Home / Breaking News (page 261)

Breaking News

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ,ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ತಾಲ್ಲೂಕಿನ ಮುತ್ಯಾನಟ್ಟಿ ಗುಡ್ಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಐವರ ವಿರುದ್ಧದ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ ಬೆಳಗಾವಿಯ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ಮತ್ತು ಪೋಕ್ಸೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಅಷ್ಟೇ ಅಲ್ಲ ಪ್ರತಿ ಆರೋಪಿಗಳಿ ತಲಾ 5ಲಕ್ಷ ರೂ. ದಂಡ ವಿಧಿಸಿದೆ. ಮುತ್ಯಾನಟ್ಟಿಯ ಸಂಜು ದಡ್ಡಿ (24), ಸುರೇಶ ಭರಮಪ್ಪ ಬೆಳಗಾವಿ (24), ಸುನೀಲ ಲಗಮಪ್ಪ ಡುಮ್ಮಗೋಳ (21), …

Read More »

ಬರಹ ಲೋಕದ ಹಿರಿಯಣ್ಣ ಇನ್ನಿಲ್ಲ.,..

ಬೆಳಗಾವಿ- ಅವರ ಬದುಕೇ ಬರಹ..ಬರವಣಿಗೆ ಮೂಲಕ, ಗುಡುಗಿ ರಾಜಕೀಯ,ಹಾಗೂ ಭೂಗತ ಜಗತ್ತನ್ನು ನಡುಗಿಸಿದ್ದ ಪತ್ರಿಕೋದ್ಯಮದ ಹಿರಿಯಣ್ಣ ರವಿ ಬೆಳಗೆರೆ ಅವರು ಮದ್ಯರಾತ್ರಿ ಬರೆಯುತ್ತಲೇ ಬದುಕಿನ ಪಯಣ ಮುಗಿಸಿದ್ದಾರೆ. ನಿನ್ನೆ ಮದ್ಯರಾತ್ರಿ ಹೃದಯಾಘಾತದಿಂದ ರವಿ ಬೆಳಗೆರೆ ಅವರು ನಿಧನರಾಗಿದ್ದಾರೆ.ಉಪನ್ಯಾಸಕರಾಗಿ ಬದುಕಿನ ಪಯಣ ಆರಂಭಿಸಿದ್ದ ಅವರು,ನಂತರ ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ಜನಪ್ರೀಯರಾಗಿದ್ದರು.ಅನೇಕ ಕಾದಂಬರಿಗಳನ್ನು ಬರೆದಿರುವ ಅವರು ಪುಲ್ವಾಮಾ ದಾಳಿಯ ಬಳಿಕ ಖುದ್ದಾಗಿ ಪುಲ್ವಾಮಾ ಗೆ ಹೋಗಿ ಅಲ್ಲಿಯ ಪರಿಸ್ಥಿತಿಯನ್ನು ತಿಳಿದುಕೊಂಡು ಪುಲ್ವಾಮಾ …

Read More »

ಕತ್ತಿ ಸಹೋದರರು ,ಅಥಣಿಗೆ ಹೋಗಿದ್ದೇಕೆ…? ರಮೇಶ್ ಜಾರಕಿಹೊಳಿ ಆ ರೀತಿ ಹೇಳಿದ್ದೇಕೆ….?

