ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ಎಲ್ಲ ಜಲಾಶಯಗಳು ತುಂಬುತ್ತಿವೆ. ಮಹಾರಾಷ್ಡ್ರದಿಂದ ಹರಿದು ಬೆಳಗಾವಿಗೆ ಬರುವ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಮಹಾರಾಷ್ಡ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆಗಳಿದ್ದು ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಶುರುವಾಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿ ಸಾರ್ವಜನಿಕರಿಗೆ ಎಲ್ಲ ರೀತಿಯ ಅನಕೂಲಕತೆಗಳನ್ನು ಕಲ್ಪಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ …
Read More »ಬೆಳಗಾವಿ ಪರವಾಗಿ ದೆಹಲಿಯಲ್ಲಿ ಶೆಟ್ಟರ್ ಭರ್ಜರಿ ಬ್ಯಾಟೀಂಗ್
ನವದೆಹಲಿ-ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ ಬೆಳಗಾವಿಯಲ್ಲಿ ಇರುವ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರದ ಕುರಿತು ಚರ್ಚೆ ಮಾಡಿದ್ರು ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು , ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ …
Read More »ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ವಾರ್ನಿಂಗ್..
ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿಯ ದಡದಲ್ಲಿರುವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಒಟ್ಟು 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಈಗಾಗಲೇ 44 …
Read More »ನಾಳೆ ಗುರುವಾರ ಮತ್ತು ಶುಕ್ರವಾರ ಮತ್ತೆ ಎರಡು ದಿನ ಶಾಲೆಗಳಿಗೆ ರಜೆ
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ, ನಾಳೆ ಗುರುವಾರ ಮತ್ತು ಶುಕ್ರವಾರ ಎರಡು ದಿನ ಮೆಲ್ಕಾಣಿಸಿದ ಆರು ತಾಲ್ಲೂಕುಗಳ ಶಾಲೆಗಳೆಗೆ ರಜೆ ಘೋಷಣೆ ಮಾಡಲಾಗಿದೆ. ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Read More »ಮಹಾರಾಷ್ಟ್ರದಲ್ಲಿ ಮಹಾ ಮಳೆ, ಬೆಳಗಾವಿಯಲ್ಲಿ ತುರ್ತು ಸಭೆ….
ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ———————————— * ಒಳಹರಿವು ಆಧರಿಸಿ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್ ——————————— ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, – ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ …
Read More »ಶಾಸಕರ ಚೆಸ್ ಕಪ್ ನಲ್ಲಿ ಬೆಳಗಾವಿ ಜಿಲ್ಲೆಗೂ ಬಹುಮಾನ
ಬೆಂಗಳೂರು-ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಈ ಪಂದ್ಯಾವಳಿ ಆಯೋಜಿಸಿದ್ದು, ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದು ನೋಡುಗರ ಹುಬ್ಬೇರುವಂತೆ ಮಾಡಿತು. ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ …
Read More »ಮೂಡನಂಬಿಕೆಗೆ ನಂಬಿ, ಮಕ್ಕಳನ್ನೇ ಕೊಲೆ ಮಾಡಿದ ತಂದೆಗೆ ಶಿಕ್ಷೆ
ಬೆಳಗಾವಿ ಮೂಢನಂಬಿಕೆ ನಂಬಿ ತನ್ನ ಹೆತ್ತ ಇಬ್ಬರು ಹೆಣ್ಣು ಮಕ್ಕಳನ್ನೇ ಹತ್ಯೆ ಮಾಡಿದ ಆರೋಪಿ ತಂದೆಗೆ ಬೆಳಗಾವಿಯ 6ನೇ ಹೆಚ್ಚುವರಿ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕಂಗ್ರಾಳಿ ಕೆಎಚ್ ಗ್ರಾಮದ ನಿವಾಸಿ ಅನಿಲ ಚಂದ್ರಕಾಂತ ಬಾದೇಕರ ಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ತನ್ನ ಮನೆ ಮಾರಾಟಕ್ಕಿಟ್ಟಿದ್ದು, ಆದರೆ, ಖರೀದಿ ಮಾಡಲು ಯಾರೂ ಬರದ ಕಾರಣ ಮಾನಸಿಕವಾಗಿ ನೊಂದಿದ್ದ. ರಾತ್ರಿ …
Read More »ನಾಳೆ ಬುಧವಾರ ,ಬೆಳಗಾವಿ,ಕಿತ್ತೂರು, ಬೈಲಹೊಂಗಲ ,ಖಾನಾಪೂರ ಶಾಲೆಗಳಿಗೆ ರಜೆ ಘೋಷಣೆ
ನಾಳೆಯೂ ಶಾಲೆಗಳಿಗೆ ರಜೆ ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಳಗಾವಿ ಸಿಟಿ,ಬೆಳಗಾವಿ ತಾಲ್ಲೂಕು, ಖಾನಾಪೂರ,ಕಿತ್ತೂರು ಮತ್ತು ಬೈಲಹೊಂಗಲ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಬಬುಧವಾರ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ನಾಳೆ ಬುಧವಾರ ಶಾಲೆಗಳಿಗೆ ರಜೆ ಇರುತ್ತದೆ. ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ …
Read More »ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ನಿರ್ಲಕ್ಷ್ಯ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಟೀಕೆ
ಬೆಳಗಾವಿ: ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು 7ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯವನ್ನು ಪ್ರಕಟಣೆಯಲ್ಲಿ ತಿಳಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಹೈದರಾಬಾದ್-ಕರ್ನಾಟಕ ಕಾರಿಡಾರ್ ಯೋಜನೆ ಬಿಟ್ಟರೆ, ಕರ್ನಾಟಕಕ್ಕೆ ಬಹುಬೇಡಿಕೆಯ ರೈಲ್ವೆ ಯೋಜನೆಯಾಗಲಿ, ನೀರಾವರಿ ಯೋಜನೆಗಳಾಗಲಿ ಘೋಷಣೆ ಮಾಡಿಲ್ಲ ಎಂದು ಟೀಕಿಸಿದ್ದಾರೆ. ಕೇಂದ್ರ …
Read More »“ಸರ್ವೋತ್ತಮ” ಬಜೆಟ್ – ಬಾಲಚಂದ್ರ ಜಾರಕಿಹೊಳಿ
ಗೋಕಾಕ-* ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಜನ ಮತ್ತು ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಸಂಬಂಧಿಸಿದಂತೆ ಮಾಧ್ಯಮಗಳಿಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು ನಡುವೆ ಇಂಡಸ್ಟ್ರಿಯಲ್ ಕಾರಿಡಾರ್ ಘೋಷಣೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ 100 ಆಯ್ದ ನಗರಗಳಲ್ಲಿ ಫುಡ್ ಸ್ಟ್ರೀಟ್ …
Read More »