Home / Breaking News (page 128)

Breaking News

ಬೆಳಗಾವಿಯಲ್ಲಿ ಕೇವಲ 24 ಗಂಟೆಯಲ್ಲಿ ಗುಡ್ ಜಾಬ್….!!

24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ; ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, – ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ‌ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ …

Read More »

ಬೆಳಗಾವಿ ಡಿಸಿ ಆರ್ಡರ್ ಹತ್ತು ರೂ ಕ್ವಾಯಿನ್ ನಡೀತೈತಿ..

10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, – ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು‌ ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, …

Read More »

ಇಪ್ಪತ್ತು ಲಕ್ಷ ಬೇಡಿಕೆ ಇಟ್ಟು ಪೋಲೀಸರಿಂದ ಬೇಡಿ ಹಾಕಿಸಿಕೊಂಡರು.

ಐವರು ದರೋಡೆಕೋರರ ಬಂಧನ ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಣ್ಯ ಇಲಾಖೆ ನಿವೃತ್ತ ಅಧಿಕಾರಿಯ ವಾಹನವನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ನಾಲ್ಕು ಲಕ್ಷ ರೂಪಾಯಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಹಿರೇಬಾಗೇವಾಡಿ ಪೊಲೀಸರು ಐವರು ದರೋಡೆಕೋರರನ್ನು ಬಂಧಿಸಿದ್ದಾರೆ. ನಗರದ ಶಿವಾಜಿ ನಗರದ ಲಗಮಪ್ಪಾ ಮಲ್ಲಪ್ಪ ಕೊಳ್ಯಾನಾಯಿಕ (೩೦) ಮುತ್ಯಾನಟ್ಟಿ ಗ್ರಾಮದ ಪ್ರಕಾಶ ಅಲಿಯಾಸ್ ಪಿಕೆ ಗುಜ್ಜಪ್ಪಾ ಗೋರವ (೨೬), ಕಲ್ಲಪ್ಪ ಸಿದ್ರಾಯಿ ಹೊನ್ನಂಗಿ (೨೯), ವಿಶಾಲ ತಳವಾರ (೨೩) …

Read More »

ದಾನಶೂರ ಶಾಸಕರ, ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ..

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ …

Read More »

ಇಂದು ರಾತ್ರಿ ಬೆಳಗಾವಿ ತಲುಪಲಿವೆ ಶಿವಮೊಗ್ಗ, ಸಕ್ರೆಬೈಲ ಆನೆಗಳು…!!

ಬೆಳಗಾವಿ-ಕಳೆದ ಇಪ್ಪತ್ತು ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮನೆ ಮಾಡಿ ಹಾಯಾಗಿರುವ ಚಿರತೆ ಹಿಡಿಯುವ ವಿಚಾರ,ಅರಣ್ಯ ಇಲಾಖೆಗೆ ಸವಾಲಾಗಿದೆ.ನಿನ್ನೆ ಸೋಮವಾರ ಪೋಲೀಸ್ ಹಾಗೂ ಅರಣ್ಯ ಇಲಾಖೆಯ ಸರ್ಪಗಾವಲು ಭೇದಿಸಿ,ರಸ್ತೆ ಜಂಪ್ ಮಾಡಿ,ಗಾಲ್ಫ್ ಮೈದಾನ ಸೇರಿಕೊಂಡಿದ್ದ ಚಾಲಾಕಿ ಚಿರತೆ ಅರಣ್ಯ ಇಲಾಖೆಯ ಬಲೆಯಿಂದ ಜಸ್ಟ್ ಮಿಸ್ ಆಗಿತ್ತು. ಇವತ್ತು ಬೆಳ್ಗೆಯಿಂದಲೂ ಚಿರತೆ ಪತ್ತೆ ಕಾರ್ಯಾಚರಣೆ ಮುಂದುವರೆದಿದ್ದು ಗಾಲ್ಫ್ ಮೈದಾನ ರಕ್ಷಣಾ ಇಲಾಖೆಗೆ ಸೇರಿದ್ದರಿಂದ ಈ ಪ್ರದೇಶದಲ್ಲಿ ಬೆಂಗಳೂರಿನಿಂದ ತರಿಸಿದ ಹೈಟೆಕ್ ದ್ರೋಣ …

Read More »

ಬೆಳಗಾವಿಯಲ್ಲಿ ಕ್ವಾಡ್ ಕ್ಯಾಪ್ಟರ್ ಕ್ಯಾಮೆರಾ ಬಳಕೆಗೆ ಅನುಮತಿ ಅಡ್ಡಿ….!!

