Breaking News
Home / Breaking News (page 203)

Breaking News

26 ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ,26 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತ…

ಬೆಳಗಾವಿ- ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆಯಿಂದಾಗಿ,26 ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ,26 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತಗೊಂಡಿದ್ದು ಪರ್ಯಾಯ ರಸ್ತೆ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಡಿಸಿಎಂ,ಹಾಗೂ ಲೋಕೋಪಯೋಗಿ ಸಚಿವ ಗೋವೀಂದ್ ಕಾರಜೋಳ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮಾದ್ಯಮಗಳ ಜೊತೆ ಮಾತನಾಡಿ ಈ ವಿಷಯ ತಿಳಿಸಿದ್ರು ಬೆಳಗಾವಿ ಜಿಲ್ಲೆಯಲ್ಲಿ 24 ಗಂಟೆಯಿಂದ ವ್ಯಾಪಕವಾಗಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ 26 ಜಿಲ್ಲಾ ಮುಖ್ಯ ರಸ್ತೆ, 21 …

Read More »

ಮಳೆ ಜೋರ್…ಬೆಳಗಾವಿಗೆ ಬಂದ್ರು ಕಾರಜೋಳ್…!!!

ಬೆಳಗಾವಿ- ಪಕ್ಕದ ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯ ಶೇ 80 % ರಷ್ಟು ಭರ್ತಿಯಾಗಿದ್ದು ಇವತ್ತು ಒಂದೇ ದಿನ ಎರಡು ಕಂತುಗಳಲ್ಲಿ 30 ಸಾವಿರ ಕ್ಯುಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿದು ಬಿಡಲಾಗಿದೆ. ಕೃಷ್ಣಾ ನದಿಯಲ್ಲಿ ಈಗಾಗಲೇ 1 ಲಕ್ಷ 56 ಸಾವಿರ ಕ್ಯಸೆಕ್ಸ್ ಒಳಹರಿವು ಇದ್ದು,ಕೋಯ್ನಾ ಜಲಾಶಯದಿಂದ …

Read More »

ಮಂತ್ರಿಸ್ಥಾನದ ಆಕಾಂಕ್ಷಿಗಳು ಬೆಂಗಳೂರಿಗೆ….ಆಪತ್ಭಾಂಧವ ಜನರ ಬಳಿಗೆ….!!!

ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದೆ.ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಆದರೆ ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ,ಮಳೆಯಿಂದ ಆಗಿರುವ ಅನಾಹುತಗಳನ್ನು,ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ,ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ ಬಗೆಹರಿಸುತ್ತಿರುವ ಶಾಸಕ ಅಭಯ ಪಾಟೀಲ ನಿಜವಾಗಿಯೂ …

Read More »

ಬೆಳಗಾವಿಯಲ್ಲಿ ಮಳೆಯ ಅರ್ಭಟ ನ್ಯಾಶನಲ್ ಹೈವೇ ಬಂದ್…

ಬೆಳಗಾವಿ- ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅರ್ಭಟ ನಿರಂತರವಾಗಿದ್ದು,ಬೆಳಗಾವಿ ಗಡಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕ ಮಹಾರಾಷ್ಡ್ರದ ಗಡಿಯಲ್ಲಿ ವೇದಗಂಗಾ ನದಿಯು ಅಪಾಯಕಾರಿ ಸ್ವರೂಪ ತಾಳಿದ್ದು,ವೇದಗಂಗಾ ನದಿಯ ನೀರು ಪೂನಾ-ಬೆಂಗಳೂರು ,ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಬೆಳಗಾವಿಯ ನಿಪ್ಪಾಣಿ ಬಳಿಯ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡ ಹಿನ್ನಲೆಯಲ್ಲಿ ಪೂನಾ- ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಂಡಿದೆ. ಜಲಾವೃತಗೊಂಡ ರಾಷ್ಟ್ರೀಯ ಹೆದ್ದಾರಿಯ …

Read More »

ಬೆಳಗಾವಿಯಲ್ಲಿ ಪಿಪಿ……ವಾವಾ ಮೀಟೀಂಗ್…!!

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ಅವರಿಂದ ಪ್ರಗತಿ ಪರಿಶೀಲನೆ ________________________________________ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಂಡುಬಂದರೆ ಕಠಿಣ ಕ್ರಮ: ಎಚ್ಚರಿಕೆ ಬೆಳಗಾವಿ, -: ರಾಜ್ಯದ ಕೆಲವೆಡೆ ಇನ್ನೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಇದೆ ಎಂಬ ವರದಿಗಳು ಆಯೋಗದ ಮುಂದೆ ಇವೆ. ಒಂದು ವೇಳೆ ಇಂತಹ ಪದ್ಧತಿ ಎಲ್ಲಿಯಾದರೂ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ಈ ಅನಿಷ್ಠ …

Read More »

ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಮಾಡ್ತಾರಂತೆ….

