Breaking News

ಬೆಳಗಾವಿ ಹೈವೇಯಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲ್ಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು. ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ …

Read More »

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮ ಗಣೇಶ ಹೀರಾಮಣಿ ಸುತಾರ್ (15) ನಿನ್ನೆ ಮಂಗಳವಾರ ಶಾಲೆಗೆ ರಜೆಯಿದ್ದ ಕಾರಣ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಿನ್ನೆ ದಿನವಿಡಿ ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಎಲ್ಲ ಕಡೆ ಹುಡುಕಿದರು. ಆದರೇ ಕೆರೆಯ ಬಳಿ ಆತನ ಬಟ್ಟೆ ಕಂಡು ಬಂದಾಗ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.ಕೂಡಲೇ …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಪ್ರೀಯಾಂಕಾ ಗಾಂಧಿ

ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ರಾಮಯ್ಯ ಸೇರಿದಂತೆ ಇತರ ಗಣ್ಯರು ಸ್ವಾಗತಿಸಿದರು. ಗಣ್ಯರು ಸ್ವಾಗತಿಸಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ ಜೊತೆ ಪ್ರತ್ಯೇಕವಾಗಿ ಸಮಾಲೋಚಿಸಿದ ಪ್ರೀಯಾಂಕಾ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯವನ್ನು ವಿಚಾರಿಸಿದರು. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ …

Read More »

ಲೋಕಲ್ ಡರ್ಟಿ ಪಾಲಿಟಿಕ್ಸ್ ಮಾಡೋದಾದ್ರೇ ನಾನು ಮಾತನಾಡುವುದಿಲ್ಲ – ಡಿಕೆಶಿ ಗರಂ

ಬೆಳಗಾವಿ-ಬೆಳಗಾವಿಯಲ್ಲಿ ನಾಳೆ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿದೆಹಲಿ, ದೇಶದ ಮೂಲೆ ಮೂಲೆಗಳಿಂದ ನಾಯಕರು ಬೆಳಗಾವಿಗೆ ಬರುತ್ತಿದ್ದಾರೆ.ಸುಮಾರು ಅರವತ್ತು ಜನ ಬೇರೆ ಬೇರೆ ಕಡೆಯಿಂದ ಬರುತ್ತಿದ್ದು,ಬಹುತೇಕ ಎಲ್ಲ ಶಾಸಕರು, ಎಂಎಲ್ಸಿ ಗಳು ಬರ್ತಿದ್ದಾರೆ.ಪ್ರಿಯಾಂಕಾ ಗಾಂಧಿಯವರು ಬರೋ ಟೂರ್ ಪ್ಲ್ಯಾನ್ ಪಿಕ್ಸ್ ಆಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಜೈ ಭೀಮ್, ಜೈ ಗಾಂಧಿ, ಜೈ ಸಂವಿಧಾನ ಸಮಾವೇಶ ಮಾಡುತ್ತಿರುವದು,ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ಮರಣೆ ಸಂವಿಧಾನ …

Read More »

ಬೆಳಗಾವಿ ಪೌರಕಾರ್ಮಿಕರ ಸಂಕಷ್ಟ ನಿವಾರಿಸಿದ ಡಾಕ್ಟರ್…..!!!

ಬೆಳಗಾವಿ- ಅಧಿಕಾರ ಇರಲಿ ಬಿಡಲಿ ಅವರು ಯಾವತ್ತೂ ಜನರ ಮದ್ಯ ಇರ್ತಾರೆ,ಜನಸಾಮಾನ್ಯರ ನೋವಿಗೆ ಸ್ಪಂದಿಸುತ್ತಾರೆ, ಉದ್ಯಾನವನಗಳಲ್ಲಿ ಏಕಾಂಗಿಯಾಗಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿರುವ ಬೆಳಗಾವಿಯ ಸಮಾಜ ಸೇವಕ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಡಾಕ್ಟರ್ ದಿನೇಶ್ ನಾಶಿಪುಡಿ ಪೌರಕಾರ್ಮಿಕರಿಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ. 2022 ಎಪ್ರೀಲನಲ್ಲಿ ರಾಜ್ಯಸರ್ಕಾರ ಪೌರಕಾರ್ಮಿಕರಿಗೆ ಪ್ರತಿ ತಿಂಗಳು ತಲಾ ಎರಡು ಸಾವಿರ ರೂ ಸಂಕಷ್ಟ ಭತ್ತೆಯನ್ನು …

