Breaking News
Home / LOCAL NEWS (page 25)

LOCAL NEWS

ರಾಹುಲ್, ಮೃಣಾಲ್‌ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ.

ಬೆಳಗಾವಿ- ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಇವತ್ತು ಅನೇಕ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದು,ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳಕರ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಹಂತದಲ್ಲಿ ತಯಾರಿ ನಡೆಯುತ್ತಿದೆ. ಅಭ್ಯರ್ಥಿ ಗಳನ್ನ ಗುರುತಿಸುವ ಕಾರ್ಯ ಆಗಬೇಕಿದೆ.ಚಳಿಗಾಲದ ಅಧಿವೇಶನದ ಸಂಧರ್ಭದಲ್ಲಿ ಸಭೆ ಮಾಡಿ ತೀರ್ಮಾನ ಮಾಡ್ತಿವಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ …

Read More »

ಯುವಕನ ಮರ್ಡರ್ ಗೋಕಾಕ್ ನಲ್ಲಿ ಕಲ್ಲು ತೂರಾಟ,ಬೈಕ್ ಜಖಂ..

ಬೆಳಗಾವಿ-ಗೋಕಾಕ ನಗರದಲ್ಲಿ ಹಳೇ ವೈಷ್ಯಮಕ್ಕೆ ರಾತ್ರಿ ಯುವಕನ ಬರ್ಬರ ಹತ್ಯೆಯಾಗಿದ್ದು ಗೋಕಾಕಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯುವಕನ ಕೊಲೆಯಾಗುತ್ತಿದ್ದಂತೆಯೇ,ಆರೋಪಿ ಮನೆ ಮೇಲೆ ಉದ್ವಿಗ್ನರಿಂದ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ತ್ವೇಷಮಯ ವಾತಾವರಣ ನಿರಗಮಾಣವಾಗಿದೆ.ಬೆಳಗಾವಿ ಜಿಲ್ಲೆಯ ಗೋಕಾಕಿನ ಆದಿಜಾಂಬವ ನಗರದಲ್ಲಿ ಈ ಘಟನೆ ನಡೆದದೆ. ಪೆಟ್ರೊಲ್ ಬಂಕ್‌ನಲ್ಲಿ ಕೆಲಸ ಮಾಡ್ತಿದ್ದ ಶಾನೂರು ಪೂಜಾರಿ (27) ಕೊಲೆಯಾದ ದುರ್ದೈವಿಯಾಗಿದ್ದು,ಕೊಲೆ ಆಗ್ತಿದ್ದಂತೆ ಆರೋಪಿ ಮನೆಯ ಮೇಲೆ ಕಲ್ಲು ತೂರಿ ಗಲಾಟೆ ಮಾಡಿದ ಮತ್ತೊಂದು ಗುಂಪು, …

Read More »

ಪೋಟೋ ಎಡಿಟ್ ಮಾಡಿದ ಇಡೀಯಟ್ ಅರೆಸ್ಟ್….

ಬೆಳಗಾವಿ: ದೇಶಾಧ್ಯಂತ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಅವರ ಡೀಫ್ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಫ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಗೆಳತಿಯರ ಪೋಟೋಗಳನ್ನು ನಗ್ನ ಫೋಟೋ ಜೊತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಕಿರಾತಕ‌ನಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಾನಾಪುರದ ಮಂಥನ್ ಪಾಟೀಲ ಎಂಬ ಯುವಕ ಓರ್ವ ಯುವತಿಯನ್ನು …

Read More »

ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ.

ಬೆಳಗಾವಿ- ಕನ್ನಡದ ಮಠ ಎಂದೇ ಪ್ರಸಿದ್ದಿ ಪಡೆದಿರುವ ಬೆಳಗಾವಿ ಜಿಲ್ಲೆಯ ಚಿಂಚಣಿ ಮಠದ ಅಲ್ಲಮಪ್ರಭು ಶ್ರೀಗಳು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಚಿಂಚಣಿ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದು,ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಶ್ರೀಗಳು, ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ …

Read More »

ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ

ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ. ವಿ.‌ಪ್ರಭಾಕರ & ಗಿರೀಶ ಕೋಟೆ ಅವರಿಗೆ ಅಭಿಮಾನದ ಅಭಿವಂದನೆ ನೀಡಿ ಇಂದು ಸನ್ಮಾನಿಸಲಾಯಿತು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ …

Read More »

ರಾಜ್ಯ ಬಿಜೆಪಿಯಲ್ಲಿ ಹೊಸ ಹುರುಪು….!!

