ಬೆಳಗಾವಿ-ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಪಾಪಿ ಅಣ್ಣಾ, ಹತ್ಯೆ ಮಾಡಿದ ಬಳಿಕ ಠಾಣೆಗೆ ಹಾಜರಾಗಿದ್ದಾನೆ.ಆಸ್ತಿವಿವಾದ, ಕುಡಿತದ ಚಟ, ಕಿರುಕುಳಕ್ಕೆ ಬೇಸತ್ತು ಸಹೋದರನ ಭೀಕರ ಹತ್ಯೆ ಮಾಡಿದ್ದಾನೆ ಎಂದು ಗೊತ್ತಾಗಿದೆ.ಈ ಘಟನೆ ನಡೆದಿದ್ದು,ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ ಜಮೀನಿನಲ್ಲಿ. ಯರಗಟ್ಟಿಯ ಗೋಪಾಲ ಬಾವಿಹಾಳ( 27) ಹತ್ಯೆಯಾದ ದುರ್ದೈವಿಯಾಗಿದ್ದು,ಮಾರುತಿ ಬಾವಿಹಾಳ(30) ತಮ್ಮನನ್ನೇ ಹತ್ಯೆ ಮಾಡಿದ ಪಾಪಿ ಅಣ್ಣ ಎಂದು ಗೊತ್ತಾಗಿದೆ.ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು …
Read More »ನನ್ನನ್ನು ರಾತ್ರಿಯಿಡಿ ಟೆರರಿಸ್ಟ್ ರೀತಿ ನೋಡಿದ್ರು- ಸಿಟಿ ರವಿ
ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಈ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಿ.ಟಿ. ರವಿ ನನ್ನಗೆ ಹೈಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ …
Read More »ನಾಳೆ ಶನಿವಾರ ಹೆಬ್ಬಾಳಕರ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ
ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಕೆಟ್ಟ ಶಬ್ದ ಬಳಿಸಿ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹೆಬ್ಬಾಳಕರ್ ಅಭಿಮಾನಿಗಳು …
Read More »ಸಿ.ಟಿ. ರವಿಗೆ ಹೈಕೋರ್ಟ್ ವತಿಯಿಂದ ಬಿಗ್ ರಿಲೀಫ್…..!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ …
Read More »ಇಡೀ ರಾತ್ರಿ ಠಾಣೆಯಿಂದ ಠಾಣೆಗೆ ಸಿಟಿ ರವಿ ಶಿಪ್ಟ್…..!!
ನಿನ್ನೆ ಮಧ್ಯಾಹ್ನ ದಿಂದ ಇಂದು ಬೆಳಗಿನ ಜಾವದವರೆಗೆ ಘಟನೆಯ ಸಂಪೂರ್ಣ ವಿವರ ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಿನ್ನೆ ಮಧ್ಯಾಹ್ನದಿಂದ ವಿಧಾನ ಪರಿಷತ್ತಿನ ಕಲಾಪದಲ್ಲಿ ಶುರುವಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸಿಟಿ ರವಿ ನಡುವಿನ ವಾಕ್ ಸಮರ ಅಕ್ಷರಶಃ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷವಾಯ್ತು. ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸದನದಲ್ಲಿ ಕೆಟ್ಟ ಶಬ್ದ ಬಳಿಸಿ ನನ್ನನ್ನು ಅವಮಾನಿಸಿದ್ದಾರೆ.ವೈಯಕ್ತಿಕವಾಗಿ ನನ್ನ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ …
Read More »ಸುವರ್ಣಸೌಧದ ಅಂಗಳದಲ್ಲಿ ಸಿಟಿ ರವಿ ಕಾರಿಗೆ ಘೇರಾವ್ ಹಾಕಿದ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು
ಬೆಳಗಾವಿ- ಸುವರ್ಣ ವಿಧಾನಸೌಧದ ಮೆಟ್ಟಿಲು ಬಳಿ ಸಿಟಿ ರವಿ ಕಾರಿಗೆ ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರು ಮುತ್ತಿಗೆ ಹಾಕಿ. ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಿಟಿ ರವಿ ಕಾರಿನ ಡೋರ್ ಎಳೆದು ಹೊರ ತೆಗೆಯಲು ಯತ್ನಿಸಿದ ಹೆಬ್ಬಾಳಕರ್ ಬೆಂಬಲಿಗರು ಸಿಟಿ ರವಿ ಕುಳಿತುಕೊಂಡಿದ್ದ ಕಾರಿಗೆ ಘೇರಾವ್ ಹಾಕಿ ದಿಕ್ಕಾರದ ಘೋಷಣೆಗಳನ್ನು ಕೂಗಿದರು.ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿ ಬೆಂಬಲಗರನ್ನ ತಡೆದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.ಸ್ಥಳದಲ್ಲಿ ಕೆಲ ಕಾಲ …
