Home / Breaking News (page 241)

Breaking News

ಬೆಳಗಾವಿಯಲ್ಲಿ ಐಸೋಲೇಟ್ ಆದ ಬ್ರಿಟನ್ ಮಹಿಳೆ

ಬೆಳಗಾವಿ -ಲಂಡನ್ ನಿಂದ ಬೆಳಗಾವಿಗೆ ಆಗಮಿಸಿದ ಮಹಿಳೆ ಗಂಟಲು ಮಾದರಿ ಸಂಗ್ರಹಿಸಲಾಗಿದ್ದು,ಬಿಟನ್ ಮಹಿಳೆಯನ್ನು ಬೆಳಗಾವಿಯಲ್ಲಿ ಐಸೋಲೇಷನ್ ಆಗುವಂತೆ ಬೆಳಗಾವಿಯ ವೈದ್ಯರು ಸಲಹೆ ನೀಡಿದ್ದಾರೆ. ಬ್ರಿಟನ್ ನಲ್ಲಿ ಮಹಾಮಾರಿ ಕೊರೋನಾ ರೂಪಾಂತರವಾಗಿ ತಾಂಡವಾಡುತ್ತಿರುವ ಹಿನ್ನಲೆಯಲ್ಲಿ ,ಬ್ರಿಟನ್ ನಿಂದ ಬೆಳಗಾವಿಗೆ ಆಗಮಿಸಿರುವ ಬ್ರಿಟನ್ ಮಹಿಳೆಯ ಕುರಿತು ಅರೋಗ್ಯ ಇಲಾಖೆ ಸ್ಪೆಷಲ್ ಕೇರ್ ತಗೆದುಕೊಂಡಿದೆ. ಡಿಸೆಂಬರ್ 14 ರಂದು 35 ವರ್ಷದ ಮಹಿಳೆ ಲಂಡನ್ ನಿಂದ ಬೆಂಗಳೂರಿಗೆ ಆಗಮಿಸಿ ನಂತರ ಜಮಖಂಡಿಗೆ ತೆರಳಿ ನಂತರ …

Read More »

ಮತ ಚಲಾಯಿಸಿದ 107 ವಯಸ್ಸಿನ ಅಜ್ಜಿ…

ಬೆಳಗಾವಿ-ಗೋಕಾಕ್ ನ ನಂದಗಾಂವ ಗ್ರಾಮದಲ್ಲಿ ಮತದಾನ ಮಾಡಿದ 107ರ ಅಜ್ಜಿ ಎಲ್ಲರ ಗಮನ ಸೆಳೆದರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು,ಬಾಳವ್ವ ಮುಗದುಮ್ಮ ತಮ್ಮ ಕುಟುಂಬದವರ ಸಹಾಯದಿಂದ ಮತದಾನ ಮಾಡಿದ ಶತಾಯುಷಿ ಅಜ್ಜಿ,ತಮ್ಮ ಹಕ್ಕು ಚಲಾಯಿಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದ ಅಜ್ಜಿ ಕುಟುಂಬಸ್ಥರ ಸಹಾಯದಿಂದ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡುವ ಮೂಲಕ ಎಲ್ಲಲ ಗಮನ ಸೆಳೆದರು.

Read More »

ಲೋಕಲ್ ವಾರ್…ಮತಗಟ್ಟೆಯ ಅಧಿಕಾರಿ ಬಳಿ ರಿವಾಲ್ವರ್….!!

ಬೆಳಗಾವಿ – ಗ್ರಾಮ ಪಂಚಾಯತಿ ಚುನಾವಣೆಗೆ ಮೊದಲ ಹಂತದ ಮತದಾನ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದೆ.ಬೆಳಗಾವಿ ಪಕ್ಕದ ದೇಸೂರ ಗ್ರಾಮದ ಮತಗಟ್ಟೆಯಲ್ಲಿ ನಡೆಯಬಾರದ ಘಟನೆ ನಡೆದಿದೆ ಮತಗಟ್ಟೆಯಲ್ಲಿ ಚುನಾವಣೆಯ ಡ್ಯುಟಿಗೆ ನಿಯೋಜನೆಗೊಂಡ ಅಧಿಕಾರಿಯ ಬಳಿ ರಿವಾಲ್ವರ್ ಪತ್ತೆಯಾಗಿದೆ. ಗ್ರಾಪಂ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಬಳಿ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ಪರೀಶಿಲನೆ ನಡೆಸುತ್ತಿದ್ದಾರೆ. ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಮತಗಟ್ಟೆಗೆ ನಿಯೋಜನೆಯಾಗಿದ್ದ ಅಧಿಕಾರಿ ಬಳಿ ಲೋಡೆಡ್ ಇರುವ ಪಿಸ್ತೂಲ್ ಇರುವುದನ್ನು ಗಮನಿಸಿದ …

Read More »

ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಡಾಗ್….!!!

ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ …

Read More »

ಆಕರ್ಷಕ ಪ್ರಬಂಧ ಬರೆದವರಿಗೆ ಹೆಲಿಕಾಪ್ಟರ್ ವಿಹಾರ…!!!

ಬೆಳಗಾವಿ-ಸತೀಶ್ ಶುಗರ್ಸ್ ಅವಾರ್ಡ್ ಕಾರ್ಯಕ್ರಮದ ಮೂಲಕ ಸಾಂಸ್ಕೃತಿಕ ಲೋಕದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟು,ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರಲು ವೇದಿಕೆ ಕಲ್ಪಿಸಿಕೊಟ್ಟಿರುವ ಆದರ್ಶ ರಾಜಕಾರಣಿ, ಸತೀಶ್ ಜಾರಕಿಹೊಳಿ ಅವರು ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಪ್ರಬಂಧ ಸ್ಪರ್ದೆ ಏರ್ಪಡಿಸಿ ,ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ಕೊಡುವದು ಸಂಪ್ರದಾಯ,ಆದ್ರೆ ಸತೀಶ್ ಜಾರಕಿಹೊಳಿ ಸಾರಥ್ಯದ ಮಾನವ ಬಂಧುತ್ವ ವೇದಿಕೆ ಈ ವಿಚಾರದಲ್ಲಿ ವಿನೂತನವಾದ,ಆಕರ್ಷಕವಾದ,ಮೌಲ್ಯಾಧಾರಿತ ಸಂಪ್ರದಾಯವನ್ನು ಶುರು ಮಾಡಿದ್ದಾರೆ. ಹೊಸ ವರ್ಷ,ಹೊಸ ಯೋಜನೆ ,ಹೊಸ ಆಲೋಚನೆಯೊಂದಿಗೆ ಸತೀಶ್ ಜಾರಕಿಹೊಳಿ …

Read More »

ಹೊಡೀ ಶಿಕ್ಕಾ ಆಮ್ಯಾಲ ಕೇಳ ಲೆಕ್ಕಾ…ನೋಡಬ್ಯಾಡ ರೊಕ್ಕಾ…!!!

ಬೆಳಗಾವಿ ಜಿಲ್ಲೆಯಲ್ಲಿ ನಾಳೆ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ.ತಪ್ಪದೇ ಎಲ್ಲರೂ ಮತದಾನ ಮಾಡುವ ಮೂಲಕ ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಿ,ಸಾಮಾಜಿಕ ಕಳಕಳಿ ಹೊಂದಿರುವ ಪ್ರಾಮಾಣಿಕ ಅಭ್ಯರ್ಥಿಯನ್ನು ಗೆಲ್ಲಿಸಿ.ಚುನಾವಣೆಯಲ್ಲಿ ಹಣ,ಹೆಂಡದ ಆಮೀಷಕ್ಕೆ ಒಳಗಾಗದೇ ಪ್ರಾಣಿಕರನ್ನು ಆಯ್ಕೆ ಮಾಡಿ… ಅಕ್ಕಾ..ಕಾಕಾ..ಯಪ್ಪಾ ತಮ್ಮಾ..ಹೊಡೀ ಶಿಕ್ಕಾ,ನೋಡಬ್ಯಾಡ ರೊಕ್ಕಾ…!!!! ಎರಡನೇ ಹಂತದ ಚುನಾವಣೆ: ಸವದತ್ತಿ, ರಾಮದುರ್ಗಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ಬೆಳಗಾವಿ, – :ಎರಡನೇ ಹಂತದಲ್ಲಿ‌ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಲಿರುವ ರಾಮದುರ್ಗ …

Read More »

ಹಿರಿಯ ಪತ್ರಕರ್ತ. ರಾಘವೇಂದ್ರ ಜೋಶಿ ಇನ್ನಿಲ್ಲ!