ಬೆಳಗಾವಿ- ರೈತರ ಜೀವನಾಡಿ,ಸಹಕಾರ ಕ್ಷೇತ್ರದ ಆಧಾರ ಸ್ತಂಭವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದೆ. ಈಗಾಗಲೇ ಡಿಸಿಸಿ ಬ್ಯಾಂಕಿನ ನಿರ್ದೇಶಕ ಮಂಡಳಿಯ ಚುನಾವಣೆ ನಡೆದಿದ್ದು,13 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ,ಮೂರು ಸ್ಥಾನಗಳಿಗೆ ಚುನಾವಣೆ ನಡೆದಿತ್ತು.ಒಟ್ಟು16 ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಘೋಷಣೆಯಾದ ಬಳಿಕ,ಲಕ್ಷ್ಮಣ ಸವದಿ,ರಮೇಶ್ ಕತ್ತಿ,ಬಾಲಚಂದ್ರ ಜಾರಕಿಹೊಳಿ,ರಮೇಶ್ ಜಾರಕಿಹೊಳಿ,ಅಣ್ಣಾಸಾಹೇಬ್ ಜೊಲ್ಲೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಎಲ್ಲ ಬಿಜೆಪಿ ನಾಯಕರು ಒಂದೇ ವೇದಿಕೆಯಲ್ಲಿ …

Read More »

ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಅಭಿವೃದ್ಧಿಯ ಬೈಟಕ್

ಬೆಳಗಾವಿ, ವೀರರಾಣಿ ಕಿತ್ತೂರು ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿರುವ ವಾಡೆ, ಕೋಟೆ ಮತ್ತಿತರ ಸ್ಥಳಗಳ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ರೂಪಿಸಿ ಆದಷ್ಟು ಬೇಗನೆ ಜಾರಿಗೊಳಿಸಬೇಕು ಎಂದು ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಚೆನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಕತಿಯ ಸಿದ್ಧೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ (ನ.12) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅರಮನೆ(ವಾಡೆ) ಇರುವಂತಹ ಜಾಗೆಯನ್ನು ಸರ್ಕಾರವೇ ಪಡೆದುಕೊಂಡು ಅದನ್ನು ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಾಡಿನ ಇತಿಹಾಸದಲ್ಲಿ …

Read More »

ವಿದ್ಯುತ್ ತಂತಿ ಹರಿದು ಬಿದ್ದು 8 ಎಕರೆ ಕಬ್ಬು ಭಸ್ಮ

ಬೆಳಗಾವಿ- ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೈಲಹೊಂಗಲ ತಾಲ್ಲೂಕಿನ ತಿಗಡಿ ಕ್ರಾಸ್ ಬಳಿ ಸಂಭವಿಸಿದೆ. ವಿದ್ಯುತ್ ತಂತಿ ಹರಿದು ಬಿದ್ದು 8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಭಸ್ಮವಾಗಿದೆ. ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಬೆಂಕಿಯ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದು ಅವಘಡ …

Read More »

ಎಸ್ ಆರ್ ಪಾಟೀಲ್ ಹಿಂಡಲಗಾ ಜೈಲಿಗೆ ಹೋಗ್ತಾರಂತೆ….!

ಬೆಳಗಾವಿ- ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಹಿಂಡಲಗಾ ಜೈಲಿಗೆ ಹೋಗಿ ಮಾಜಿ ಮಂತ್ರಿ ವಿನಯ ಕುಲಕರ್ಣಿ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಪ್ರವಾಹ ಪರಿಹಾರದ ಕುರಿತು ಮಾಹಿತಿ ಪಡೆದುಕೊಂಡ ಬಳಿಕ ಮಾದ್ಯಮ ಗಳ ಜೊತೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿದೆ,ಸಿಬಿಐ,ಚುನಾವಣಾ ಆಯೋಗ ಸೇರಿದಂತೆ ಇತರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ.ವಿನಯ ಕುಲಕರ್ಣಿ ಅವರ ಬಂಧನ …

Read More »

ಬೆಳಗಾವಿ ಬಿಜೆಪಿ ಕಚೇರಿಗೂ 30 ಗುಂಟೆ ಜಾಗೆ

ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಾಗವನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನೀಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ನಗರಾಭಿವೃದ್ಧಿ ಇಲಾಖೆಯ ಪ್ರಸ್ತಾಪವನ್ನು ಸಚಿವ ಸಂಪುಟ ಒಪ್ಪಿ ಅನುಮೋದನೆ ನೀಡಿದೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯ ಸ್ವಂತ ಕಟ್ಟಡ …

Read More »

ಬಸವೇಶ್ವರ ಮೂರ್ತಿ ಭಗ್ನ ಬಯಲಾಯ್ತು ಸತ್ಯ…..

