Breaking News
Home / Breaking News (page 34)

Breaking News

ಹಣಕಾಸಿನ ವ್ಯವಹಾರ ಓರ್ವನ ಮೇಲೆ ಫೈರೀಂಗ್…

.ಬೆಳಗಾವಿ: ಹಣಕಾಸಿನ ವ್ಯವಹಾರಕ್ಕೆ ಯೋಧರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ರಿವಾಲ್ವರ್ ನಿಂದ ಹಾರಿಸಿದ ಗುಂಡು ಯೋಧನ ಹೊಟ್ಟೆಗೆ ತಗುಲಿ ಗಂಭೀರ ಗಾಯಗೊಂಡ ಘಟನೆ ಗೋಕಾಕ ತಾಲೂಕಿನ ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಗೋಕಾಕ ತಾಲೂಕಿನ ರಾಜನಕುಟ್ಟೆ ಗ್ರಾಮದ ನಂಜುಂಡಿ ಲಕ್ಷ್ಮಣ ಬೂದಿಹಾಳ(32) ಗುಂಡು ಹಾರಿಸಿದ್ದು, ಅದೇ ಗ್ರಾಮದ ಬಸಪ್ಪ ಮೈಲಪ್ಪ ಬಂಬರಗಾ(32) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಭಾರತೀಯ ಸೇನೆಯಲ್ಲಿ …

Read More »

ಜನತಾ ದರ್ಶನದಲ್ಲಿ ಊಟದ ವ್ಯವಸ್ಥೆ ಮಾಡಿದ ಕಾಕಾ…!!

ಬೆಳಗಾವಿ-ಒಬ್ಬ ನಾಯಕ ಹೇಗಿರಬೇಕು,ಆತನ ಜವಾಬ್ದಾರಿಗಳೇನು ಅನ್ನೋದನ್ನು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಯವರನ್ನು ನೋಡಿ ಕಲಿಯಬೇಕು, ಯಾಕಂದ್ರೆ ಅವರಲ್ಲಿರುವ ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿ. ಇಂದು ಬೆಳಗಾವಿಯ ಕೆಪಿಟಿಸಿಎಲ್ ಹಾಲ್ ನಲ್ಲಿ ಜನತಾ ದರ್ಶನ ನಡೆಯಿತು,ಬೆಳಗಾವಿ ಜಿಲ್ಲೆಯ ಮೂಲೆ ಮೂಲೆಗಳಿಂದ ಸಾರ್ವಜನಿಕರು ತಮ್ಮ ಅಹವಾಲು ಹೇಳಿಕೊಳ್ಳಲು ಬೆಳಗಾವಿಗೆ ಆಗಮಿಸಿದ್ದರು .ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಅವರು ಜನತಾ ದರ್ಶನದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಸ್ವಂತ ಖರ್ಚಿನಲ್ಲಿ …

Read More »

ಜನತಾ ದರ್ಶನದಲ್ಲಿ ಸಾರ್ವಜನಿಕರ ದಂಡು….!!

ಬೆಳಗಾವಿ,-ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ್ ಹುಕ್ಕೇರಿ ಅವರು ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಮಂಗಳವಾರ(ಸೆ.26) ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ …

Read More »

ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು

ಬೆಳಗಾವಿ, -ಒಂದು ದೇಶ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿರುವ ಮಕ್ಕಳು ಆರೋಗ್ಯ, ಪ್ರಜ್ಞಾವಂತ, ದೈಹಿಕವಾಗಿ, ಶಾರೀರಿಕವಾಗಿ ಸದೃಢವಾಗಿರಬೇಕು. ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿದಾಗ ಮಾತ್ರ ಆರೋಗ್ಯವಂತ ಮಕ್ಕಳ ಜನನವಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ …

Read More »

ಐದು ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಕಳಿಸಲು ನಿರ್ಧಾರ- DC

ಬೆಳಗಾವಿ, ಸೆ.): “ಕಳೆದ ವರ್ಷ ಸರಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ(ಸೆ.26) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಐದು ಕೋಟಿ ರೂಪಾಯಿ …

Read More »

ಇಂದು ಬೆಳಗಾವಿಯಲ್ಲಿ ಇಬ್ಬರೂ ಮಂತ್ರಿಗಳ ಕಾರ್ಯಕ್ರಮ…!!

ಬೆಳಗಾವಿ -ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಬ್ಬರೂ ಮಂತ್ರಿಗಳ ಕಾರ್ಯಕ್ರಮ ಬೆಳಗಾವಿ ನಗರದಲ್ಲಿ ಪ್ರತ್ಯೇಕವಾಗಿ ಏಕಕಾಲಕ್ಕೆ ಜರುಗಲಿವೆ. ಇದು ಆಕಸ್ಮಿಕವೋ ಅಥವಾ ಸಮಯದ ಅಭಾವವೋ ಗೊತ್ತಿಲ್ಲ,ಆದ್ರೆ ಇತ್ತೀಚೆಗೆ ಇಬ್ಬರು ಮಂತ್ರಿಗಳು ಒಂದೇ ದಿನ ಬೆಳಗಾವಿ ನಗರದಲ್ಲಿ ಕಾಣಿಸಿಕೊಳ್ತಾರೆ,ಇಬ್ಬರೂ ಮಂತ್ರಿಗಳು ಬೆಳಗಾವಿಗೆ ಬಂದಾಗ ಕಾರ್ಯಕ್ರಮ ಆಯೋಜನೆ ಮಾಡ್ತಾರೆ. ಎರಡೂ ಕಾರ್ಯಕ್ರಮ ಒಂದೇ ದಿನ ಇರ್ತಾವೆ ಕಾರ್ಯಕ್ರಮಗಳ ಟೈಮೀಂಗ್ ಕೂಡಾ ಒಂದೇ ಆಗಿರುತ್ರದೆ. ಇದು ಬೆಳಗಾವಿ …