ಬೆಳಗಾವಿ-ಬೆಳಗಾವಿ: ಇಲ್ಲಿನ ಗಾಲ್ಫ್ ಮೈದಾನ ಕ್ಕೆನುಗ್ಗಿದ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಮಂಗಳವಾರವೂ ಕಾರ್ಯಾಚರಣೆ ಆರಂಭಿಸಿತು. ಇಬ್ಬರು ಶಾರ್ಪ್ ಶೂಟರ್ ಗಳು ಬಂದಿದ್ದಾರೆ. ಅಲ್ಲದೆ ಚಿರತೆಯ ಚಲನ-ವಲನ ಸೆರೆಹಿಡಿಯಕು ಕ್ವಾಡ್ ಕ್ಯಾಮೆರಾ ಬಳಸಲಾಗುತ್ತಿದೆ. ಆದರೆ, ಚಿರತೆ ನುಗ್ಗಿರುವುದು ರಕ್ಷಣಾ ಇಲಾಖೆ ಪ್ರದೇಶಕ್ಕೆ. ಇಲ್ಲಿ ಕ್ವಾಡ್ ಕ್ಯಾಪ್ಟರ್ ಕ್ಯಾಮರಾ ಬಳಸುವುದಕ್ಕೆ ರಕ್ಷಣಾ ಇಲಾಖೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಇದು ತಕ್ಷಣಕ್ಕೆ ಸಿಗುವುದು ಅನುಮಾನವಾಗಿದೆ.ಇದರಿಂದಲೂ ಕಾರ್ಯಾಚರಣೆಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಶಾಸಕ …

Read More »

ಗಣೇಶ ಮಂಟಪದಲ್ಲಿ ಯಾರ ಪೋಟೋ ಹಾಕಬೇಕು,ಆಮ್ ಆದ್ಮಿ ಪಕ್ಷ ಹೇಳಿದ್ದೇನು ಗೊತ್ತಾ..??

ಬೆಳಗಾವಿ ನಗರದಲ್ಲಿ ಚಿರತೆ ಕಳೆದ ಇಪ್ಪತ್ತು ದಿನಗಳಿಂದ ರಸ್ತೆ ಮೇಲೆ ಓಡಾಡಿ,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದ್ದು,ಕಾಟಾಚಾರದ ಚಿರತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜಕುಮಾರ ಟೋಪಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಅರಣ್ಯ ಸಚಿವರನ್ನು ಭೇಟಿಯಾಗಲು ಬಂದಿರಬಹುದು,ಅದರಲ್ಲಿ ತಪ್ಪೇನಿದೆ.ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಉಡಾಫೆಯ ಹೇಳಿಕೆ ನೀಡಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಚಿರತೆ ನುಗ್ಗಿ ನಗರದ ಜನತೆ ಭಯಭೀತರಾಗಿದ್ದು, ಚಿರತೆ ಹಿಡಿದು ಅದನ್ನು ಕಾಡಿಗೆ ಸ್ಥಳಾಂತರ ಮಾಡುವ ವಿಚಾರವನ್ನು …

Read More »

ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಭೇಟೆ ನಾಯಿಗಳಿಂದ, ಭೊವ್..ಭೊವ್…!!

