Breaking News

LOCAL NEWS

ಕೋಯ್ನಾ ಡ್ಯಾಂ ತುಂಬಿಲ್ಲ,ನೀರು ಬಿಟ್ಟಿಲ್ಲ,ಪ್ರವಾಹದ ಆತಂಕವೂ ಇಲ್ಲ…..!

ಬೆಳಗಾವಿ- ಮಹಾರಾಷ್ಟ್ರದ ಕೋಯ್ನಾ ಡ್ಯಾಂ ಸಾಮರ್ಥ್ಯ ಇರೋದು 105 TMC ಇವತ್ತು ಶನಿವಾರ ಮಧ್ಯಾಹ್ನದ ವರೆಗೆ ಈ ಡ್ಯಾಂ ನಲ್ಲಿ ಕೇವಲ 71 TMC ಮಾತ್ರ ಭರ್ತಿಯಾಗಿದೆ.ಹೀಗಾಗಿ ಕೃಷ್ಣಾ ನದಿಗೆ ಪ್ರವಾಹ ಬರುವ ಸಾಧ್ಯತೆ ತೀರಾ ಕಡಿಮೆ. ಕೋಯ್ನಾ ಜಲಾಶಯ ಭರ್ತಿಯಾಗಲು ಇನ್ನೂ 34 TMC ನೀರು ಬೇಕು ,ಈ ಜಲಾಶಯ ತುಂಬಲು ಕೆಲವೇ TMC ನೀರು ಬೇಕಾಗಿರುವ ಸಂಧರ್ಭದಲ್ಲಿ ಈ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. …

Read More »

NDRF ತಂಡದ ಜೊತೆ ದೋಣಿ ವಿಹಾರ ಮಾಡಿದ ಸಾಹುಕಾರ್….!

ಬೆಳಗಾವಿ-ಪಕ್ಕದ ಮಹಾರಾಷ್ಟ್ರ ದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು,ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಇಂದು NDRF ತಂಡದೊಂದಿಗೆ ಕೃಷ್ಣಾ ನದಿಯಲ್ಲಿ ದೋಣಿ ವಿಹಾರ ಮಾಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ನೆರೆಯಿಂದ ಭಾದಿತವಾಗುವ ಪ್ರದೇಶಗಳಿಗೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು.ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಕೃಷ್ಣೆಗೆ ಈಗಾಗಲೇ ೧,೮೦ ಕ್ಯೂಸೇಕ್ ನೀರು ಬರ್ತಿದೆ, ಆಲಮಟ್ಟಿಯಿಂದ ಈಗಾಗಲೇ ೨.೨೦ ಕ್ಯೂಸೇಕ್ ನೀರು ಹೊರ …

Read More »

ಬೆಳಗಾವಿಯಲ್ಲಿ ಮತ್ತೊಂದು ಕೋವೀಡ್ ವ್ಯಾಕ್ಸೀನ್ ಟೆಸ್ಟೀಂಗ್…..

ಬೆಳಗಾವಿ- ಬೆಳಗಾವಿ ನಗರದ ಜೀವನ ರೇಖಾ ಆಸ್ಪತ್ರೆಯಲ್ಲಿ ಮತ್ತೊಂದು ಕೋವೀಡ್ ವ್ಯಾಕ್ಸೀನ್ ಪ್ರಯೋಗ ನಡೆಯುತ್ತಿದೆ. ಜೀವನ ರೇಖಾ ಆಸ್ಪತ್ರೆಯಲ್ಲಿ ಭಾರತ ಬಯೋಟೇಕ್ ಕೋ ವ್ಯಾಕ್ಸೀನ್ ಪ್ರಯೋಗ ನಡೆಯುತ್ತಿರುವ ಬೆನ್ನಲ್ಲಿಯೇ ಝೆಡೆಸ್ ಕೆಡೆಲಾ ಎಂಬ ಕೋವೀಡ್ ವ್ಯಾಕ್ಸೀನ್ ಬೆಳಗಾವಿಯ ಜೀವನ ರೇಖಾ ಆಸ್ಪತ್ರೆಯಲ್ಲೇ ಪ್ರಯೋಗಿಸಲಾಗುತ್ತಿದೆ ICMR ಮಾರ್ಗಸೂಚಿಯ ಪ್ರಕಾರ ಬೆಳಗಾವಿಯ ಜೀವನರೇಖಾ ಆಸ್ಪತ್ರೆಯಲ್ಲಿ ಝಡೆಸ್ ಕೆಡೆಲಾ ಎಂಬ ಕೋವೀಡ್ ವ್ಯಾಕ್ಸೀನ್ ನ್ನು 12,ರಿಂದ 60 ವರ್ಷದ ಒಳಗಿನ ಕೋವೀಡ್ ಸೊಂಕು ಇಲ್ಲದ …

Read More »

ಬೆಳಗಾವಿಯ ಆರ್.ಟಿ‌.ಓ ರಸ್ತೆ ಮೇಲೆ ಪಾರ್ಕಿಂಗ್ ಗೆ ಕಾಂಟೋನ್ಮೆಂಟ್ ಗುತ್ತಿಗೆ.

