Breaking News

Breaking News

ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ..ಪ್ರೇಮಿ ವೈಲೆಂಟ್…ಪೋಲಿಸ್ರು ಸೈಲೆಂಟ್..!!

ಬೆಳಗಾವಿ- ನೋಡಲು ಧಾಡಸಿ,ಈತನ ಹೆಸರು ತಿಪ್ಪಣ್ಣ, ಈತನ ಹುಚ್ಚಾಟ ನೋಡಿದ್ರೆ ನಗಬೇಕೋ..ಅಳಬೇಕೋ ಗೊತ್ತಾಗುತ್ತಿಲ್ಲ,ಊರಲ್ಲಿ ಇರುವ ಅಸಹಾಯಕ ಹುಡಗಿಯ ಹಿಂದೆ ಬಿದ್ದಿದ್ದಾನೆ.ನನ್ನ ಮದುವೆ ಆಗಬೇಕು ಅಂತಾ ಆ ಹುಡುಗಿಗೆ ಪೀಡಿಸುತ್ತಿದ್ದಾನೆ.ನಿನ್ನೆ ಈ ತಪ್ಪಣ್ಣ ಹುಡಗಿಯ ಮನೆಯ ಮೇಲೆ ಕಲ್ಲು ತೂರಾಟ ಮಾಡಿ ಹಾರಾಡಿದ್ರು ಈತನಿಗೆ ಲಗಾಮು ಹಾಕುವದರಲ್ಲಿ ಲೋಕಲ್ ಪೋಲಿಸ್ರು ಫೇಲ್ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣದ ನಂತರವೂ ಪಾಗಲ್ ಪ್ರೇ(ಕ್ರಿ)ಮಿಗಳ ಕಾಟ! ತಣ್ಣಗಾಗಿಲ್ಲ.ಬೆಳಗಾವಿಯಲ್ಲಿ ಇದ್ದಾನೊಬ್ಬ ಸೈಕೋಪಾತ್ ಪಾಗಲ್ …

Read More »

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ‘ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿ ಕಲ್ಲು ತೂರಾಟ …

Read More »

ಶಹಾಪೂರ್ ಘರ್ಷಣೆ ಪ್ರಕರಣ ಹತ್ತು ಜನರ ಬಂಧನ

ಬೆಳಗಾವಿ-ನಿನ್ನೆ ರಾತ್ರಿ ಶಹಾಪೂರ ಪೋಲೀಸ್ ಠಾಣೆ ವ್ಯಾಪ್ತಿಯ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಭಂಧಿಸಿದಂತೆ ಒಟ್ಟು ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೋಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿನ್ನೆ ಕ್ರಿಕೆಟ್ ಆಟದ ಸಂಧರ್ಭದಲ್ಲಿ ಮಕ್ಕಳ ನಡುವಿನ ಜಗಳ ಬೆಳೆದು ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು. ಘರ್ಷಣೆಗೆ ಸಂಬಂಧಿಸಿದಂತೆ ಎರಡು FIR ಗಳನ್ನು ದಾಖಲಿಸಲಾಗಿದೆ. ಹತ್ತು ಜನರನ್ನು ಬಂಧಿಲಾಗಿದೆ. ಸಿಸಿ ಟಿವ್ಹಿ ದೃಶ್ಯಾವಳಿಗಳನ್ನು ಪರಶೀಲನೆ ನಡೆಸಿ ಘಟನೆಯಲ್ಲಿ ಭಾಗಿಯಾದ …

Read More »

ಸಿಡಿಲು ಬಡಿದು ಮಹಿಳೆ ಸಾವು ನಾಲ್ವರಿಗೆ ಗಾಯ…

ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಧಾರಾಕಾರವಾಗಿ ಮಳೆ ಸುರಿದಿದೆ. ಗುಡುಗು,ಸಿಡಿಲು ಬಿರುಗಾಳಿ ಮಿಶ್ರಿತ ಮಹಾಮಳೆಗೆ ಓರ್ವ ರೈತ ಮಹಿಳೆ ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಾಯಬಾಗ: ಪಟ್ಟಣದ ಹೊರ ವಲಯದ ಜಮೀನಿನಲ್ಲಿ ಗುರುವಾರ ಕೃಷಿ ಕೆಲಸದಲ್ಲಿ ತೊಡಗಿದ್ದ ಶೋಭಾ ಕೃಷ್ಣಾ ಕುಲಗುಡೆ (43) ಅವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮಲ್ಲಪ್ಪ ಶಂಕರ ಮೇತ್ರಿ (43), ಭಾರತಿ …

Read More »

ಬೆಳಗಾವಿ ನಗರದಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ…!!

