ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನದಟ್ಟಣೆ ಕಾರಣಕ್ಕೆ ಎರಡನೇ ವಿಮಾನ ನಿಲ್ದಾಣ …
Read More »ಆರು ವರ್ಷ ಬಿಜೆಪಿಯಿಂದ ಬಸನಗೌಡ ಯತ್ನಾಳ್ ಉಚ್ಛಾಟನೆ.
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ …
Read More »ಗ್ಯಾರಂಟಿ ಬ್ಯಾನರ್ ಹರಿದ ಬಿಜೆಪಿ ನಾಯಕರ ವಿರುದ್ದ ಕೇಸ್ ಬಿತ್ತು…!
ಬೆಳಗಾವಿ-ಬಿಜೆಪಿ ಪ್ರತಿಭಟನೆ ವೇಳೆ ಸರ್ಕಾರದ ಗೃಹಲಕ್ಷ್ಮಿ ಬ್ಯಾನರ್ ಹರಿದವರ ವಿರುದ್ದ ಪ್ರಕರಣ ದಾಖಲಾಗಿದೆ.ಬಿಜೆಪಿ ಮುಖಂಡರು ಸೇರಿ ಒಟ್ಟು 23 ಜನರ ವಿರುದ್ಧ ಕೇಸ್ ದಾಖಲಾಗಿದೆ. A1 ಮುರಗೇಂದ್ರಗೌಡ ಪಾಟೀಲ್, A2 ಶ್ವೇತಾ ಜಗದಾಳೆ, A3 ಪ್ರಶಾಂತ ಅಮಿನಬಾವಿ, A 4 ಮಹಾಂತೇಶ ವಕ್ಕುಂದ ಸೇರಿ ಮುಖಂಡರು, ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ.ಪ್ರತಿಭಟನೆಯಲ್ಲಿದ್ದ ಮಾಜಿ ಶಾಸಕರ ಹೆಸರನ್ನು ಪೊಲೀಸರು ಕೈಬಿಟ್ಟಿದ್ದಾರೆ.ಯಾಕಂದ್ರೆ ಅವರು ಪ್ರತಿಭಟನೆಯ ಸಂಧರ್ಭದಲ್ಲಿ ಶಾಂತ ರಾಗಿದ್ದರು.ಬೆಳಗಾವಿ ಮಾರ್ಕೆಟ್ ಪೊಲೀಸ್ …
Read More »ಲವ್ ಬ್ರೇಕಪ್ ಬೆಳಗಾವಿಯಲ್ಲಿ ಐಶ್ವರ್ಯ ಸೂಸೈಡ್ ….!!
ಬೆಳಗಾವಿ- ಬಹುಶ ಲವ್ ಬ್ರೇಕಪ್, ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಸೂಸೈಡ್ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೂ ಮುನ್ನ ಗೆಳತಿಯೊಂದಿಗೆ ಮಾತನಾಡಿ ರೂಮ್ ಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಸ್ನೇಹಿತ ಪಿಜಿಗೆ ಬಂದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಬೆಳಗಾವಿಯ ನೆಹರೂ ನಗರದ ಪಿಜಿಯಲ್ಲಿ ನೇಣುಬೀಗಿಕೊಂಡು ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿಜಯಪುರ ಜಿಲ್ಲೆಯ ಐಶ್ವರ್ಯ ಗಲಗಲಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದ ಐಶ್ವರ್ಯ,ವಿಜಯಪುರದಲ್ಲಿಯೇ ಎಂಬಿಎ ವ್ಯಾಸಾಂಗ ಮಾಡಿದ್ದಳು.ಕಳೆದ ಮೂರು ತಿಂಗಳಿನಿಂದ …
Read More »ಎತ್ತಿನಬಂಡಿ ಸ್ಪರ್ದೆ ,ಚಕ್ರದಲ್ಲಿ ಸಿಲುಕಿ ಯುವಕನ ಸಾವು
ಬೆಳಗಾವಿ-ಎತ್ತಿನಬಂಡಿ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಸಾವನ್ನೊಪ್ಪಿದ್ದಾನೆ.ಬೆಳಗಾವಿ ತಾಲೂಕಿನ ಬಸವನ ಕುಡಚಿ ಗ್ರಾಮದ ಜಾತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಅಪ್ಪಣ್ಣ ಪಾರೀಶ ಪಾಟೀಲ್ ( 27) ಮೃತ ಯುವಕನಾಗಿದ್ದಾನೆ.ಬಸವನ ಕುಡಚಿ ಗ್ರಾಮದ ಜಾತ್ರೆ ನಿಮಿತ್ತ ಎತ್ತಿನಬಂಡೆ ಸ್ಪರ್ಧೆಯನ್ನು ಗ್ರಾಮಸ್ಥರು ಹಮ್ಮಿಕೊಂಡಿದ್ದರು,ಈ ವೇಳೆ ಓಡುತ್ತಿದ್ದ ಎತ್ತಿನಬಂಡಿ ಚಕ್ರದಡಿ ಸಿಲುಕಿದ್ದ ಅಪ್ಪಣ್ಣ ಗಂಭೀರವಾಗಿ ಗಾಯಗೊಂಡಿದ್ದ,ಗಾಯಗೊಂಡಿದ್ದ ಅಪ್ಪಣ್ಣನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಿಸದೇ ಇಂದು ಖಾಸಗಿ …
