Breaking News
Home / Breaking News (page 179)

Breaking News

ಅಯೂಬ್ ಖಾನ್ ವಿರುದ್ಧ ದೂರು ದಾಖಲಿಸಲು ಮನವಿ

ಅಥಣಿಯ ಜೈನ ಸಮಿತಿ ವತಿಯಿಂದ ಗೊಮಟೇಶ್ವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಅಯೂಬ್ ಖಾನ್ ವಿರುದ್ಧ ದೂರು ದಾಖಲಿಸಲು ಮನವಿ ಅಥಣಿ- ಜೈನ ಧರ್ಮ ಹಾಗೂ ಗೊಮಟೇಶ್ವರ ಮೂರ್ತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಆಯೂಬ್ ಖಾನ್ ಇತನ ಮೇಲೆ ಕಾನೂನು ಕ್ರಮ ಜರುಗಿಸುವ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಾಗೂ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಕಾನೂನು ಕ್ರಮ ಕೈಗೊಳ್ಳುವಂತೆ ಅಥಣಿಯ 1008 ಆದಿನಾಥ ದಿಗಂಬರ ಜೈನ …

Read More »

ಸ್ಮಾಯಿಲ್ ನಲ್ಲೇ ಸಿಗ್ನಲ್… ಗೋವಾದಲ್ಲಿ‌ ಕಮಾಲ್….!!!

ಪಣಜಿ-ಗೋವಾದಲ್ಲಿ ಇವತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಗೃಹ ಸಚಿವ ಅಮೀತ್ ಶಾ ಅವರನ್ನು ನಮಸ್ಕರಿಸಿದಾಗ ನಗುಮುಖದಿಂದಲೇ ಆತ್ಮೀಯವಾಗಿ ಮಾತನಾಡಿದ ಅಮೀತ್ ಶಾ ಸಾಹುಕಾರ್ ಗೆ ಮಂತ್ರಿಯಾಗುವ ಸಿಗ್ನಲ್ ಸ್ಮಾಯಿಲ್ ನಲ್ಲೇ ಕೊಟ್ಟಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಇಂದು ಗೋವಾದಲ್ಲಿ ರಮೇಶ ಜಾರಕಿಹೊಳಿ ಸ್ವಾಗತಿಸಿದ್ದಾರೆ. ಗೋವಾ ರಾಜ್ಯದ ಚುನಾವಣೆ ಪ್ರಚಾರಕ್ಕಾಗಿ ದೆಹಲಿಯಿಂದ ಆಗಮಿಸಿದರು. ಈ ವೇಳೆ ನಗುಮುಖದಿಂದಲೇ ಶಾ ರಮೇಶ ಜಾರಕಿಹೊಳಿ …

Read More »

ಹಿಜಾಬ್ ಕುರಿತು ನಾಳೆ ನಿರ್ಣಯ

ಬೆಂಗಳೂರು:  ಹಿಜಾಬ್ ವಿವಾದ ರಾಜ್ಯದಲ್ಕಿ ಭುಗಿಲೆದ್ದು ಸಿಎಂ ಬೊಮ್ಮಾಯಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು,ನಾಳೆ ಮಧ್ಯಾಹ್ನ ಹಿಜಾಬ್ ಕುರಿತು ಹೈಕೋರ್ಟ್ ನಿರ್ಣಯ ಹೊರಬೀಳಲಿದೆ. ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವಂತೆ ಕೋರಿರುವ ಅರ್ಜಿದಾರರ …

Read More »