ಬೆಂಗಳೂರು- ಬಿಜೆಪಿ ದಿಟ್ಟ ನಿರ್ಧಾರ ಕೈಗೊಂಡಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಜನ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

Read More »

ನಡು ರಸ್ತೆಯಲ್ಲಿಯೇ ಯುವಕನ ಬರ್ಬರ ಕೊಲೆ

ಗೋಕಾಕ (ನವಂಬರ್.9): ಕಂಪನಿಯೊಂದರ ಕೆಲಸ ಮುಗಿಸಿಕೊಂಡು ವಾಪಸ್ ಬೈಕ್​​ನಲ್ಲಿ ಸಾಗುತ್ತಿದ್ದ ಯುವಕನೋರ್ವನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗೋಕಾಕ ತಾಲೂಕಿನ ಶಿವಾಪೂರ ಹೊರವಲಯ ಮಡ್ಡಿ ಸಿದ್ದಪ್ಪನ ದೇವಸ್ಥಾನದ ಸಮೀಪದ ನಿನ್ನೆ ರಾತ್ರಿ 8.30 ಗಂಟೆಗಳ ನಡೆದಿದೆ. ಶಿವಶಂಕರ ಶಿವಪುತ್ರ ಮಗದುಮ್ಮ ಸಾವಳಗಿ ನಿವಾಸಿ (35) ಮೃತ ಯುವಕ. ಮೃತನ ಕೊಲ್ಲಲು ಮೊದಲೇ ಹೊಂಚು ಹಾಕಿ ಕಾದು ಕುಳಿತ್ತಿದ್ದ ದುಷ್ಕರ್ಮಿಗಳು ಅವನ ಬೈಕ್​​ನಲ್ಲಿ ಬರುತ್ತಿದ್ದ …

Read More »

ಬೆಳಗಾವಿಯ ಆಟ….ಬೆಂಗಳೂರಲ್ಲಿ ಸ್ಪೋಟ, ಯಾರಿಗೆ ಕಾಟ,ಯಾರಿಗೆ ಪಾಠ..???

ಬೆಳಗಾವಿ- ಬೆಳಗಾವಿ ರಾಜಕರಣದ ವೈಶಿಷ್ಟ್ಯವೇ ಬೇರೆ,ಇಲ್ಲಿಯ ರಾಜಕಾರಣವನ್ನು ಯಾರಿಂದಲೂ ಅಳೆದು, ತೂಗಲು ಸಾಧ್ಯವೇ ಇಲ್ಲ.ಯಾಕಂದ್ರೆ ಇಲ್ಲಿ ನಡೆಯುವ ಪಾಲಿಟೀಕ್ಸ್ ಯಾರ ತಲೆಗೂ ಹತ್ತುವದಿಲ್ಲ.ಇದರ ಮರ್ಮ ಯಾರಿಗೂ ತಿಳಿಯುವದಿಲ್ಲ. ಈ ಹಿಂದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ವಿದೇಶ ಪ್ರವಾಸದಲ್ಲಿ ಇದ್ದಾಗ ಯಾರೂ ಉಹೆ ಮಾಡಲಾಗದ ರಾಜಕೀಯ ಬೆಳವಣಿಗೆಗಳು ನಡೆದು ಹೋದವು ಕುಮಾರಸ್ವಾಮಿ ವಿದೇಶದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ರಾಜಕೀಯ ಆಟ ಮುಗಿದು ಹೋಗಿತ್ತು.ತೋಳ ಬಂತಲೇ ತೋಳ ಎನ್ನುವ ಅಪಹಾಸ್ಯಕ್ಕೆ …

Read More »

ಸೀರೆ ಕದ್ದು, ಸಿಸಿ ಟಿವ್ಹಿಯಲ್ಲಿ ಕಂಡವರು ಶಿರಡಿಯಲ್ಲಿ ಬಲೆಗೆ ಬಿದ್ದರು..!!

ಬೆಳಗಾವಿ- ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಇತ್ತೀಚಿಗೆ ಬೆಳಗಾವಿಯ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದು ಪರಾರಿಯಾಗಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಬೆಳಗಾವಿಯ ಖಡೇಬಝಾರ್ ನಲ್ಲಿರುವ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ಸುಮಾರು ಎರಡು ಲಕ್ಷ ರೂ ಬೆಲೆಬಾಳುವ ಕಾಂಚಿವರಂ ಸೀರೆಗಳನ್ನು ಕದ್ದು ಪರಾರಿಯಾಗಿದ್ದರು. ಖಡೇಬಝಾರ್ ಠಾಣೆಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ,ಆಂದ್ರ ಪ್ರದೇಶದ ಗುಂಟೂರಿನ ಕಳ್ಳರ ಗ್ಯಾಂಗ್ ಪತ್ತೆ ಮಾಡಿ ಮಹಾರಾಷ್ಟ್ರದ …

Read More »

ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ರನ್ ವೇ….!!

ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -ಬೆಳಗಾವಿಯ ಸಾಂಬ್ರಾ ವಿಮಾನ‌ನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …

Read More »