Read More »ಬೆಳಗಾವಿಯಲ್ಲಿ 3 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ
ಮಹಿಳಾ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಮಾ.24(ಕರ್ನಾಟಕ ವಾರ್ತೆ):ಮಹಿಳೆಯರು ಸಬಲರಾಗಿ ದೇಶವನ್ನು ಮುನ್ನಡೆಸಬೇಕಿದೆ. ಹೆಣ್ಣು-ಗಂಡು ಸಮಾನರು ಎಂಬ ಬಸವಣ್ಣನವರ ತತ್ವದಂತೆ ಸಿದ್ದರಾಮಯ್ಯನವರ ಸರ್ಕಾರ ನಡೆಯುತ್ತಿದೆ. ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …
Read More »ಬ್ಯಾಂಕ್ ವಂಚನೆ ದುಡ್ಡು ಸ್ವಾಮೀಜಿ ಖಾತೆಗೆ, ಬಬಲಾದಿ ಮುತ್ಯಾ ಅರೆಸ್ಟ್…!!
ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ ಬೆಳಗಾವಿ: ಗೋಕಾಕಿನ ಮಹಾಲಕ್ಷ್ಮಿ ಕೋಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಜಮಖಂಡಿಯ ಹೊಸ ಬಬಲಾದಿ ಮಠದ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಠ ಬಾಗಲಕೋಟೆಯ ಜಮಖಂಡಿಯಲ್ಲಿದೆ. ಮಠದ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಗೋಕಾಕ ನಗರ ಠಾಣೆಯಲ್ಲಿ ಸಿಐಡಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. …
Read More »ಮಿನಿಸ್ಟರ್ ಸತೀಶ್ ಜಾರಕಿಹೊಳಿ ಅವರಿಗೆ ಡಾಕ್ಟರೇಟ್
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜಕೀಯ ಕ್ಷೇತ್ರದಲ್ಲಿ ಪ್ರಭಾವ ಹೊಂದುವ ಜೊತೆಗೆ ಸಾಮಾಜಿಕ ಸುಧಾರಣೆಗಾಗಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಜನಮನ ಗಳಿಸಿದ್ದು ರಾಜ್ಯದ ಮೈಸೂರು ಓಪನ್ ಯುನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ …
Read More »ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ
ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ‘ಮಹಾರಾಷ್ಟ್ರ ಸರ್ಕಾರ ಆಮಿಷ ಒಡ್ಡುವ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪುಂಡಾಟಿಕೆ ನಡೆಸಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ‘ಮಹಾ’ ಷಡ್ಯಂತ್ರ ನಡೆಸಿದೆ.ಕರ್ನಾಟಕ ಸರ್ಕಾರದಿಂದ ಮರಾಠಿ ಭಾಷಿಕರಿಗೆ ಅನ್ಯಾಯ ಎಂದು ಬಿಂಬಿಸಲು ಮಹಾರಾಷ್ಟ್ರ ಸರ್ಕಾರ ಯತ್ನಿಸಿದೆ.ಆರೋಗ್ಯ ಕ್ಷೇತ್ರ ಬಳಿಕ ಈಗ ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೂ …
Read More »ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!
ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಇಂದು ಮಾರ್ಚ್ 18ರಿಂದ 26ರ ವರೆಗೆ ನಡೆಯಲಿದ್ದು, ಭವ್ಯ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಅಧ್ಯಕ್ಷ ದೇವಣ್ಣ ಬಂಗೇನ್ನವರ ತಿಳಿಸಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿ ಐದು …
Read More »