Belagavi– ಬೆಳಗಾವಿಯಲ್ಲಿ ಒನಕೆ ಓಬವ್ವನ, ಸೈನ್ಯಕ್ಕೆ ಕರಾಟೆ ಟ್ರೇನಿಂಗ್…

ಓಬವ್ವ ಆತ್ಮ ರಕ್ಷಣಾ ಕಲೆ: ಕರಾಟೆ ತರಬೇತಿ ಕಾರ್ಯಕ್ರಮ ಬೆಳಗಾವಿ -ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವರಂತಹ ವೀರ ಮಹಿಳೆಯರ ಹಾಗೆ ಪ್ರತಿ ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆ ಕಲೆಯ ಜೊತೆಗೆ ಮಾದರಿ ವ್ಯಕ್ತಿಗಳಾಗಿ ದೇಶ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸ್ವಾವಲಂಬಿಯಾಗಿ ಬದುಕಲು ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣಾ ಕಲೆ ಅವಶ್ಯಕವಾಗಿದೆ ಎಂದು ಶಾಸಕ ಅನೀಲ ಬೆನಕೆ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ (ಫೆ.8) ನಡೆದ ಮೆಟ್ರಿಕ್ ನಂತರದ ಬಾಲಕಿಯರ …

Read More »

ಕಡಲ ತೀರದಲ್ಲಿ ಶಾಸಕ ಅಭಯ ಪಾಟೀಲ ರಣತಂತ್ರ…!!

ಪಣಜಿ : ಗೋವಾದಲ್ಲಿ ಮತ್ತೆ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುವುದು ಶತಸಿದ್ದ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ಪಣಜಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ವಿಚಾರ ಮುಂದಿಟ್ಟು ಮತಯಾಚನೆ ಮಾಡುತ್ತಿದೆ. ಗೋವಾ ಕನ್ನಡಿಗರ ಬೇಡಿಕೆಗೆ ಸ್ಪಂದನೆ ಮಾಡಲಾಗುವುದು. ಪಕ್ಷವು ನನಗೆ ದಕ್ಷಿಣ ಗೋವಾ ಉಸ್ತುವಾರಿ ವಹಿಸಿದ್ದು, ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಬಿಜೆಪಿಗೆ ಪೂರಕ ವಾತಾವರಣ ಇದೆ. …

Read More »

ನಮ್ಮ ಜಮೀನು ನಮಗೆ ಕೊಡ್ರಿ ಪಾ….!!!

ಬೆಳಗಾವಿ- ಬೆಳಗಾವಿಯಲ್ಲಿ 774 ಎಕರೆ ಕರ್ನಾಟಕ ಸರ್ಕಾರದ ಜಮೀನು ಡಿಫೆನ್ಸ್‌ ಕಬ್ಜಾದಲ್ಲಿದೆ.ಈ ಜಮೀನು ಮರಳಿ ಪಡೆದು ಇದೇ ಜಾಗದಲ್ಲಿ ಐಟಿ,ಬಿಟಿ ಪಾರ್ಕ್ ನಿರ್ಮಿಸುವಂತೆ, ಶಾಸಕ ಅಭಯ ಪಾಟೀಲ ಅವರು ಕಳೆದ ಒಂದು ದಶಕದಿಂದ ನಡೆಸಿದ ಹೋರಾಟಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸ್ಪಂದನೆ ಸಿಕ್ಕಿದೆ. ಶಾಸಕ ಅಭಯ ಪಾಟೀಲ ಅವರು ಬೆಳಗಾವಿಯಲ್ಲಿರುವ 774 ಎಕರೆ ಜಮೀನು ಮರಳಿಸುವಂತೆ,ವಿಧಾನಸಭೆಯ ಅಧಿವೇಶನದಲ್ಲಿ ಹತ್ತು ಹಲವು ಬಾರಿ ಒತ್ತಾಯ ಮಾಡಿದ್ದರು,ಮುಖ್ಯಮಂತ್ರಿಗಳು ಕೂಡಲೇ ದೆಹಲಿಗೆ ನಿಯೋಗ …

Read More »

ಬೆಳಗಾವಿ ಜಿಲ್ಲೆಗೆ ಸಿಹಿ ಸುದ್ದಿ….

