LOCAL NEWS

ಮೃತ ಕಾರ್ಮಿಕನ ಕುಟುಂಬಕ್ಕೆ ದಾಖಲೆಯ ಪರಿಹಾರ…

ಬೆಳಗಾವಿ-ನಾವಗೆ ಅಗ್ನಿದುರಂತದಲ್ಲಿ ಮೃತ‌ಪಟ್ಟ ಕಾರ್ಮಿಕನ ಕುಟುಂಬಕ್ಕೆ 18 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಕಾರ್ಖಾನೆ ಅತ್ಯಧಿಕ ಪರಿಹಾರ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರ ಮದ್ಯಸ್ಥಿಕೆಯಿಂದಾಗಿ ಕಾರ್ಖಾನೆಯ ಮಾಲೀಕ ಮೃತ ಕಾರ್ಮಿಕನ ಕುಟುಂಬಕ್ಕೆ ಬರೊಬ್ವರಿ 18 ಲಕ್ಷ ರೂ ಪರಿಹಾರ ನೀಡಿದ್ದಾರೆ.ಕಾರ್ಖಾನೆ ಸುಟ್ಟು ಭಸ್ಮವಾಗಿ ಕಾರ್ಖಾನೆ ಮಾಲೀಕನಿಗೆ ಕೋಟಿ,ಕೋಟಿ ನಷ್ಟವಾಗಿದ್ದರೂ ಸಹ ಕಾರ್ಖಾನೆಯ ಮಾಲೀಕ ಕಾರ್ಖಾನೆಯ ಎಲ್ಲ ಕಾರ್ಮಿಕರಿಗೆ ಪ್ರಸಕ್ತ ತಿಂಗಳ ವೇತನವನ್ನೂ …

Read More »

ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ,ಬಾಲಚಂದ್ರ ಅಸಮಾಧಾನ

*ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರ ಸಂಜೆ ಇಲ್ಲಿನ ಪುರಸಭೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಡಿಎಸ್ಎಂಟಿ ಯೋಜನೆಯಡಿ ವಾಣಿಜ್ಯ ಮಳಿಗೆಯನ್ನು ಇಲ್ಲಿಯ ಬಾಜಿ ಮಾರ್ಕೆಟ್ ಬಳಿ ನಿರ್ಮಿಸಲಿದ್ದು, …

Read More »

PRESS ಲೇಬಲ್ ಹಚ್ಚಿ ರಾತ್ರಿಹೊತ್ತು ದೋಖಾ….!!

  ಕಾರಿನ ಮೇಲೆ PRESS ಎಂದು ಲೇಬಲ್ ಹಚ್ಚಿ ಬೆಳಗಾವಿ ನಗರದಲ್ಲಿ ರಾತ್ರಿಹೊತ್ತು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಈಗ ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದೆ. *ಮಾಳಮಾರುತಿ ಪೊಲೀಸರಿಂದ ಅಂತರ್ ರಾಜ್ಯ ಕಳ್ಳರ ಬಂಧನ ; 20 ಲಕ್ಷ ಮೌಲ್ಯದ ವಸ್ತುಗಳು ಜಪ್ತು* ಬೆಳಗಾವಿ- ನಗರದಲ್ಲಿ ಇತ್ತೀಚಿಗೆ ಘಟಿಸುತ್ತಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಲು ನಗರದ ಎಲ್ಲ ಪಿಎಸ್ಐ ಪಿಎ ರವರಿಗೆ ಸೂಚಿಸಿದಂತೆ ಮಾಳ …

Read More »

ಕಾರ್ಮಿಕನ ದೇಹದ ಅವಶೇಷ,ಮಣ್ಣಿನ ಮಡಕೆಯಲ್ಲಿ ಹಸ್ತಾಂತರ….!!