ಬೆಳಗಾವಿ- ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನಡೆದ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರಕರಣ ಹೊಸ ಟ್ವೀಸ್ಟ ಪಡೆದುಕೊಂಡಿದ್ದು ಸತ್ಯಾಂಶ ಬಯಲಾಗಿದೆ. ದುಷ್ಕರ್ಮಿಗಳು ಮೂರ್ತಿ ಭಗ್ನಮಾಡಿದ್ದಾರೆ ಎಂದು ಕಟಕೋಳ ಠಾಣೆಯಲ್ಲಿ ದೂರು ನೀಡಿದ್ದ ಗ್ರಾಮದ ಹಿರಿಯರು ದೂರನ್ನು ವಾಪಸ್ ಪಡೆದುಕೊಂಡು ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದಾರೆ. ಯಾಕಂದ್ರೆ ಈ ಮೂರ್ತಿಯನ್ನು ಯಾರೋ ದುಷ್ಕರ್ಮಿಗಳು ಭಗ್ನಗೊಳಿಸಿರಲಿಲ್ಲ.ಗ್ರಾಮದ ಕೆಲವು ರೈತರು ಮದ್ಯರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋಗುತ್ತಿರುವಾಗ,ಜಗಜ್ಯೋತಿ ಬಸವೇಶ್ವರ ಮೂರ್ತಿಯ ಮೇಲಿದ್ದ ಶಾಲು ಕೆಳಗೆ ಬಿದ್ದಿದ್ದನ್ನು …

Read More »

ಬೆಳಗಾವಿಯ ಅಂಡರ್ ಪಾಸ್ ಹೊಂಡಕ್ಕೆ ಎರಡನೇಯ ವಾರ್ಷಿಕೋತ್ಸವ….!!

ಬೆಳಗಾವಿ-ಬೆಳಗಾವಿ ಬಸ್ ನಿಲ್ಧಾಣದ ಎದುರಿನ ರಸ್ತೆ ಬಂದ್ ಆಗಿ ಬರೊಬ್ಬರಿ ಎರಡು ವರ್ಷಾಯ್ತು ನೋಡಿ,ಅಂಡರ್ ಪಾಸ್ ನಿರ್ಮಿಸಲು ಸಿಬಿಟಿ ಬಸ್ ನಿಲ್ಧಾಣದ ಎದುರು ಅಗೆದಿರುವ ಈ ತೆಗ್ಗು ಎರಡನೇಯ ವಾರ್ಷಿಕೋತ್ಸವದ ಸಂಬ್ರಮದಲ್ಲಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ಧಾಣ,ಮತ್ತು ಸಿಟಿ ಬಸ್ ನಿಲ್ಧಾಣವನ್ನು ಜೋಡಿಸುವದಕ್ಕಾಗಿ ಅಂಡರ್ ಪಾಸ್ ನಿರ್ಮಿಸಲು, ಮುಖ್ಯ ರಸ್ತೆಯನ್ನೇ ಅಗೆದು ಎರಡು ವರ್ಷ ಕಳೆದರೂ,ಅಧಿಕಾರಿಗಳು ಅದನ್ನು ಮರೆತು ಬಿಟ್ಟಿದ್ದಾರೆ,ಶಾಸಕ ಅನೀಲ ಬೆನಕೆ ಈ ಕಾಮಗಾರಿ ಬೇಗ ಮುಗಿಸಿ ರಸ್ತೆ …

Read More »

ಬೆಳಗಾವಿ ಎಂಪಿ ಟಿಕೇಟ್ ಯಾರಿಗೆ? ಇವರೇ ಡಿಸೈಡ್ ಮಾಡ್ತಾರೆ…

ಬೆಳಗಾವಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ. ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, …

Read More »