ಬೆಳಗಾವಿ- ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ,ಬೆಳಗಾವಿಯಲ್ಲಿ ಕೊರೋನಾ ಮಹಾಮಾರಿಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಕಳೆದ ಒಂದು ವಾರದಿಂದ ಸಾವಿರಕ್ಕೆ ಸಮೀಪ ಮತ್ತು ಸಾವಿರಕ್ಕೂ ಹೆಚ್ಚು ಸೊಂಕಿತರು ಪತ್ತೆಯಾಗಿದ್ದರು ಆದ್ರೆ ಇವತ್ತು ಭಾನುವಾರದ ಹೆಲ್ತ್ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಿಹಿ ಸುದ್ದಿ ಕೊಟ್ಟಿದೆ. ಇವತ್ತು ಭಾನುವಾರ ಸೊಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು ಕೇವಲ 222 ಜನ ಸೊಂಕಿತರು ಮಾತ್ರ ಪತ್ತೆಯಾಗಿದ್ದಾರೆ. ಯಾವ ತಾಲ್ಲೂಕಿನಲ್ಲಿ ಎಷ್ಟು ಜನ ಸೊಂಕಿತರು ಪತ್ತೆಯಾಗಿದ್ದಾರೆ …

Read More »

ರವಿಕಿರಣ ಭಟ್ ಕಿಡ್ನ್ಯಾಪ್ ಕೇಸ್, ಮೂವರ ಅರೆಸ್ಟ್……

ಬೆಳಗಾವಿ- ಬೆಳಗಾವಿಯಲ್ಲಿ ಕ್ರಿಪ್ಟೋಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ,ಬೆಳಗಾವಿ ಪೋಲೀಸರು, ಮೂವರು ಪ್ರಮುಖ ಆರೋಪಿಗಳ ಬಂಧಿಸಿದ್ದಾರೆ. ಮತ್ತೋರ್ವ ಪ್ರಮುಖ ಆರೋಪಿ ಯೂನೂಸ್ ಖಾಜಿ ಎಂಬಾತ ತಲೆ ಮರಿಸಿಕೊಂಡಿದ್ದು ಆತನ ಪತ್ತೆಗೆ ಪೋಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳು ಪೋಲೀಸರ ಬಲೆಗೆ ಬಿದ್ದಿದ್ದಾರೆ. ಈಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸಾಂಗಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ ಶೆಟ್ಟಿ ಎಂಬಾತರನ್ನು ಮಹಾರಾಷ್ಟ್ರದ ಪೂನಾದಲ್ಲಿ ಬಂಧಿಸಲಾಗಿದೆ‌.ಬಿಟ್‌ಕಾಯಿನ್ …

Read More »

ಊಟ ವಸತಿ ಕೊಟ್ಟು..ಟ್ರೇನಿಂಗ್ ಕೊಡ್ತಾರೆ…..

ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್‌ ಜಾರಕಿಹೊಳಿ ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ …

Read More »

ಹಿಂಡಲಗಾ ಜೈಲಿನಲ್ಲಿದ್ದ, ಕೊಲೆ ಆರೋಪಿ ಅನುಮಾನಸ್ಪದ ಸಾವು

ಬೆಳಗಾವಿ-ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ ಕೊಲೆ ಆರೋಪಿ ಅನುಮಾನಸ್ಪದ ಸಾವನ್ನೊಪ್ಪಿದ ಘಟನೆ, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಅನುಮಾನಸ್ಪದ ಸಾವನ್ನೊಪ್ಪಿದ್ದು, ನಿನ್ನೆ ಸಂಜೆ ಮೃತಪಟ್ಟಿರುವ ಕೊಲೆ ಆರೋಪಿ ಗುರುರಾಜ್ ದೊಡ್ಡಮನಿ,ಎಂಬಾತ, ಕಳೆದ ನಾಲ್ಕು ದಿನಗಳಿಂದ ಎದೆ ನೋವಿನಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದ ಎದೆನೋವು ಕಾಣಿಸಿಕೊಂಡಿದೆ ಐದನೂರು ರೂಪಾಯಿ ನೀಡುವಂತೆ ಸಂಬಂಧಿಗೆ ದೂರವಾಣಿ ಕರೆ ಮಾಡಿದ್ದ ಆರೋಪಿ,ಇದಾದ ಕೆಲವೇ ಗಂಟೆಗಳಲ್ಲಿ ಆತ ಮೃತಪಟ್ಟಿದ್ದಾನೆ ಅಂತಾ ಜೈಲು ಸಿಬ್ಬಂದಿ ಕರೆ …

Read More »