ಬೆಂಗಳೂರು. ಜು22: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ …

Read More »

26 ಕ್ಕೆ ರಾಜ್ಯದಲ್ಲಿ ಬಿಜೆಪಿ ಹೈಕಮಾಂಡ್ ನಿಂದ ಲಕ್ಷ್ಮಣ ರೇಖೆ….!!!

ಬೆಳಗಾವಿ-ಕಳೆದ ವಿಧಾನಾಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಪರಾಭವಗೊಂಡು,ರಾಜಕೀಯ ಹಿನ್ನಡೆ ಅನುಭವಿಸಿದ್ದ ಲಕ್ಷ್ಮಣ ಸವದಿ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ರಾತ್ರೋ ರಾತ್ರಿ ಜಾಕ್ ಪಾಟ್ ಹೊಡೆದು ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದು ಸವದಿ ಅವರ ರಾಜಕೀಯ ಪುನರ್ಜನ್ಮ ಅಂತಾ ಎಲ್ಲರೂ ವಿಶ್ಲೇಷಣೆ ಮಾಡಿದ್ದರು. ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ‌.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ …

Read More »

ಖಾಕಿ ಪವರ್, ಆರೋಪಿ ಅಂಧರ್.ಹತ್ತು ಲಕ್ಷ ರೂ ರಿಕವರ್…!!

ಬೆಳಗಾವಿ-ಕೆಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವ್ಯಾಹತವಾಗಿ ಸರಗಳ್ಳತನ ಮಾಡುತ್ತಿದ್ದ ಜಾಮತಾರಾ chine scratching ಗ್ಯಾಂಗ್ ಮೇಲೆ ಗೋಲೀಬಾರ್ ಮಾಡಿ ಸರಗಳ್ಳರನ್ನು ಎನ್ ಕೌಂಟರ್ ಮಾಡಿ ಬೆಳಗಾವಿ ನಗರವನ್ನು ಸರಗಳ್ಳರಿಂದ ಮುಕ್ತ ಮಾಡಿದ್ದ  ಸಿಪಿಐ ಗಡ್ಡೇಕರ ಈಗ ಸೈಬರ್ ಕ್ರೈಂ ಸಿಪಿಐ ಆಗಿ ಅಲ್ಪಾವಧಿಯಲ್ಲೇ  ಪ್ರಕರಣವೊಂದನ್ನು ಪತ್ತೆ ಮಾಡಿ ವಿಶೇಷ ಸಾಧನೆಗೈದಿದ್ದಾರೆ‌. ಕಳೆದ ತಿಂಗಳು ಬೆಳಗಾವಿಯ ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂಧಿಯೊಬ್ಬರ ಖಾತೆಯಿಂದ ಸಮಾರು ಹತ್ತು ಲಕ್ಷ ರೂ ಊಡಾಯಿಸಿದ್ದ ಜಾರ್ಖಂಡ್ ರಾಜ್ಯದ …

Read More »

ಬೆಳಗಾವಿ ಪೋಲೀಸರಿಂದ ಹೋಲ್ ಸೇಲ್ ಬೇಟೆ…..

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …

Read More »

ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಟೋಟಲ್ ಮೈನಸ್…!!

ಬೆಳಗಾವಿ-ಇವತ್ತು ಸೋಮವಾರ ಸಂಜೆ ಬಿಡುಗಡೆಯಾದ ಕೋವೀಡ್ ಹೆಲ್ತ್ ಬುಲೀಟೀನ್ ಬೆಳಗಾವಿ ಜಿಲ್ಲೆಯ ಜನತೆಗೆ ಸಿಹಿ ಸುದ್ಧಿ ಕೊಟ್ಟಿದೆ. ಇವತ್ತಿನ ಸೊಂಕಿತರ ಸಂಖ್ಯೆ ಗಮನಿಸಿದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ದೊಡ್ಡ ಲಗಾಮು ಬಿದ್ದಿದೆ. ಇವತ್ತು ಬೆಳಗಾವಿ ಜಿಲ್ಲೆಯಲ್ಲಿ ಕೇವಲ 38 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಕೇವಲ 6 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಸೊಂಕಿತರ ಸಂಖ್ಯೆಯಲ್ಲಿ ಬೆಳಗಾವಿ ತಾಲ್ಲೂಕು ಯಾವಾಗಲೂ ಪ್ರಥಮ ಸ್ಥಾನದಲ್ಲಿತ್ತು,ಆದರೆ ಇವತ್ತು ಕೇವಲ 6 ಜನ ಸೊಂಕಿತರು …

Read More »