡೇಶನ್ ಮುಖಾಂತರ ಅನೇಕ ಸಮಾಜಿಕ,ಧಾರ್ಮಿಕ,ಮತ್ತು …

Read More »

ಟಿಕೆಟ್ ಯಾರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇವೆ- ಬಾಲಚಂದ್ರ

ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕಲ್ಲೋಳಿ ಸೌಹಾರ್ದ …

Read More »