ಬೆಳಗಾವಿಯ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾತಂತರ ಮಾಡಲಾಗಿದೆ.ಮಣ್ಣಿನ ಮಡಕೆಯನ್ನು ಮೃತ ಕಾರ್ಮಿಕನ ತಂದೆ ಕೈ ಚೀಲದಲ್ಲಿ ಹಾಕಿಕೊಂಡು ಹೋಗಿರುವ ದೃಶ್ಯವನ್ನು ಯಾರಿಂದಲೂ ನೋಡಲು, ಸಹಿಸಲು ಸಾಧ್ಯವಿಲ್ಲ. ಅಗ್ನಿ ದುರಂತ: ಮೃತ‌ ಕಾರ್ಮಿಕನ‌ ದೇಹದ ಅವಶೇಷ ಮಣ್ಣಿನ ಮಡಕೆಯಲ್ಲಿ ಕುಟುಂಬಕ್ಕೆ ಹಸ್ತಾಂತರ ಬೆಳಗಾವಿ, – ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಸಂಭವಿಸಿದ ಅಗ್ನಿ‌ ದುರಂತದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ …

Read More »

ಸರ್ವೇ ಮಾಡ್ರಿ…..ಪರಿಹಾರ ಕೊಡ್ರಿ…..!!

ಗೋಕಾಕ: ಪಶ್ಚಿಮ ಘಟ್ಟ ಹಾಗೂ ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಘಟಪ್ರಭಾ ನದಿ ತೀರದಲ್ಲಿ ಪ್ರವಾಹವುಂಟಾಗಿದೆ. ಇದರಿಂದ ರೈತರ ಬೆಳೆಗಳು ಭಾಗಶ: ಹಾನಿಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಬೆಳೆಗಳು ಮತ್ತು ಹಾನಿಗೊಳಗಾದ ಮನೆಗಳ ಸಮೀಕ್ಷಾ ಕಾರ್ಯವನ್ನು ಕೈಗೊಂಡು ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ತಾಲೂಕಿನ ಮೆಳವಂಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಭಾ ಗೃಹದಲ್ಲಿ ಆಯೋಜಿಸಿದ್ದ …

Read More »

ದೆಹಲಿಯಲ್ಲಿ ಬೆಳಗಾವಿ ವಿಕಾಸ ಯಾತ್ರೆ , ಶೆಟ್ಟರ್ ಭೇಟಿ ಪರ್ವ….!!

  ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಬೆಳಗಾವಿ ಅಭಿವೃದ್ಧಿ ವಿಚಾರದಲ್ಲಿ ದೆಹಲಿಯಲ್ಲಿ ವಿಕಾಸ ಯಾತ್ರೆ ಮುಂದುವರೆಸಿದ್ದಾರೆ.ಬೆಳಗಾವಿ ಅನೇಕ ಯೋಜನೆಗಳ ಮಂಜೂರು ಮಾಡಲು ಆಗ್ರಹಿಸಿ ಸಂಬಂಧಿಸಿದ ಇಲಾಖಾ ಸಚಿವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ್ದಾರೆ. ಯಲ್ಲಮ್ಮನ ದೇವಸ್ಥಾನಕ್ಕೆ ಹೊಸ ರೈಲು ಮಾರ್ಗಕ್ಕೆ ಮನವಿ ವಿಶ್ವವಿಖ್ಯಾತ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನಿಡಲು ಅನುಕೂಲವಾಗುವ ನಿಟ್ಟಿನಲ್ಲಿ ಸವದತ್ತಿ ಪಟ್ಟಣಕ್ಕೆ ರೈಲು ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ …

Read More »

ಇಡೀ ರಾತ್ರಿ ಹೊತ್ತಿ ಉರಿದ ಕಾರ್ಖಾನೆಯಲ್ಲಿ ಇನ್ನೂವರೆಗೆ ಹೊಗೆ ಬರುತ್ತಿದೆ…..

  ಬೆಳಗಾವಿ- ನಿನ್ನೆ ರಾತ್ರಿ 8-30 ರ ಸುಮಾರಿಗೆ ಬೆಳಗಾವಿಯ ನಾವಗೆ ಗ್ರಾಮದ ಹದ್ದಿಯಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟನಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಹೊತ್ತಿದ ಬೆಂಕಿ ಇಡೀ ರಾತ್ರಿ ಹೊತ್ತಿ ಉರಿದು ಕಾರ್ಖಾನೆಯೇ ಸುಟ್ಟು ಭಸ್ಮವಾಗಿದೆ.ಇನ್ನುವರೆಗೆ ಬೆಂಕಿ ಸಂಪೂರ್ಣವಾಗಿ ಆರಿಲ್ಲ,ದೊಡ್ಡ ಪ್ರಮಾಣದ ಹೊಗೆ ಇನ್ನೂ ಬರುತ್ತಲೇ ಇದೆ.ಈ ಬೆಂಕಿ ಅವಘಡದಲ್ಲಿ ಕಾರ್ಮಿಕನೊಬ್ಬ ಬಲಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸ್ನೇಹಂ ಕಾರ್ಖಾನೆಯಲ್ಲಿ ಇಲೆಕ್ಟ್ರಿಕಲ್ ವೈರಿಂಗ್ ನಲ್ಲಿ ಬಳಕೆ ಮಾಡುವ ಪ್ಲಾಸ್ಟೀಕ್ ಟೇಪ್ ತಯಾರಿಸಲಾಗುತ್ತಿತ್ತು. …

