Breaking News
Home / LOCAL NEWS (page 60)

LOCAL NEWS

ಕ್ರಿಕೆಟ್ ವಿಶ್ವಕಪ್ ಎಲ್ಲಿ ಯಾವಾಗ ? ವೇಳಾಪಟ್ಟಿ ಪ್ರಕಟ

ICC World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್​ ವೇಳಾಪಟ್ಟಿ ಪ್ರಕಟ, ಆ ದಿನವೇ ಇಂಡೋ -ಪಾಕ್​ ಕದನ! ICC World Cup 2023 Schedule: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ನ (ODI World Cup 2023) ಸಂಪೂರ್ಣ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಡುಗಡೆ ಮಾಡಿದೆ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ನ (ODI World …

Read More »

ಬೆಳಗಾವಿಯಲ್ಲಿ ಆ್ಯಪಲ್ ಮೋಬೈಲ್ ,SFS ಘಟಕ ಸ್ಥಾಪಿಸಲು ಕಂಪನಿ ನಿರ್ಧಾರ..!!

*ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ: ಎಂ ಬಿ ಪಾಟೀಲ* ಬೆಂಗಳೂರು: ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ …

Read More »

ಬೆಳಗಾವಿಯ ಸರ್ದಾರ್ ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ಬಹುಮಾನ ಘೋಷಿಸಿದ ಶಾಸಕ ಸೇಠ..!!

ಸರ್ದಾರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ವಿಶೇಷ ಬಹುಮಾನ ಘೋಷಣೆ ಮಾಡಿದ ಶಾಸಕ ರಾಜು ಸೇಠ..! ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಸೇಠ ಅವರು ಬೆಳಗಾವಿಯ 150 ವರ್ಷಕ್ಕೂ ಹಳೆಯ ಸರದಾರ್ಸ್ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವ ಭರವಸೆ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ಘೋಷಣೆ ಮಾಡಿದ ಅವರು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ …

Read More »

ಬೆಳಗಾವಿ, ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತರ ದಾಳಿ

ಬೆಳಗಾವಿ-ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದ್ದು ಬೆಳಗಾವಿಯ ಭ್ರಷ್ಟ ಅಧಿಕಾರಿಗಳು ಇವತ್ತು ಬೆಳ್ಳಂ ಬೆಳಗ್ಗೆ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಹೆಸರಿಗೆ ತಕ್ಕಂತೆ ದಾಳಿಗೆ ತುತ್ತಾದ ಇಂಜಿನಿಯರ್ ಶೇಖರ್ ಬಹುರೂಪಿಯಾಗಿದ್ದಾರೆ, ಅವರು 2019ರಲ್ಲಿ ಅಥಣಿಯಲ್ಲಿ …

Read More »

ಬೆಳಗಾವಿಯಲ್ಲಿ ಸ್ಮಾರ್ಟಸಿಟಿ  ಸಂಭ್ರಮ ಮಾಡಿದ್ದು ಯಾತಕ್ಕೆ ಗೊತ್ತಾ..??

ಬೆಳಗಾವಿ, : ಸ್ಮಾರ್ಟಸಿಟಿ ಯೋಜನೆ ಪ್ರಾರಂಭವಾಗಿ 8 ವರ್ಷಗಳು ತುಂಬಿದ ಪ್ರಯುಕ್ತ ಬೆಳಗಾವಿ ಸ್ಮಾರ್ಟಸಿಟಿ ಕಛೇರಿಯಿಂದ 8 ನೇ ವರ್ಷಾಚರಣೆ ಕಾರ್ಯಕ್ರಮವನ್ನು ಮಂಗಳವಾರ(ಜೂ.27) ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆ 7 ಗಂಟೆಗೆ ಹನುಮಾನ ನಗರ ವೃತ್ತದಿಂದ ಜಿಎಸ್ ಟಿ ಆಫೀಸ್ ಮಾರ್ಗವಾಗಿ ಕ್ಲಬ್ ರಸ್ತೆ ಮೂಲಕ ರಾಣಿಚನ್ನಮ್ಮ ವೃತ್ತದವರೆಗೆ ಸೈಕ್ಲಿಂಗ್ ಮತ್ತು ವಾಕಿಂಗ್ ಮ್ಯಾರಥಾನ್ ಆಯೋಜಿಸಲಾಗಿತ್ತು. ಸಂಸದರಾದ ಮಂಗಲಾ ಅಂಗಡಿ, ಶಾಸಕ ಆಸಿಫ್ ಸೇಠ್, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಸ್ಮಾರ್ಟಸಿಟಿ …

Read More »

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ.

ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ.

Read More »

ಗೃಹಲಕ್ಷ್ಮೀ ಯೋಜನೆ, ಮೇಡಂ ಹೇಳಿದ್ದೇನು ಗೊತ್ತಾ..??

ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ,ಶುಭ ಮಂಗಳ. ವಾರ…!! ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವಂತ ಗೃಹ ಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವತ್ತಿನಿಂದ ಆರಂಭ? ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ …

Read More »

ಬೆಳಗಾವಿಗೆ ವಂದೇ ಮಾತರಂ ರೈಲು ತರಲು ಸಿಡಿದೆದ್ದ ಕರವೇ….!!

ಬೆಳಗಾವಿ- ಕೇಂದ್ರ ಸರ್ಕಾರದ ಯೋಜನೆಗಳು ಕೇವಲ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಿಗೆ ಸೀಮೀತವಾಗುತ್ತಿದ್ದು,ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ವಂದೇ ಮಾತರಂ ರೈಲನ್ನು ದಾರವಾಡದಿಂದ ಬೆಳಗಾವಿ ವರೆಗೂ ಓಡಿಸಲು ಕ್ರಮ ಕೈಗೊಳ್ಳಬೇಕೆಂದು ಕರವೇ ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಕಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳ ಹಂಚಿಕೆಯಲ್ಲಿ ವಿಮಾನ,ಹಾಗು ರೈಲು ಸೇವೆಗಳ …

Read More »

ಬಕ್ರೀದ್ ಹಬ್ಬ ಪ್ರಾಣಿ ಹತ್ಯೆ ಕುರಿತು, ಬೆಳಗಾವಿ ಡಿಸಿ ಖಡಕ್ ಎಚ್ಚರಿಕೆ..!!

ಬೆಳಗಾವಿ, ): ಇದೇ‌‌ ಜೂ.29 ರಂದು ಬಕ್ರೀದ್ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅನಧಿಕೃತವಾಗಿ ಪ್ರಾಣಿಗಳ ಹತ್ಯೆ ಅಥವಾ ಸಾಗಾಣಿಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬದ ಆಚರಣೆ ವೇಳೆ ಸರಕಾರದ ಮಾರ್ಗಸೂಚಿ ಮತ್ತು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಬಕ್ರೀದ್ ಸಂದರ್ಭದಲ್ಲಿ ‌ಅನಧಿಕೃತವಾಗಿ ಗೋವು ಹಾಗೂ ಒಂಟೆಗಳು ಸೇರಿದಂತೆ ಸಾಮೂಹಿಕ ಪ್ರಾಣಿಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯ …

Read More »