Breaking News
Home / Breaking News (page 25)

Breaking News

ಜಮೀನು ಕಳೆದುಕೊಂಡ ರೈತರಿಗೆ ಲಕ್ಷ್ಮೀ ಕೃಪೆ….!!

ಬೆಳಗಾವಿ-ಬೆಳಗಾವಿಯ ಹಲಗಾ ಬಳಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಜಮೀನು ನೀಡಿರುವ ರೈತರಿಗೆ ಪರಿಹಾರ ಸಿಕ್ಕಿಲ್ಲ.ಹೆಚ್ಚಿನ ಪರಿಹಾರಕ್ಕೆ ಕಳೆದ ಆರು ವರ್ಷಗಳಿಂದ ರೈತರು ಅಲೆದಾಡುತ್ತಿದ್ದು ಅವರಿಗೆ ಪರಿಹಾರ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಹಲಗಾ ಗ್ರಾಮದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ(STP ಪ್ಲಾಂಟ್) ನಿರ್ಮಾಣಕ್ಕೆ 2019ರಲ್ಲಿ ಕಾಮಗಾರಿ ಆರಂಭಿಸಲಾಗಿದೆ.ಬೆಳಗಾವಿ ನಗರದ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗೆ2019ರಲ್ಲಿ ಭೂ ಸ್ವಾಧೀನ ಆಗಿತ್ತು,ಎಕರೆ …

Read More »

ಬೆಳಗಾವಿ ಮಂದಿಗೆ ದೀಪಾವಳಿ ಹಬ್ಬದ ಖುಷಾಲಿ. ಗುಡ್ ನ್ಯುಸ್……!!!

ಬೆಳಗಾವಿ: ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಹಾಗೂ  ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅತ್ಯಂತ ಕ್ರೀಯಾಶೀಲರಾಗಿದ್ದು ದೀಪಾವಳಿ ಹಬ್ಬದ ದಿನ ಬೆಳಗಾವಿ ಮಂದಿಗೆ ವಿಶೇಷ ಗೀಫ್ಟ್ ಕೊಟ್ಟಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ …

Read More »

ಉಡುಪಿಯಲ್ಲಿ ನಾಲ್ಕು ಮರ್ಡರ್ ಮಾಡಿದ ಪಾಪಿ, ಬೆಳಗಾವಿಯಲ್ಲಿ ಅರೆಸ್ಟ್..

ಬೆಳಗಾವಿ- ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಪರಾಯಾಗಿ,ಬೆಳಗಾವಿಯಲ್ಲಿ ಅಡಗಿದ್ದ ಆರೋಪಿಯನ್ನು ಉಡುಪಿ ಪೋಲೀಸರು ಬಂಧಿಸಿದ್ದಾರೆ. ಆರೋಪಿ ಪ್ರವೀಣ್ ಅರುಣ ಚೌಗಲೆ ಎಂಬಾತ ನವ್ಹೆಂಬರ್ 12 ರಂದು ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ,ಬೆಳಗಾವಿಯ ಬಸವನ ಕುಡಚಿಯಲ್ಲಿ ಆತನ ಮಾವನ ಮನೆಯಲ್ಲಿ ಅಡಗಿದ್ದ ಮೋಬೈಲ್ ನೆಟವರ್ಕ್ ಆಧರಿಸಿ ಉಡುಪಿ ಪೋಲೀಸರು ಬೆಳಗಾವಿಗೆ ಧಾವಿಸಿ ನಾಲ್ಕು ಜನರ ಕೊಲೆ ಮಾಡಿದ …

Read More »

ಬಾಂಬ್ ಬೆದರಿಕೆ ಕರೆ ಮಾಡಿದ ಬೆಳಗಾವಿ ಯುವತಿಯ ಮನೆಗೆ ಬೆಂಗಳೂರು ಪೋಲೀಸರು…

ಬೆಳಗಾವಿ-ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿದ ಬೆಳಗಾವಿಯ ಯುವತಿಯ ಮನೆಗೆ ಬೆಂಗಳೂರು ಪರಪ್ಪನ ಅಗ್ರಹಾರ ಠಾಣೆಯ ಪೋಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಶಾಹು ನಗರದಲ್ಲಿರುವ ಶೃತಿ ಶೆಟ್ಟಿ ಎಂಬ ಯುವತಿಯು ತನ್ನ ತಾಯಿಯ ಮೋಬೈಲ್ ನಿಂದ ಬೆಂಗಳೂರಿನ ಟಿಸಿಎಸ್ ಕಂಪನಿಯ ಕಚೇರಿಗೆ ಹುಸಿ ಬಾಂಬ್ ಕರೆ ಮಾಡಿ ಬೆದರಿಕೆ ಹಾಕಿದ ಆರೋಪದ ವಿಚಾರದಲ್ಲಿ ಬೆಂಗಳೂರಿನ ಪೋಲೀಸರ ತಂಡ ಬೆಳಗಾವಿಗೆ ಆಗಮಿಸಿ ಇಂದು ಸಂಜೆ ಯುವತಿ …

Read More »

ತೆಲಂಗಾಣ ಇಲೆಕ್ಷನ್ ದಲ್ಲಿ ಕೈ ಮಂತ್ರ, ಚನ್ನರಾಜ ತಂತ್ರ…!!

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು. ಕಾರ್ಯಕರ್ತರ …

Read More »

ಬೆಳಗಾವಿಯಲ್ಲಿ ಶುರುವಾಯ್ತು ಊಸಾಬರಿ ಕಟ್ಟೆ….!!!