Read More »

ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಅಳಿಯ

ಬೆಳಗಾವಿ- ಸಂಕ್ರಮಣ ಹಬ್ಬದ ನಿಮತ್ಯ ಮಗಳು ನೋಡಲು ಬಂದಿದ್ದ ತಾಯಿ ಹೆಣವಾಗಿದ್ದಾಳೆ ಪಾಪಿ ಅಳಿಯ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಡಗಾವಿಯ ಕಲ್ಯಾಣ ನಗರದಲ್ಲಿ ರೇಣುಕಾ (45) ಹತ್ಯೆಯಾಗಿದ್ದು ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ. ಪಾಪಿ ಅಳಿಯ ಅತ್ತೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ರೇಣುಕಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. …

Read More »

ಇಂದು ಬೆಳಗಾವಿಯಲ್ಲಿ ಡಿಸ್ಕೋ ಕಿಂಗ್ ಬಪ್ಪಿ ಲಹರಿ ಸ್ಮರಣೆಯ ಸಂಗೀತ ಲಹರಿ

    ಬೆಳಗಾವಿ- ಬೆಳಗಾವಿಯ ರೋಟರಿ ಕ್ಲಬ್ ಆಫ್ ಬೆಳಗಾವಿ ಅನ್ನೋತ್ಸವದ ಮೂಲಕ ಹೊಸ ಇತಿಹಾಸ ಮಾಡಿದೆ.ಅನ್ನೋತ್ಸವಕ್ಕೆ ನಿತ್ಯ ಲಕ್ಷಾಂತರ ಜನ ಬರುತ್ತಿದ್ದು ಇಂದು ಅನ್ನೋತ್ಸವದಲ್ಲಿ ಖ್ಯಾತ ಸಂಗೀತಗಾರ ಬಪ್ಪಿ ಲಹರಿ  ಅವರ ಸಂಗೀತವನ್ನು ಬೆಳಗಾವಿಯ ಹಾರ್ಮೋನಿ ಮ್ಯುಸಿಕಲ್ ತಂಡದವರು ಪ್ರಸ್ತುತ ಪಡಿಸಲಿದ್ದಾರೆ.. ಜನೇವರಿ 3 ರಿಂದ 14 ರವರೆಗೆ ಬೆಳಗಾವಿಯ ಸಾವಗಾಂವ ರಸ್ತೆಯಲ್ಲಿರುವ ಅಂಗಡಿ ಕಾಲೇಜು ಹತ್ತಿರ ಅನ್ನೋತ್ಸವ ನಡೆಯುತ್ತಿದೆ. ಪ್ರತಿದಿನ ಸಂಜೆ ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ …

Read More »

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ ಕಟ್ಟಲಾಗದು ಎಂಬುದನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಯುವಕ ರಮಜಾನ್ ಮಲ್ಲಿಕಸಾಬ್ ಪೀರಜಾದೆ ಸಾಧಿಸಿ ತೋರಿಸಿದ್ದಾರೆ. ಸೋನಿ ಟಿ.ವಿಯಲ್ಲಿ ಪ್ರಸಾರವಾಗುವ, ಇಡೀ ದೇಶದ ಗಮನಸೆಳೆದ ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 50 ಲಕ್ಷ ರೂ. ಗೆದ್ದು ಬೀಗಿದ್ದಾರೆ.ಬಾಲಿವುಡ್ ನ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ …

Read More »

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ. ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು ವೀಕ್ಲಿ …

Read More »

ಕುಡಚಿಯ ಮಾಸಾಬಿ ದರ್ಗಾಕ್ಕೆ ಪ್ರಿಯಾಂಕಾ ಬಂಪರ್

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲ್ಲೂಕಿನ ಕುಡಚಿಯ ಮಾಸಾಬಿ ದರ್ಗಾಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ‌ ಜಾರಕಿಹೊಳಿ ಅವರು ₹2 ಕೋಟಿಯ ಬಂಪರ್‌ ಕೊಡುಗೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವು ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿತ್ತು. ಇದರ ಬೆನ್ನಲ್ಲೇ, ವಕ್ಫ್ ಮಂಡಳಿ ವ್ಯಾಪ್ತಿಗೆ ಬರುವ ಬೆಳಗಾವಿಯ ಪ್ರಸಿದ್ಧ ಮಾಸಾಬಿ ದರ್ಗಾದ ಅಭಿವೃದ್ಧಿಗೆ ₹2 …

Read More »