ಬೆಳಗಾವಿ- ವಾಹನಗಳ ಪಾರ್ಕಿಂಗ್ ಗೆ ಸ್ಥಳವಿಲ್ಲ,ಆದರೂ ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಮಾಡಲು ಬೆಳಗಾವಿಯ ಕಾಂಟೋನ್ಮೆಂಟ್ ಬೋರ್ಡ್ ಅನುಮತಿ ನೀಡಿದೆ. ಈ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರನನ್ನು ನೇಮಿಸಿ.ಯಾವ ವಾಹನಕ್ಕೆ ಎಷ್ಟು ಶುಲ್ಕ ಎನ್ನುವದರ ಬಗ್ಗೆ ಆರ್ ಟಿ ಓ ಕಚೇರಿಯ ಬಳಿ ಕಾಂಟೋನ್ಮೆಂಟ್ ಬೋರ್ಡ್ ದೊಡ್ಡ ಫಲಕ ಹಾಕಿದೆ. ರಸ್ತೆಯ ಇಕ್ಕೆಲುಗಳಲ್ಲಿ ವಾಹನಗಳು ಪಾರ್ಕಿಂಗ್ …

Read More »

ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ

ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ …

Read More »

ಮಹಾರಾಷ್ಟ್ರದ ಮೇಲೆ ನಿರಂತರ ನಿಗಾ ವಹಿಸಿ- ರಮೇಶ್ ಜಾರಕಿಹೊಳಿ

ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ ——————————————————— ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ ಬೆಳಗಾವಿ, : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ …

Read More »

ಮಲಪ್ರಭಾ ನವೀಲುತೀರ್ಥ ಜಲಾಶಯ ಭರ್ತಿ

ಬೆಳಗಾವಿ- ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ ಮುನವಳ್ಳಿ ನವಿಲು ತಿರ್ಥ ಜಲಾಶಯ ಭರ್ತಿಯಾಗಿದ್ದು ಯಾವುದೇ ಸಮಯದಲ್ಲಿ ಜಲಾಶಯದಿಂದ ನೀರು ಬಿಡುವ ಸಾಧ್ಯತೆ ಇದೆ. ಯಾವುದೆ ಕ್ಷಣದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಸಾಧ್ಯತೆ ಇರುವದರಿಂದ,ರಾಮದುರ್ಗ ತಾಲೂಕಿನ 20 ಹಳ್ಳಿಗಳು ಹಾಗು ಸವದತ್ತಿ ತಾಲೂಕಿನ 8 ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಿಸುತ್ತಿವೆ ಪ್ರವಾಹ ಭೀತಿ ಹಿನ್ನೆಲೆ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪುರಸಭೆ, …

Read More »

ದೇಶದ ಮೊದಲ ಕಿಸಾನ್ ರೈಲಿಗೆ,ಸುರೇಶ್ ಅಂಗಡಿ ಗ್ರೀನ್ ಸಿಗ್ನಲ್

  ಬೆಳಗಾವಿ,-: ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರುನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ನವದೆಹಲಿಯಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ತೋಮರ್ ಅವರು, ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ಬೆಳೆಗೆ ನ್ಯಾಯಯುತ ದರ ಒದಗಿಸಲು ಸಹಕಾರಿಯಾಗಲಿದೆ. …

Read More »

ಸೋಶಿಯಲ್ ಡ್ಯೂಟಿ ಗೂ ಸೈ…ಬತ್ತದ ನಾಟಿಗೂ ಸೈ…..!

ಬೆಳಗಾವಿ- ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿ,ಎಂಬಿಬಿಎಸ್ ಕಲಿತು,ಐಪಿಎಸ್ ಅಧಿಕಾರಿಯ ಸಂಗಾತಿಯಾಗಿ,ಈಗ ಎಂ ಎಲ್ ಎ ಆಗಿರುವ ಆ ಹೆಣ್ಣಿಗೆ ಸೊಕ್ಕು ಅನ್ನೋದೆ ಇಲ್ಲ,ಖಾನಾಪೂರ ಕ್ಷೇತ್ರದಲ್ಲಿ ಎಲ್ಲರ ಜೊತೆ ಬೆರೆತು,ಎಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಂಜಲಿತಾಯಿಯ ಸ್ಥಾನ ಪಡೆದುಕೊಂಡಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ಕೊರೋನಾ ಸೊಂಕಿತರು ಪತ್ತೆಯಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಿ ಕೊರೋನಾ ಮಹಾಮಾರಿಯ ವಿರುದ್ಧ ಸಮರ ಸಾರಿರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಜನರಲ್ಲಿ ಜನಜಾಗೃತಿ ಮೂಡಿಸುವ ಮೂಲಕ …

Read More »

ವ್ಯಾಪಕ ಮಳೆ: ನದಿತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

– “ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ” ಬೆಳಗಾವಿ, –ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿತೀರದ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ನಿಪ್ಪಾಣಿ ತಾಲ್ಲೂಕಿನ ಭಿವಸಿ, ಸಿದ್ನಾಳ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿದರು. ಈ …

Read More »