Read More »

ಬಾಂಗ್ಲಾಂದಿಂದ ಬೆಳಗಾವಿ ತಲುಪಿದ ವಿಧ್ಯಾರ್ಥಿ

ಬೆಳಗಾವಿ- ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರ ಕಳಕಳಿ,ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರ ಪ್ರಯತ್ನ ಭಾರತ ಸರ್ಕಾರದ ಇಚ್ಛಾಶಕ್ತಿಯ ಪರಿಣಾಮವಾಗಿ ಬಾಂಗ್ಲಾ ದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿಯ ವಿಧ್ಯಾರ್ಥಿ ಬೆಳಗಾವಿಗೆ ಸುರಕ್ಷಿತವಾಗಿ ತಲುಪಿದ್ದಾನೆ. ಗಲಭೆ ಪೀಡಿತ ಬಾಂಗ್ಲಾದಿಂದ ಬಚಾವ್ ಆಗಿ ಬೆಳಗಾವಿಗೆ 25 ವೈದ್ಯಕೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದಾರೆ.ಬೆಳಗಾವಿ ಡಿಸಿ ಮಹ್ಮದ್ ರೋಷನ್, ಎಂಪಿ ಜಗದೀಶ್ ಶೆಟ್ಟರ್‌ ನೆರವಿನಿಂದ ಈ ವಿಧ್ಯಾರ್ಥಿಗಳ ಪ್ರಯಾಣ ಸೇಫ್ ಆಗಿದೆ.ಬಾಂಗ್ಲಾದಿಂದ ಬೆಳಗಾವಿಗೆ …

Read More »

ಅರಣ್ಯಪ್ರದೇಶ ಬಳಕೆಗೆ ಅನುಮತಿ ನೀಡುವಂತೆ ಮಂತ್ರಿಗೆ ಭೇಟಿ….

ಬೆಳಗಾವಿ-ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಹುಕ್ಕೇರಿ ತಾಲೂಕಿನಡಿ ಬರುವಂತಹ ಗ್ರಾಮಗಳಿಗೆ ಕುಡಿಯುವ ನೀರಿನ ಪುರೈಕೆ ಕುರಿತು ಅಂದಾಜು ರೂ 990 ಕೋಟಿ ವೆಚ್ಚದ ಘಟ್ಟಿಬಸವಣ್ಣ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ 6 ಟಿಎಂಸಿ ನೀರನ್ನು ಶೇಖರಿಸಲು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಅವಶ್ಯವೆನಿಸಿದ ಸುಮಾರು 575 ಹೆಕ್ಟೇರ್ ಅರಣ್ಯ ಪ್ರದೇಶದ ಬಳಕೆಯ ಅನುಮತಿಗೆ ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿದ ಪ್ರಸ್ತಾವನೆಗೆ ಕೂಡಲೆ ಅನುಮೋದನೆ ನೀಡುವ …

Read More »

ನಕಲಿ ಸರ್ಟಿಫಿಕೇಟ್ ಸಲ್ಲಿಸಿ ಟೆಂಡರ್ ,ಗುತ್ತಿಗೆದಾರ ಅಂಧರ್….!!

ಬೆಳಗಾವಿ, ಆ.06(ಕರ್ನಾಟಕ ವಾರ್ತೆ): ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಕಾಮಗಾರಿಯ ಟೆಂಡರನ್ನು ನಕಲಿ‌ ಜಾತಿ ಪ್ರಮಾಣಪತ್ರ ಸಲ್ಲಿಸಿ ಗುತ್ತಿಗೆ ಪಡೆದ ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ ವ್ಯಾಪ್ತಿಯ ರಾಯಬಾಗ ತಾಲೂಕಿನ ಅಲಖನೂರ ಮತ್ತು ಅಳಗವಾಡಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆಗಳಿಗೆ ನೀರಿನ ನಳ …

Read More »