ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸಕರಿಂದ ಸನ್ಮಾನ ಬೆಳಗಾವಿ (ಮೇ.03)* : ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜಿಲ್ಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿನಿಗೆ ಸನ್ಮಾನ ಮಾಡುವ ಕಾರ್ಯಕ್ರಮ ಜರುಗಿತು. ಸರ್ಕಾರಿ ಶಾಲೆಯಲ್ಲಿ ಓದಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/625 …
Read More »ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿ ರೂಪಾ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಶಾಲೆಯ ವಿಧ್ಯಾರ್ಥಿನಿ ರೂಪಾ ಪಾಟೀಲ್ 625 ಅಂಕ ಪಡೆದ ಟಾಪರ್ ಆಗಿದ್ದು, ಈ ವಿಧ್ಯಾರ್ಥಿನಿಯ ಸಾಧನೆಗೊಂದು ಸಲಾಂ ರೂಪಾ ಪಾಟೀಲ ಪುಟ್ಟ ಹಳ್ಳಿಯ …
Read More »20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಸಿಲಿಂಡರ್ ಕಳ್ಳತನ ಮಾಡಿದ್ದ ಆರೋಪಿ ರಾಜು ಪ್ರತಾಪರಾವ್ ಚಂದವಾನಿ (65) ( ಸಾ : ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ) ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೋಗಿ ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 2005 ರಿಂದ ತಲೆಮರೆಸಿಕೊಂಡಿದ್ದ. ಆರೋಪಿತನ ಪತ್ತೆಗಾಗಿ …
Read More »ಭದ್ರತಾ ವೈಫಲ್ಯಕ್ಕೆ ಇಬ್ಬರು ಪೋಲೀಸ್ ಪೇದೆಗಳು ಅಮಾನತು
ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಿನ್ನೆಯ ದಿನ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರು,ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ ಗೊಂದಲ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ವೈಫಲ್ಯಕ್ಕೆ ಇಬ್ಬರು ಪೇದೆಗಳನ್ನು ಅಮಾನತು ಮಾಡಲಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್,ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆ ಪೇದೆ ಬಿ.ಎ ನೌಕುಡಿ, ಕ್ಯಾಂಪ್ ಠಾಣೆ ಪೇದೆ ಮಲ್ಲಪ್ಪ ಹಡಗಿನಾಳ …
Read More »ಬೆಟ್ಟೀಂಗ್ ಬುಕ್ಕಿ ಬಾಸ್ ಅರೆಸ್ಟ್, ಮರಿ ಬುಕ್ಕಿಗಳಿಗೆ ಢವ, ಢವ…..!!
ಬೆಳಗಾವಿ – ಐಪಿಎಲ್ ಟೂರ್ನಮೆಂಟ್ ನಲ್ಲಿ ಭರ್ಜರಿ ಬೆಟ್ಟಿಂಗ್ ದಂಧೆ,ನಡೆಸಿದ್ದ ಜಾಲವನ್ನು ಬೆಳಗಾವಿ ಮಹಾನಗರದ ಸೈಬರ್ ಕ್ರೈಮ್ (CEN) ಪೋಲೀಸರು ಪತ್ತೆ ಮಾಡಿದ್ದು ಬೆಟ್ಟಿಂಗ್ ದಂಧೆಯ ಮುಖ್ಯ ರೂವಾರಿಯನ್ನು ಅರೆಸ್ಟ್ ಮಾಡಿದ್ದಾರೆ. ಐಪಿಎಲ್ ಮ್ಯಾಚಗಳಲ್ಲಿ ಲಕ್ಷಾಂತರ ರೂ ಗಳ ಬೆಟ್ಟಿಂಗ್ ವ್ಯವಹಾರ ನಡೆಸಿದ್ದ ಅಡ್ಡೆಯ ಮೇಲೆ ಸಿಇಎನ್ ಪೋಲೀಸರು ಸಿಪಿಐ ಗಡ್ಡೇಕರ್ ನೇತ್ರತ್ವದಲ್ಲಿ ದಾಳಿ ಮಾಡಿದ್ದು ಬೆಟ್ಟಿಂಗ್ ಬಾಸ್ ಉದ್ದವ ಜಯರಾಮದಾಸ್ ರೋಚಲಾನಿ( 61) ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು ಕರಣ್ …
Read More »ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್ ಇನ್ಬಿಲ್ಲ.