ಬೆಳಗಾವಿ-ಇಂದು ಸೋಮವಾರ ಮುಂಜಾನೆವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇಕುಸಿದು ಬಿದ್ದ ಅವರು ಹೃದಯಾಘಾತದಿಂದಕೊನೆಯುಸಿರೆಳೆದರು.ಅವರಿಗೆಇದೇ ಡಿಸೆಂಬರ್ 8 ರಂದು 78 ವರ್ಷವಯಸ್ಸಾಗಿತ್ತು. ರಾಘವೇಂದ್ರ ಜೋಶಿ ಅವರು ತಮ್ಮ ಹಿಂದೆ ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಬೆಳಗಾವಿಯ ಭಾಗ್ಯ ನಗರದ ಏಳನೇ ಕ್ರಾಸ್ ನಲ್ಲಿ ಜೋಶಿಯವರ ಮನೆಯಿದ್ದು ಸಂಜೆ 5 ಗಂಟೆಗೆ ಹಿಂದವಾಡಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Read More »

ಕಳ್ಳನೆಂದು ಭಾವಿಸಿ,ಹಲ್ಲೆ ಮಾಡಿ, ಮರ್ಡರ್….

ಬೆಳಗಾವಿ- ಈಗ ಗ್ರಾಮ ಪಂಚಾಯತಿ ಚುನಾವಣೆ, ಎಲ್ಲ ಕಡೆ ಮಟನ್ ಪಾರ್ಟಿ,ಚಿಕನ್ ಪಾರ್ಟಿಗಳು ನಡೆಯುತ್ತಿವೆ‌.ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯೆಕ್ತಿಯೊಬ್ಬನನ್ನು ಕಳ್ಳನೆಂದು ಭಾವಿಸಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆನಂದ ಮಾರುತಿ ಕೋಲಕಾರ (58) ಎಂಬಾತ ಮೂಲತಹ ಮುಚ್ಚಂಡಿ ಗ್ರಾಮದವನಾಗಿದ್ದು ಈತ ಧಾಭಾದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿರುವಾಗ ಖನಗಾಂವ ಗ್ರಾಮದ ಹದ್ದಿಯಲ್ಲಿ ಇತನನ್ನು ಕಳ್ಳನೆಂದು ಭಾವಿಸಿ,ಈತನ ಮೇಲೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕ್ರಿಟಕಲ್ ಮತ್ತು ನಾನ್ ಕ್ರಿಟಿಕಲ್ ಮತಗಟ್ಟೆಗಳು ಎಷ್ಟು ಗೊತ್ತಾ..?

ಬೆಳಗಾವಿ ಜಿಲ್ಲೆಯಲ್ಲಿ 22.12.2020 ರಂದು ಹಾಗೂ 27.12.2020 ರಂದು ನಡೆಯಲಿರುವ ಪ್ರಥಮ ಹಾಗೂ ದ್ವೀತಿಯ ಹಂತದ ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ನಡೆಯಲಿದ್ದು,ಜಿಲ್ಲೆಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತಿಯನ್ನು ನಿಯೋಜಿಸಲಾಗಿದೆ. ಪ್ರಥಮ ಹಂತದಲ್ಲಿ ಖಾನಾಪೂರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರ ಗೋಕಾಕ ಹಾಗೂ ಮೂಡಲಗಿ ತಾಲೂಕಾ ವ್ಯಾಪ್ತಿಗಳಲ್ಲಿ, ಅದೇ ರೀತಿಯಾಗಿ ದ್ವಿತೀಯ ಹಂತದಲ್ಲಿ ಸವದತ್ತಿ, ರಾಮದುರ್ಗ, ಚಿಕ್ಕೋಡಿ, ನಿಪ್ಪಾಣಿ, ಅಥಣಿ, ಕಾಗವಾಡ ಮತ್ತು ರಾಯಬಾಗ ತಾಲೂಕಾ ವ್ಯಾಪ್ತಿಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದ್ದು.ಅದಕ್ಕಾಗಿ …

Read More »

ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ-ಡಿಸಿ

ಬೆಳಗಾವಿ, – ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಎರಡನೇ ಹಂತದಲ್ಲಿ‌ ನಡೆಯಲಿರುವ ಗ್ರಾಮ‌ ಪಂಚಾಯತಿ ಚುನಾವಣೆಯ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು. ಅಥಣಿ, ಕಾಗವಾಡ, ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಿಗೆ ಭಾನುವಾರ (ಡಿ.20) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸಿದ್ಧತೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಚುನಾವಣೆಗೆ ನಿಯೋಜಿತಗೊಂಡು ತರಬೇತಿ ಪಡೆಯುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ …

Read More »