Breaking News
Home / Breaking News (page 117)

Breaking News

ಸಿನಿಮಾ ನೋಡಿ ಅದೇ ಮಾದರಿಯಲ್ಲಿ, ಮರ್ಡರ್ ಮಾಡಿದ ತ್ರೀ..ಇಡಿಯಟ್ಸ್…!!

ಬೆಳಗಾವಿ: ದೃಶ್ಯ ಸಿನೇಮಾ ನೋಡಿ ಅದೇ ಮಾದರಿಯಲ್ಲೇ ಹತ್ಯೆ ಮಾಡಿದರು, ಆ ಚಿತ್ರದಲ್ಲಿ ಹತ್ಯೆ ಮಾಡಿದವರು ಪೊಲೀಸರಿಂದ ತಪ್ಪಿಸಿಕೊಂಡಿದ್ದರು. ಆದರೆ, ಇಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ರಿಯಲ್ ಎಸ್ಟೇಟ್ ಏಜೆಂಟ್ ಸುಧೀರ ಕಾಂಬಳೆ ಹತ್ಯೆ ಪ್ರಕರಣವನ್ನು ಬೇಧಿಸಿದ್ದಾರೆ. ಸುಧೀರನ ಪಾಲಿಗೆ ಹೆಂಡತಿ, ಮಗಳು, ಮಗಳ ಪ್ರಿಯಕರನೇ ವಿಲನ್ ಆಗಿದ್ದರು ಎನ್ನುವ ವಿಚಾರ ತಿಳಿಯಲು ಬಹಳ ದಿನವೇನೂ ಹಿಡಯಲಿಲ್ಲ. ಸಿನಿಮಿಯ ರೀತಿಯಲ್ಲಿ ತನ್ನ ಗಂಡನನ್ನೇ ಮಗಳ ಪ್ರಿಯಕರನಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ …

Read More »

ಮೊದಲು ಕಬ್ಬಿನ ರೇಟ್ ಫಿಕ್ಸ್ ಮಾಡಿ ಆಮೇಲೆ, ಫ್ಯಾಕ್ಟರಿ ಚಾಲೂ ಮಾಡಿ…!!

ಬೆಳಗಾವಿ:ಪ್ರತಿ ಟನ್ ಕಬ್ಬಿಗೆ ರೂ. ೫೫೫೦ ಬೆಲೆ ನಿಗದಿಗೊಳಿಸಿದ ಬಳಿಕವೇ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿರೈತರು ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತ , ಸಕ್ಕರೆ ಸಂಸ್ಥೆಯ ಆಯುಕ್ತರ ನೇತೃತ್ವದಲ್ಲಿಎಲ್ಲ ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ರೈತ ಮುಖಂಡರ ಜೊತೆಗೆ ಸಭೆ ನಡೆಸಿ, ಕಬ್ಬಿನ ಬೆಲೆಯನ್ನು ನಿಗದಿಗೊಳಿಸಬೇಕು.ಬಳಿಕವಷ್ಟೇ ಕಾರ್ಖಾನೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದ …

Read More »

ಗೋವಾ ಸರ್ಕಾರದಿಂದ ಪರಿಷ್ಕೃತ ಆದೇಶ,ರಾತ್ರಿ ಹೊತ್ತು ಭಾರಿ ವಾಹನಗಳ ಪ್ರವೇಶಕ್ಕೆ ಅನುಮತಿ…!!

ಬೆಳಗಾವಿ- ಕಮರ್ಷಿಯಲ್ ವಾಹನಗಳಿಗೆ ಪ್ರವೇಶ ನಿರ್ಭಂಧಿಸಿ,ಟೀಕೆಗೆ ಗುರಿಯಾಗಿದ್ದ ಗೋವಾ ಸರ್ಕಾರ ಕೊನೆಗೂ ಬೆಳಗಾವಿ ಲಾರಿ ಮಾಲೀಕರ ಸಂಘದ ಮನವಿಗೆ ಸ್ಪಂದಿಸಿ ವಾಹನಗಳ ಪ್ರವೇಶ ನಿರ್ಭಂಧದ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಬೆಳಗಾವಿಯಿಂದ ಚೋರ್ಲಾ ಮಾರ್ಗವಾಗಿ ದಿನನಿತ್ಯ ನೂರಾರು ವಾಹನಗಳು ಗೋವಾ ಪ್ರವೇಶ ಮಾಡುತ್ತಿದ್ದವು ಆದ್ರೆ ಗೋವಾ ಉತ್ತರ ವಿಭಾಗದ ಜಿಲ್ಲಾಧಿಕಾರಿಗಳು ಭಾರಿ ವಾಹನಗಳ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದರು.ಹೀಗಾಗಿ ದಿನನಿತ್ಯ ನೂರಾರು ಲಾರಿಗಳನ್ನು ಗೋವಾದ ಕೇರಿ ಚೆಕ್ ಫೋಸ್ಟ್ ಬಳಿಯೇ …

Read More »

ಬೆಳಗಾವಿಯಲ್ಲಿ, ಬಾಲಕನ ರುಂಡ ಕತ್ತರಿಸಿದ ಕಿರಾತಕ ಸಿಕ್ಕಿಬಿದ್ದ….!