Read More »ಬೆಳಗಾವಿಯಲ್ಲಿ ಗಾಂಧಿ ತಾತ ಏರಿದ ಕಾರಿಗೆ ಹುಡುಕಾಟ…
ಬೆಳಗಾವಿ-ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಇದೀಗ ನೂರನೇ ವರ್ಷದ ಸಂಭ್ರಮಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕಾಂಗ್ರೆಸ್ ಅಧಿವೇಶನದ ಸ್ಮರಣೆಗಾಗಿ ಡಿ. 26 ಮತ್ತು 27 ರಂದು ಕಾಂಗ್ರೆಸ್ ಅಧಿವೇಶನದ ಕಾರ್ಯಕ್ರಮ ಆಯೋಜಿಸಲಾಗಿದೆ.1924ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಮಹಾತ್ಮ ಗಾಂಧೀಜಿ ಅವರನ್ನು ಕಾರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಗಾಂಧೀಜಿ ಅವರಿಗೆ ಬೆಳಗಾವಿಯ ಬೋರಾಗವೇಸ್ ಬಳಿಯಿರುವ ಜಾಂಬೋಟಕರ ಕುಟುಂಬದವರು ತಮ್ಮ ಕಾರನ್ನು ನೀಡಿದ್ದರು. ಹಾಗಾಗಿ, ಸರ್ಕಾರ ಆ …
Read More »ನಮಗೆ ಲಾಲಿ ಪಾಪ್ ಬೇಡ, ಸಮಸ್ಯೆಗಳಿಗೆ ಪರಿಹಾರ ಬೇಕು- ಅಭಯ ಪಾಟೀಲ
ಬೆಳಗಾವಿ -ಬೆಳಗಾವಿಯಲ್ಲಿ ಸುವರ್ಣಸೌಧ ಆದಾಗಿನಿಂದ ಬೆಳಗಾವಿಗೆ ಅನ್ಯಾಯ ಆಗುತ್ತಲೇ ಇದೆ.ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸುವ ಬದಲು ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ ಇದನ್ನು ಮಿನಿ ವಿಧಾಸೌದ ಮಾಡಿದ್ದಾರೆ. ಬೆಳಗಾವಿಯ ಸುವರ್ಣಸೌಧ ಭೂತ ಬಂಗಲೆಯಾಗಿದೆ.ಇದೊಂದು ಟೂರೀಂಗ್ ಟಾಕೀಸ್ ಆಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿಧಾನಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ನಡೆದ ಚಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಭಯ ಪಾಟೀಲ, ಬೆಂಗಳೂರಿನಲ್ಲಿ ನಡೆಯುವ …
Read More »ವಿಧಾನಸಭೆಯಲ್ಲಿ ಖಡಕ್ ವಾದ ಮಂಡಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ….!
ಬೆಳಗಾವಿ -ವಿಧಾನಸಭೆಯಲ್ಲಿ ರಾಜ್ಯದ ಪರವಾಗಿ, ಬೆಳಗಾವಿಯ ಪರವಾಗಿ ಖಡಕ್ ವಾದ ಮಂಡಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಾಡದ್ರೋಹಿ ಎಂ ಈ ಎಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಲಕ್ಷ್ಮಣ ಸವದಿ ಮಹಾರಾಷ್ಟ್ರದ ಮತಿಗೇಡಿಯೊಬ್ಬ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡುವಂತೆ ಹೇಳಿಕೆ ಕೊಟ್ಡಿದ್ದಾನೆ. ಆದ್ರೆ ಇದು ಮುಂಬೈ ಕರ್ನಾಟಕ ಪ್ರದೇಶ ಮೊದಲು ಮುಂಬಯಿ ಕೇಂದ್ರಾಡಳಿತ ಪ್ರದೇಶ ಎಂದು …
Read More »ಬೆಳಗಾವಿಗೆ ಕಾಂಗ್ರೆಸ್ ರಾಷ್ಟ್ರನಾಯಕರ ದಂಡು, ಇಂದು ಹೈ ಪವರ್ ಮೀಟೀಂಗ್
ಬೆಳಗಾವಿ- 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರು ನಡೆಸಿದ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 26 ಹಾಗೂ 27 ರಂದು ಬೆಳಗಾವಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದ ಕಾರ್ಯಕ್ರಮವನ್ನಾಗಿಸಲು ರಾಷ್ಟ್ರಮಟ್ಟದ ಕಾಂಗ್ರೆಸ್ ನಾಯಕರ ದಂಡು ಬೆಳಗಾವಿಗೆ ಆಗಮಿಸಿದೆ. ಇಂದು ಮಂಗಳವಾರ ಬೆಳಿಗ್ಗೆ 11-00 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಸಭೆಯಲ್ಲಿ ಎಐಸಿಸಿ …
Read More »