ಬೆಂಗಳೂರು: ಇಸ್ರೋ ಮಾಜಿ ಮುಖ್ಯಸ್ಥ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ‘ಪದ್ಮವಿಭೂಷಣ’ ಪ್ರಶಸ್ತಿ ಪುರಸ್ಕೃತ ಡಾ.ಕೆ.ಕಸ್ತೂರಿರಂಗನ್ (84) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಭಾನುವಾರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಸ್ತೂರಿರಂಗನ್ 1994ರಿಂದ 2003ರ ಅವಧಿಯಲ್ಲಿ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಇಸ್ರೋ ಹಲವು ಸಾಧನೆಗಳನ್ನು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಭಾರತದ ಪ್ರತಿಷ್ಠಿತ ಉಡಾವಣಾ …
Read More »ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!
ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿಗೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ ಹೆಸರಿನ ಎರಡು ಗಂಡು ಹುಲಿಗಳು …
Read More »ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…
ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. …
Read More »ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತಿಯ ಜೊತೆ ಮಿನಿಸ್ಟರ್….!!!
ಬೆಳಗಾವಿ – ಸ್ನೇಹಕ್ಕೆ ಗೆಳೆತನಕ್ಕೆ ಆಸ್ತಿ,ಅಂತಸ್ತು,ಅಧಿಕಾರ ಅಡ್ಡಿ ಬರೋದಿಲ್ಲ, ಮಂತ್ರಿಯಾದರೇನು ಬಾಲ್ಯದ ಗೆಳತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೋರಿಸಿದ್ದಾರೆ ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತೆಯ ಜೊತೆ ಜಾತ್ರೆಯಲ್ಲಿ ಹರಟೆ ಹೊಡೆದು ಬಾಲ್ಯದ ನೆನಪುಗಳನ್ನು ಮೆಲಕುಹಾಕಿದ್ದಾರೆ. ಚಿಕ್ಕಹಟ್ಟಿಹೊಳಿ ಗ್ರಾಮ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಹುಟ್ಟೂರು ಈ ಗ್ರಾಮದಲ್ಲಿ ಶ್ರೀ ವೀರಭದ್ರ ದೇವರ ಜಾತ್ರೆ ನಡೆಯುತ್ತಿದೆ. ಜಾತ್ರೆಗಾಗಿ ಊರಿಗೆ ಹೋದ ಲಕ್ಷ್ಮೀ ಹೆಬ್ಬಾಳಕರ್ ಬಾಲ್ಯದ ಸ್ನೇಹಿತೆ …
Read More »ಮೂರು ಮಕ್ಕಳ ತಾಯಿಗೆ ಭೀಕರವಾಗಿ ಹತ್ಯೆ ಮಾಡಿದ ಅಕ್ಕನ ಗಂಡ
ಬೆಳಗಾವಿ -ಕುಡಿದ ಮತ್ತಿನಲ್ಲಿ ಮೂರು ಮಕ್ಕಳ ತಾಯಿ ಬರ್ಬರ ಹತ್ಯೆ ಮಾಡಿದ ಘಟನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೆ ಸುಜಾತಾ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ. ಉಂಡು ಮಲಗಿದ ಮೇಲೆ ಮನೆ ಬಾಗಿಲು ಬಡಿದು ಮಲಗಲು ಅಕ್ಕನ ತಂಗಿಯನ್ನು ಕರೆದಿದ್ದ ಈರಯ್ಯಗೆ ನಿರಾಕರಿಸಿದ್ದಕ್ಕೆ ಚಾಕು ಇರಿದಿದ್ದಾನೆ. ಅಕ್ಕ ತಂಗಿ ಇಬ್ಬರನ್ನ ಒಂದೇ ಊರಿನ ಅಕ್ಕಪಕ್ಕದ ಮನೆಯವರಿಗೆ ಮದುವೆ ಮಾಡಿಕೊಟ್ಟಿದ್ದ ಪೋಷಕರು. ಅಕ್ಕ ಸುಜಾತಾ ಮಂಜುನಾಥ ಚತ್ರಕೋಟಿ(24) ಕೊಲೆಯಾದ …
Read More »