ಹನ್ನೊಂದು ವರ್ಷದ ಬಾಲಕನ ರುಂಡವಿಲ್ಲದ ಮೃತದೇಹ ಪತ್ತೆಯಾಗಿತ್ತು ಇದು ಯಾರ ಮೃತದೇಹ,ಈ ನೀಚ ಕೃತ್ಯವನ್ನು ಮಾಡಿದವರು ಯಾರು ಎಂದು ಪತ್ತೆ ಮಾಡುವುದು ಪೋಲೀಸರಗೆ ಸವಾಲಿನ ಕೆಲಸವಾಗಿತ್ತು, ಬಾಲಕನ ಕೈಗೆ ಸುತ್ತಿಕೊಂಡಿದ್ದ ಶಾಲೆಯ ಟೈ ಸುಳಿವು ಕೊಟ್ಟಿತ್ತು ಇದನ್ನು ಆಧರಿಸಿ ಪ್ರಕರಣದ ಬೆನ್ನಟ್ಟಿದ ಬೆಳಗಾವಿ ಜಿಲ್ಲೆಯ ಪೋಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹನ್ನೊಂದು ವರ್ಷದ ಬಾಲಕನನ್ನು ಹತ್ಯೆ ಮಾಡಿ,ರುಂಡವನ್ನು ಬೇರ್ಪಡಿಸಿ ಮೃತದೇಹವನ್ನು ಗೋಣಿ ಚೀಲದಲ್ಲಿ ಹಾಕಿ,ರುಂಡ,ಮತ್ತು ದೇಹವನ್ನು ಬೇರೆ,ಬೇರೆ ಸ್ಥಳಗಳಲ್ಲಿ ಸಾಗಿಸಿದ್ದ ಇಬ್ಬರು …

Read More »

ಅಪಘಾತ..ಅಪಘಾತ..ಅಪಘಾತ…ಆಘಾತ..ಆಘಾತ…!!

ಹುಕ್ಕೇರಿ: ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು ಬದುಕುಳಿಯಲಿಲ್ಲ. …

Read More »

ಹಿಂಡಲಗಾ ಜೈಲು ಸೇರಿದ,ಬೆಳಗಾವಿಯ PFI ಮುಖಂಡರು ಯಾರು ಗೊತ್ತಾ..??

ಬೆಳಗಾವಿ-ರಾಷ್ಟ್ರಾದ್ಯಂತ್ಯ ಪಿಎಫ್ಐ ಸಂಟನೆಯ ನಾಯಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮುಂದುವರೆದಿದ್ದು,ಬೆಳಗಾವಿಯಲ್ಲೂ ಪಿಎಫ್ಐ ಸಂಘಟನೆಗೆ ಲಗಾಮು ಹಾಕುವ ಕಾರ್ಯಾಚರಣೆ ನಡೆದಿದೆ‌. ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಬೆಳಗಾವಿಯ ಪಿಎಫ್ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ದಾಳಿ ಮಾಡಿರುವ ಪೋಲೀಸರು ಬೆಳಗಾವಿಯ ಒಟ್ಟು ಏಳು ಜನ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದು,ವಿಚಾರಣೆ ಮಾಡಿ ನಂತರ ಬಂಧಿಸಿ ಏಳು ಜನ ಪಿಎಫ್ಐ ಮುಖಂಡರನ್ನು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಬೆಳಗಾವಿಯ ಕಾಕತಿ …

Read More »

ಬೆಳ್ಳಂ ಬೆಳಗ್ಗೆ ಬೆಳಗಾವಿಯಲ್ಲಿ ರೇಡ್…ರೇಡ್…!!

ಬೆಳಗಾವಿ-ಬೆಳಗಾವಿಯಲ್ಲಿ ಐವರು ಪಿಎಫ್ಐ ಮುಖಂಡರನ್ಬು ಬೆಳಗಾವಿ ಪೊಲೀಸರು ವಶಕ್ಜೆ ಪಡೆದು ವಿಚಾರಣೆ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ 4 ಗಂಟೆಗೆ ಬೆಳಗಾವಿಯ ಹಿರಿಯ ಪೋಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ದಾಳಿ ನಡೆಸಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ‌.ಎಸಿಪಿ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ, ಮಾರ್ಕೆಟ್, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆ ಸಿಪಿಐಗಳ ಸಾಥ್ ನೀಡಿದ್ದಾರೆ.ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆಯಲಾಗಿರುವ …

Read More »

ಬೆಳಗಾವಿ ನಗರದಲ್ಲಿ ಯುವಕನಿಗೆ ಚೂರಿ ಇರಿತ…!!