Read More »

ಬೆಳಗಾವಿ: ಲಾರಿಗೆ ಕರೆಂಟ್ ಶಾಕ್, ಓರ್ವನ ಬಲಿ…

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾದಲ್ಲಿ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊರ್ವ ಲಾರಿ ಚಾಲಕನ ನಿರ್ಲಕ್ಷತನದಿಂದ ಲಾರಿಗೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ ಘಟನೆ ಸುರೇಬಾನದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸ್ಥಳೀಯ ವ್ಯಾಪಾರಸ್ಥರು ಹಾಗೂ ಲಾರಿ‌ ಮಾಲೀಕರಾದ ರಾಮಚಂದ್ರ ಪಾಂಡಪ್ಪ ರಾಮಚಂದ್ರಪ್ಪ ಗೋಕಾವಿ ಎಂಬುವವರ ಲಾರಿಯಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮೃತಪಟ್ಟ ದುರ್ದೈವಿ ಮನಿಹಾಳ ಗ್ರಾಮದ ನಿವಾಸಿ ಈರಪ್ಪ ಮಾರುತೆಪ್ಪ ಕಟಾವಕರ (೫೨) ಎಂದು ತಿಳಿದು ಬಂದಿದೆ. ಲಾರಿಯಲ್ಲಿದ್ದ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ ಇನಾಮ್ದಾರ್ ಚಿತ್ರ ತಂಡ..

ಸವದತ್ತಿ: ಸ್ಯಾಂಡಲ್ವುಡ್ ನಲ್ಲಿ ಸದ್ದು ಮಾಡುತ್ತಿರುವ ಇನಾಮ್ದಾರ್ ಚಿತ್ರ ಇದೀಗ ಸೌದತ್ತಿ ಎಲ್ಲಮ್ಮ ಗುಡ್ಡದಲ್ಲಿ ನಟ ರಂಜಿನ್ ಛತ್ರಪತಿ, ನಿರ್ದೇಶಕ ಸಂದೇಶ ಶೆಟ್ಟಿ ಹಾಗೂ ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು ಸೇರಿದಂತೆ ಚಿತ್ರತಂಡದ 45 ಜನ ಉರುಳು ಸೇವೆ ಮಾಡುವುದರ ಮೂಲಕ ಚಿತ್ರದ ಯಶಸ್ವಿಗೆ ಶ್ರೀ ದೇವರ ಮೊರೆ ಹೋಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ಗಟ್ಟಿ ನೆಲದ ಯುವಕ ರಂಜನ್ ಚತ್ರಪತಿ ಮೊದಲ ಬಾರಿಗೆ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡುತ್ತಿರುವ …

Read More »

ಕಬ್ಬಿನ ತೋಟದಲ್ಲಿ ಗಾಂಜಾ ಘಾಟು…!!

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದ ಲಕ್ಕಪ್ಪ ಬಾಲಪ್ಪ ಮೇತ್ರಿ ಊರ್ಫ ಮಾದರ ಈತನ ಹೊಲದಲ್ಲಿ ಅಭಕಾರಿ ಅಧಿಕಾರಿಗಳ ದಾಳಿ ಅಂದಾಜು 35000=00 ರೂ. ಮೌಲ್ಯದ ಗಾಂಜಾ ಗಿಡಗಳು ಜಪ್ತಿ ಮಾಡಿದ್ದಾರೆ. ದಿನಾಂಕ: 20/09/2023 ರಂದು ಮಾನ್ಯ ಅಬಕಾರಿ ಆಯುಕ್ತರಾದ ಡಾ!! Y ಮಂಜುನಾಥ, ಬೆಳಗಾವಿ ಕೇಂದ್ರ ಸ್ಥಾನ ಹಾಗೂ ಬೆಳಗಾವಿ ದಕ್ಷಿಣ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಕುಮಾರಿ ವನಜಾಕ್ಷೀ, ಎಮ್ ಇವರ ಮಾರ್ಗದರ್ಶನದಲ್ಲಿ ಮತ್ತು ರಾಮನಗೌಡರ …

Read More »

ಕಿತ್ತೂರು ಉತ್ಸವ: ಪೂರ್ವಭಾವಿ ಸಭೆ ಸೆ.ರಂದು 26 ರಂದು

ಬೆಳಗಾವಿ, -ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ(ಸೆ.26) ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಲಿದೆ. ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ***

Read More »