ಬೆಳಗಾವಿ- ಮಕ್ಕಳ ನಡುವಿನ ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಕಲ್ಲು ತೂರಾಟ ನಡೆದ ಘಟನೆ ಬೆಳಗಾವಿಯ ಶಹಾಪೂರ್ ಪ್ರದೇಶದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಮಕ್ಕಳ ನಡುವಿನ ಕ್ರಿಕೆಟ್ ಜಗಳ ಸಂಜೆ ಹೊತ್ತಿಗೆ ವಿಕೋಪಕ್ಕೆ ಹೋಗಿದೆ, ವಾದ ವಿವಾದ ಆಗಿದೆ ಈ ಸಂಧರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟ ಆಗಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ …

Read More »

ಹಾಸಿಗೆಯಲ್ಲೇ ಹೆಂಡತಿಯನ್ನು ಖಲ್ಲಾಸ್ ಮಾಡಿದ ಕುಡುಕ ಗಂಡ…

ಬೆಳಗಾವಿ: ಕುಡಿದ ನಶೆಯಲ್ಲಿ ಹೆಂಡತಿಯನ್ನೆ ಗಂಡ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಲಗಿದ್ದಾಗಲೇ ಫಕ್ಕೀರವ್ವ ಕಾಕಿ(35) ಕೊಲೆಯಾದ ದುರ್ದೈವಿ. ಯಲ್ಲಪ್ಪ ಕಾಕಿ ಹೆಂಡತಿಯನ್ನು ಕೊಂದ ಪಾಪಿ ಗಂಡ. ಹೆಂಡತಿ ಜೊತೆಗೆ ಜಗಳ ತೆಗೆದು ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಇಬ್ಬರು ಮಕ್ಕಳ ಎದುರೇ ಹೆಂಡತಿ ಹತ್ಯೆ ಮಾಡಿ ಗಂಡ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗೆ ಬಲೆ ಬೀಸಿದ್ದಾರೆ. ನೇಸರಗಿ …

Read More »

ಪಾಂಡರಿ ನದಿ ದಡದಲ್ಲಿರುವ ನಿವಾಸಿಗಳನ್ನು ಈಗಲೇ ಶಿಪ್ಟ್ ಮಾಡಿ…!!

ಖಾನಾಪುರ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗುವ ಪ್ರದೇಶಕ್ಕೆ ಸಿಇಓ ಭೇಟಿ ಅತಿವೃಷ್ಟಿ ಎದುರಿಸಲು ಮುಂಜಾಗೃತೆ ವಹಿಸಿ: ಸಿಇಓ ರಾಹುಲ್ ಶಿಂಧೆ ಖಾನಾಪುರ: ಈ ಬಾರಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಎದುರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಬುಧವಾರ (ಮೇ-22) ತಾಲೂಕಿನ ಲೋಂಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ …

Read More »

ಮೇ. 25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಜನ- ಜಾನುವಾರುಗಳಿಗೆ …

Read More »

ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

ಬೆಳಗಾವಿ : ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು. ಚಂದ್ರಶೇಖರ ಗುಡ್ಡಕಾಯು ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಕೆಲ ತಿಂಗಳ …

Read More »

ಜಾತ್ರೆಯಲ್ಲಿ ಆಹಾರ ಸೇವಿಸಿ 46 ಜನ ಅಸ್ವಸ್ಥ ಆಸ್ಪತ್ರೆಗೆ ದಾಖಲು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ ಗ್ರಾಮದ ಜನ.ಅನ್ನ ಪ್ರಸಾದ ಮತ್ತು‌ ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಸ್ಥರು.ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿಯಾಗಿಕೂಡಲೇ ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಗ್ರಾಮದಲ್ಲಿಯೇ …

Read More »