ಬೆಳಗಾವಿ-ಬೆಳಗಾವಿ ನಗರದಲ್ಲಿ ಕ್ಯಾಂಪ್ ಮೂಲದ ಯುವಕನಿಗೆ ಅನಂತಶಯನ ಗಲ್ಲಿ ಹತ್ತಿರ ಚೂರಿ ಇರಿತವಾಗಿದ್ದು ಯುವಕ ಗಂಭೀರವಾಗಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳಗಾವಿ ನಗರದ ಅಂಬಾ ಭವನ ಹತ್ತಿರ ಬೈಕ್ ಮೇಲೆ ಮೂರು ಜನ ಯುವಕರು ಹೋಗುತ್ತಿರುವಾಗ, ಹತ್ತು ಜನ ಯುವಕರ ಗುಂಪು ಬೈಕ್ ಸವಾರರನ್ನು ತಡೆದು ಫರಾನ್ ಧಾರವಾಡಕರ ಎಂಬ 15 ವರ್ಷದ ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಫರಾನ್ ಧಾರವಾಡಕರ ಜೊತೆ ತೆರಳುತ್ತಿದ್ದ …

Read More »

ವಸತಿ ಶಾಲೆಯ ಅಡುಗೆ ಕೋಣೆಯಲ್ಲಿ, ಸಿಲೆಂಡರ್ ಸ್ಪೋಟ ತಪ್ಪಿದ ಅನಾಹುತ….!!.

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಧಾನ್ಯ, ಸಾಮಗ್ರಿ ಭಸ್ಮ : ನಗರದಲ್ಲಿ ಘಟನೆ ಗೋಕಾಕ ಸೆ 26 : ಇಲ್ಲಿನ ವಿವೇಕಾನಂದ ನಗರದಲ್ಲಿ ತಾಲೂಕಿನ ಗೋಡಚಿನಮಲ್ಕಿ ಗ್ರಾಮದದಿಂದ ಸ್ಥಳಾಂತರಗೊಂಡಿರುವ ಡಾ..ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸೋಮವಾರದಂದು ಬಿಸಿಯೂಟ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿರುವಾಗ ಸಿಲೆಂಡರ್ ಸ್ಫೋಟವಾಗಿ ಕೋಣೆಯ ಬಾಗಿಲು ಸುಟ್ಟು ಹೋಗಿದ್ದು,ಒಳಗೆ ಇರುವ ಬಿಸಿಯೂಟದ ಆಹಾರ ಧಾನ್ಯ ಮುಂತಾದ ಪರಿಕರಗಳಿಗೆ ಸುಟ್ಟಿವೆ. ಅಡುಗೆ ಮಾಡುತ್ತಿರುವಾಗ ಸಿಲೆಂಡರ್ ನಿಂದ ಭಾರಿ ಶಬ್ದ ಬಂದಾಗ ಅಡುಗೆಯವರು …

Read More »

ಚೋರ್ಲಾ ಘಾಟ್ ಮೂಲಕ ಗೋವಾ ರಾಜ್ಯಕ್ಕೆ ತೆರಳುವ ಲಾರಿಗಳಿಗೆ ತಡೆ

ಬೆಳಗಾವಿ- ಬೆಳಗಾವಿಯ ತರಕಾರಿ ಬೇಡ ಎಂದು ಗೋವಾ ಸಿಎಂ ಹೇಳಿಕೆ ನೀಡಿದ ಬೆನ್ನಲ್ಲಿಯೇ ಗೋವಾ ಸರ್ಕಾರ ಈಗ ಮತ್ತೊಂದು ಕಿರಿಕ್ ಮಾಡಿದೆ.ಭಾರಿ ವಾಹನ ಪ್ರವೇಶಕ್ಕೆ ಗೋವಾ ಸರ್ಕಾರ ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಚೋರ್ಲಾ ಘಾಟ್ ಮೂಲಕ ಗೋವಾ ರಾಜ್ಯಕ್ಕೆ ತೆರಳುವ ಲಾರಿಗಳಿಗೆ ತಡೆಯಲಾಗಿದೆ. ಭಾರಿ ಲಾರಿಗಳಿಂದ ಸಂಚಾರ ದಟ್ಟಣೆ ಆಗುತ್ತೆ ಎಂದು ಗೋವಾ ರಾಜ್ಯದಲ್ಲಿ ಭಾರಿ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ.ಉತ್ತರ ಗೋವಾ ಟ್ರಾಫಿಕ್ ಎಸ್‌ಪಿ ಮನವಿ ಮೇರೆಗೆ‌ ಉತ್ತರ …

Read More »