Breaking News
Home / Breaking News (page 68)

Breaking News

ಕೋಡಿಮಠ ಶ್ರೀಗಳ ಭವಿಷ್ಯ ಏನಾಗಬಹುದು ?

ಹಾಸನ : ಎರಡು ತಿಂಗಳ ಹಿಂದೆ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ನೀಡಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಎರಡು ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ …

Read More »

ಬೆಳಗಾವಿ:ಮತದಾನಕ್ಕೆ ಬಂದಿದ್ದ ಮಹಿಳೆ ಸಾವು.

ಹಾಸನ/ಬೆಳಗಾವಿ :ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತದಾನ ಮಾಡಿ ಪೋಲಿಂಗ್ ಬೂತ್‌ನಿಂದ ಹೊರಗೆ ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಯಣ್ಣ (49) ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರೊಂದಿಗೆ ಒಡನಾಟ ಹೊಂದಿದ್ದ ಜಯಣ್ಣ, ಬೆಳಗ್ಗೆ ಖುಷಿಯಿಂದಲೇ ಮತಗಟ್ಟೆಗೆ ಹೋಗಿ ಮತದಾನ ಮಾಡಿ ಹೊರಬಂದಿದ್ದಾರೆ. ಹೊರ ಬಂದ ನಂತರ …

Read More »

IAS ಅಧಿಕಾರಿಯಾಗುವ ಕನಸು ಬಿಚ್ಚಿಟ್ಟ ಸವದತ್ತಿಯ ಸುಪುತ್ರಿ !

ಸವದತ್ತಿ :ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವದತ್ತಿ ಕುಮಾರೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಿರೇಹೊಳೆ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಜ್ಞಾನ ವಿಭಾಗ ಆಯ್ದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವೆ. ಐಎಎಸ್‌ ಅಧಿಕಾರಿಯಾಗುವ ಇಚ್ಛೆ ಇದೆ ಎಂದು ತಿಳಿಸಿದರು. ಶಾಲೆಯಿಂದ ಬಂದ ನಂತರ ರಾತ್ರಿ ಹನ್ನೆರಡರವರೆಗೂ ಓದುತ್ತಿದ್ದೆ. ಈ ಸಲದ …

Read More »

ಚಿಕ್ಕೋಡಿಗೆ ಜಿಲ್ಲೆಗೆ 12 ನೇಯ ಸ್ಥಾನ ಮತ್ತು ಬೆಳಗಾವಿಗೆ ಈ ಸಲ 26 ನೇ ಸ್ಥಾನ..

SSLC ಫಲಿತಾಂಶ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು …

Read More »

ಬೆಳಗಾವಿ ದಕ್ಷಿಣದಲ್ಲಿ ಅಮೀತ್ ಶಾ ಖುಷ್ ಹುವಾ..!!

ಬೆಳಗಾವಿ- ಬಿಜೆಪಿ ‌ಚಾಣಕ್ಯ ಅಮಿತ್ ಶಾ ಬೆಳಗಾವಿ ದಕ್ಷಿಣ ವಿಧಾನಸಭೆ ‌ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ‌ ನಡೆಸಿದರು. ರೋಡ್ ಶೋ ಜೊತೆಗೆ 20 ಸಾವಿರಕ್ಕೂ ಅಧಿಕ ಬೈಕ್‌ಗಳ ಮೂಲಕ ರ್ಯಾಲಿ ನಡೆಯಿತು. ವಿಶ್ವದಾಖಲೆ ರೀತಿಯಲ್ಲಿ ನಡೆದ ಬೈಕ್ ರ್ಯಾಲಿ ಕಂಡು ಸ್ವತಃ ಅಮಿತ್ ಶಾ ಬೆರಗಾದರು. ರೋಡ್ ಶೋದಲ್ಲಿ ಪಾಲ್ಗೊಂಡ ಅಪಾರ ಜನಸ್ತೋಮ ಬಿಜೆಪಿ, ಅಮಿತ್ ಶಾ, ಅಭಯ ಪಾಟೀಲ ‌ಪರ ಘೋಷಣೆ ಕೂಗಿದರು. ಗಲ್ಲಿ ಗಲ್ಲಿಗಳಲ್ಲಿ ಹೂಮಳೆಗೈದು ಅಮಿತ್ …

Read More »

: ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಿ-ಅಮೀತ್ ಶಾ

ಅಥಣಿ :ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಅವರನ್ನು ಈ ಸಲದ ಚುನಾವಣೆಯಲ್ಲಿ ಸೋಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರ ನೀಡಿದರು. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.ರ್ನಾಟಕ ಚುನಾವಣೆಯೇ ಬೇರೆ. ಅಥಣಿ ಚುನಾವಣೆಯೇಬೇರೆ. ಅಧಿಕಾರದ ಆಸೆಗೆ ತನ್ನ ಸ್ವಾರ್ಥಕ್ಕೆ ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಈ ಸಲ ಸೋಲಿಸಲೇಬೇಕು ಎಂದು ಕರೆಕೊಟ್ಟರು. ಕಾಂಗ್ರೆಸ್ …

Read More »

ಬೆಳಗಾವಿಗೆ ಇಂದು ಬಿಜೆಪಿ ಚಾಣಕ್ಯ ನಗರದಲ್ಲಿ ರೋಡ್ ಶೋ..

ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ ಅಥಣಿ, 2.30 ಕ್ಕೆ ರಾಯಬಾಗ ರೋಡ್ ಶೋ, ಸಂಜೆ 4 ಕ್ಕೆ …

Read More »

ಲಕ್ಷ್ಮೀ ಹೆಬ್ಬಾಳಕರ ಪ್ರಚಾರಕ್ಕಾಗಿ, ಶಿವರಾಜ್ ಕುಮಾರ್‌

ನಾಳೆ ಲಕ್ಷ್ಮೀ ಹೆಬ್ಬಾಳಕರ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಬೆಳಗಾವಿ: ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಅವರು ನಾಳೆ ಮೇ 6ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರ ಅವರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು …

Read More »

ನಿಮ್ಮ ಸೇವೆ ಮಾಡಲು ಇನ್ನೊಂದು ಅವಕಾಶ ಕೊಡಿ-ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …

Read More »

ಹಾ.! ಹಾ..!! ಅಭ್ಯರ್ಥಿಗಳಿಂದ ಮದುವೆ ಮಾಡಿಸುವ ಗ್ಯಾರಂಟಿ..!!

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು  ಬೆಳಗಾವಿ : ಗೋಕಾಕ ಹಾಗೂ ಅರಬಾವಿಯಲ್ಲಿ ಪಕ್ಷೇತರ ಸಹೋದರರಿಬ್ಬರೂ(ಕುಳ್ಳೂರ) ಕಣಕ್ಕಿಳಿದಿದ್ದು ಅವರು ನೀಡಿರುವ ಚುನಾವಣಾ ಪ್ರಣಾಳಿಕೆಯ ಭರವಸೆ ವಿಶೇಷ ರೀತಿಯಲ್ಲಿ ಗಮನ ಸೆಳೆದಿದೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಇದೀಗ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಮತ್ತು ಗೋಕಾಕ ಮತ ಕ್ಷೇತ್ರದ …

Read More »