ಬೆಳಗಾವಿ- ಬೆಳಗಾವಿಯಲ್ಲಿ ತಿನಿಸು ಕಟ್ಟೆ ನಿರ್ಮಿಸಿ ರಾಜ್ಯದ ಗಮನ ಸೆಳೆದಿದ್ದ ಶಾಸಕ ಅಭಯ ಪಾಟೀಲ ಈಗ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹಲವು ಕಡೆ ಊಸಾಬರಿ ಕಟ್ಟೆಗಳನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಸಂಜೆಯಾದ್ರೆ ಸಾಕು,ಹಳ್ಳೆಯ ಜನ ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯೋದನ್ನು ನೋಡಿದ್ದೇವೆ.ಸಿಟಿಯಲ್ಲಿ ಈ ರೀತಿಯ ಹರಟೆ ಹೊಡೆಯಲು ಜಾಗವೇ ಸಿಗೋದಿಲ್ಲ.ರಸ್ತೆ ಬದಿಯಲ್ಲಿ ನಿಂತ್ಕೊಂಡು ಹರಟೆ ಹೊಡೆದ್ರೆ ಪೋಲೀಸರು ಸೀಟಿ ಊದಿ ಓಡಿಸ್ತಾರೆ.ಊರ ಊಸಾಬರಿ ಮಾಡುವವರು ಒಂದು ಕಡೆ …

Read More »

ಮೂಡಲಗಿಯಲ್ಲಿ ಬಾಲಕನ ಆತ್ಮಹತ್ಯೆ.

ಬೆಳಗಾವಿ- ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲಾಟ್‌ನಲ್ಲಿ ನಡೆದಿದೆ. ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.ದೀಪಾವಳಿ ರಜೆ ಇದೆ ಅಂತ ತಿರುಗಬೇಡ, ಓದಿಕೋ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ,ಇಷ್ಟಕ್ಕೆ ಮನನೊಂದು ತಮ್ಮ ಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ …

Read More »

ಹರ್ಷಾ ಹೊಟೇಲ್, ಶಬರಿ ಹೊಟೇಲ್‌ ಯಜಮಾನ ಸುರೇಶ್ ನಾಯರಿ ಇನ್ನಿಲ್ಲ.

ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್‌ ಮಾಲಕರಾದ, ರಾಮತೀರ್ಥ‌ನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ‌ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನ.‌ …

Read More »

ರಾಹುಲ್, ಮೃಣಾಲ್‌ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ.

ಬೆಳಗಾವಿ- ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಇವತ್ತು ಅನೇಕ ಊಹಾಪೋಹಗಳಿಗೆ ಬ್ರೇಕ್ ಹಾಕಿದ್ದು,ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳಕರ ಇಬ್ಬರೂ ಸಹ ಲೋಕಸಭೆ ಟಿಕೆಟ್ ಕೇಳಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಹಂತದಲ್ಲಿ ತಯಾರಿ ನಡೆಯುತ್ತಿದೆ. ಅಭ್ಯರ್ಥಿ ಗಳನ್ನ ಗುರುತಿಸುವ ಕಾರ್ಯ ಆಗಬೇಕಿದೆ.ಚಳಿಗಾಲದ ಅಧಿವೇಶನದ ಸಂಧರ್ಭದಲ್ಲಿ ಸಭೆ ಮಾಡಿ ತೀರ್ಮಾನ ಮಾಡ್ತಿವಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ …

Read More »

ಯುವಕನ ಮರ್ಡರ್ ಗೋಕಾಕ್ ನಲ್ಲಿ ಕಲ್ಲು ತೂರಾಟ,ಬೈಕ್ ಜಖಂ..

ಬೆಳಗಾವಿ-ಗೋಕಾಕ ನಗರದಲ್ಲಿ ಹಳೇ ವೈಷ್ಯಮಕ್ಕೆ ರಾತ್ರಿ ಯುವಕನ ಬರ್ಬರ ಹತ್ಯೆಯಾಗಿದ್ದು ಗೋಕಾಕಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯುವಕನ ಕೊಲೆಯಾಗುತ್ತಿದ್ದಂತೆಯೇ,ಆರೋಪಿ ಮನೆ ಮೇಲೆ ಉದ್ವಿಗ್ನರಿಂದ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ತ್ವೇಷಮಯ ವಾತಾವರಣ ನಿರಗಮಾಣವಾಗಿದೆ.ಬೆಳಗಾವಿ ಜಿಲ್ಲೆಯ ಗೋಕಾಕಿನ ಆದಿಜಾಂಬವ ನಗರದಲ್ಲಿ ಈ ಘಟನೆ ನಡೆದದೆ. ಪೆಟ್ರೊಲ್ ಬಂಕ್‌ನಲ್ಲಿ ಕೆಲಸ ಮಾಡ್ತಿದ್ದ ಶಾನೂರು ಪೂಜಾರಿ (27) ಕೊಲೆಯಾದ ದುರ್ದೈವಿಯಾಗಿದ್ದು,ಕೊಲೆ ಆಗ್ತಿದ್ದಂತೆ ಆರೋಪಿ ಮನೆಯ ಮೇಲೆ ಕಲ್ಲು ತೂರಿ ಗಲಾಟೆ ಮಾಡಿದ ಮತ್ತೊಂದು ಗುಂಪು, …

Read More »