ಬೆಳಗಾವಿ- ಬೆಳಗಾವಿಯಲ್ಲಿ ಇಂದು ಚಿರತೆ ಹಿಡಿಯಲು ನಡೆಸಿದ ಹಲವಾರು ಪ್ರಯತ್ನಗಳು ವ್ಯರ್ಥವಾದವು.ಸರಿಯಾದ ಪ್ಲ್ಯಾನ್ ಇಲ್ಲದೇ ಇರುವದರಿಂದ ಚಾಲಾಕಿ ಚಿರತೆ ಜಸ್ಟ್ ಮಿಸ್ ಆಯ್ರು.. ಬೆಳಗ್ಗೆ ಹಿಂಡಲಗಾ ರಸ್ತೆಯ ಮಹಾತ್ಮಾ ಗಾಂಧಿ ಸರ್ಕಲ್ ಬಳಿ ರಸ್ತೆಯಲ್ಲೇ ಕಾಣಿಸಿಕೊಂಡ ಚಿರತೆ,ಪಕ್ಕದಲ್ಲಿರುವ ಗಿಡಗಂಟೆಗಳಲ್ಲಿ ಅಡಗಿತು. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂಧಿಗಳು, ಮತ್ತು ಪೋಲೀಸರು ಧಾವಿಸಿ,ಕಾರ್ಯಾಚರಣೆ ಶುರು ಮಾಡಿದ್ರು,ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರು,ಅರಣ್ಯ ಇಲಾಖೆಯವರು ಕೂಗಾಡಿ,ಚೀರಾಡಿ ಸದ್ದು ಮಾಡಿದಾಗ ಎಲ್ಲರ ಕಣ್ಣೆದುರೇ ಚಿರತೆ ರಸ್ತೆ ಜಂಪ್ …

Read More »

ಚಿರತೆ ಭೀತಿ ಬೆಳಗಾವಿಗೆ ದೌಡಾಯಿಸಿದ ಫಾರೇಸ್ಟ್ ಮಿಮಿಸ್ಟರ್…!!

ಬೆಳಗಾವಿ: ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಭಯಭೀತರಾಗಿದ್ದು, ಅರಣ್ಯ ಸಚಿವರಾದ ಉಮೇಶ ಕತ್ತಿ ಅವರು, ಬೆಳಗಾವಿಗೆ ಧಾವಿಸಿದ್ದು, ಮಧ್ಯಾಹ್ನ 2 ಗಂಟೆಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಕಳೆದ ಎರಡು ವಾರಗಳಿಂದ ಚಿರತೆ ನಗರದ ಗಾಲ್ಫ್ ಮೈದಾನದಲ್ಲಿ ಮನೆ ಮಾಡಿಕೊಂಡಿದ್ದು, ಚಿರತೆ ವನಿತಾ ವಿದ್ಯಾಲಯಲ್ಲಿ ಕಾಣಿಸಿತ್ತು. ಹೀಗಾಗಿ ಅಧಿಕಾರಿಗಳು ಕಾರ್ಯಾಚರಣೆ …

Read More »

ಚಿರತೆ ಹಿಡಿಯಲು ಬೆಳಗಾವಿಗೆ ಬರಲಿವೆ ದಾಂಡೇಲ ಆನೆಗಳು…!!!

ಕಣ್ಣೆದುರಿಗೆ ಜಂಪ್ ಮಾಡಿದ ಚಿರತೆ ಬಲೆಗೆ ಬೀಳಲಿಲ್ಲ…!! ಬೆಳಗಾವಿ- ಒಂದು ಕಡೆ ಅರಣ್ಯ ಇಲಾಖೆಯ ಸಿಬ್ಬಂಧಿ,ಇನ್ಮೊಂದು ಕಡೆ,ಪೋಲೀಸರಿಂದ ಗಾಳಿಯಲ್ಲಿ ಫೈರಿಂಗ್,ಕೂಗಾಟ,ಚೀರಾಟದ ಕೂಗಾಟದ ನಡುವೆ ಬೆಳಗಾವಿಯ ಕ್ಲಬ್ ರಸ್ತೆಯ ವನಿತಾ ವಿದ್ಯಾಲಯದ ಹಿಂಬದಿಯಲ್ಲಿರುವ, ಗಿಡಗಂಟೆಗಳಿಂದ ಓಡಿ ಬಂದ ಚಿರತೆ,ಎಲ್ಲರ ಕಣ್ಣೆದುರೇ ರಸ್ತೆ ದಾಟಿ,ಜಂಪ್ ಮಾಡಿ, ಜಾಳಿಗೆ ಹರಿದು ಪಕ್ಕದ ಗಾಲ್ಫ್ ಮೈದಾನ ಸೇರಿಕೊಂಡಿದೆ ಚಾಲಾಕಿ ಚಿರತೆ. ಇಂದು ಬೆಳಗ್ಗೆ ಖಾಸಗಿ ಬಸ್ ಚಾಲಕನಿಗೆ, ಚಿರತೆ ಕಾಣಿಸಿಕೊಂಡ ಬಳಿಕ,ಅರಣ್ಯ ಇಲಾಖೆ ಮತ್ತು ಪೋಲೀಸ್ …

Read More »