Breaking News
Home / Breaking News (page 93)

Breaking News

ಸದನದಲ್ಲಿ ಸೀಟೀ ಹೊಡೆದ ಕುಕ್ಕರ್….!!

  ಬೆಳಗಾವಿ, ಡಿಸೆಂಬರ್ ೨೭ ರಾಜ್ಯ ಪೊಲೀಸರು, ರಾಷ್ಟ್ರದಲ್ಲಿಯೇ ಅತ್ಯಂತ ದಕ್ಷತೆ ಹಾಗೂ ಶಿಸ್ತಿನ ಪೊಲೀಸ್ ಎಂಬ ಹೆಗ್ಗಳಿಕೆ ಹೊಂದಿದ್ದು, ಅವರ ಮನ ಸ್ಥೈರ್ಯ ಕುಗ್ಗಿಸುವ ಯಾವುದೇ ಪ್ರಯತ್ನವನ್ನು, ಖಂಡಿಸುವುದಾಗಿ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಸಭೆಯಲ್ಲಿ, ಗುಡುಗಿದ್ದಾರೆ. ಇಂದು, ಸದನದಲ್ಲಿ, ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ, ಸಚಿವರು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣವನ್ನು, ಗೌಣವಾಗಿಸಿ, ಮಾತನಾಡಿ, ಹಿರಿಯ ಪೊಲೀಸ್ ಅಧಿಕಾರಿಗಳ ವೃತ್ತಿ ನಿಷ್ಠೆಯನ್ನು ಪ್ರಶ್ನೆ …

Read More »

ಆಕಾಂಕ್ಷಿಗೆ ಅವಾಜ್ ಹಾಕಿದ ಅಶೋಕ ಪಟ್ಟಣ

ಬೆಳಗಾವಿ-ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯಿತು ಈ ಸಭೆಯಲ್ಲಿ ರಾಮದುರ್ಗ ಮಾಜಿ ಶಾಸಕ ಅಶೋಕ್ ಪಟ್ಟಣ ಮತ್ತೋರ್ವ ಆಕಾಂಕ್ಷಿಗೆ ಆವಾಜ್ ಹಾಕಿದ ಘಟನೆ ನಡೆದಿದೆ. ಎಐಸಿಸಿ ಕಾರ್ಯದರ್ಶಿ ವಿಶ್ವನಾಥ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಮದುರ್ಗ ಕ್ಷೇತ್ರದ ಆಕಾಂಕ್ಷಿಗಳ ಅಭಿಪ್ರಾಯ ಆಲಿಸುತ್ತಿರುವಾಗ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಅರ್ಜುನ್ ಗದಿಗೆಪ್ಪ ಗುಡ್ಡದ. ನಾನು ಕುರುಬ ಸಮಾಜಕ್ಕೆ …

Read More »

ಬೆಳಗಾವಿ ದಕ್ಷಿಣದಲ್ಲಿ ಲೈಟ್ , ಗ್ರಾಮೀಣದಲ್ಲಿ ಫೈಟ್…..!!!

ಬೆಳಗಾವಿಯಲ್ಲಿ ಡಿಸೆಂಬರ್  31 ರಂದು ಅಣ್ಣಪ್ಪಾ ಜವಾರಿ ಊಟ ಆರಂಭ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಅವರು ಅಳವಡಿಸಿರುವ ಆಕರ್ಷಕ ಬೀದಿ ದೀಪಗಳು ಬೆಳಗಾವಿ-ರಾಜ್ಯದ ಯಾವ ಕ್ಷೇತ್ರದಲ್ಲೂ ಈ ರೀತಿಯ ಚುನಾವಣಾ ತಯಾರಿ ನಡೆದಿಲ್ಲ,ಆದ್ರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಪವರ್ ಫುಲ್ ಪಾಲಿಟಿಕ್ಸ್ ನಡೆದಿರುವುದು ಸತ್ಯ. ಬೆಳಗಾವಿ ಜಿಲ್ಲೆಯ ರಾಜಕೀಯ ಕಡುವೈರಿಗಳಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಗುದ್ದಾಟ ಶುರುವಾಗಿದೆ.ರಮೇಶ್ ಜಾರಕಿಹೊಳಿ …

Read More »

ಮಂತ್ರಿಮಂಡಲದ ವಿಸ್ತರಣೆ,ಪಂಚಮಸಾಲಿ ಮೀಸಲಾತಿ,ದೆಹಲಿಯಲ್ಲಿ ಡಿಸೈಡ್..!!

ಬೆಳಗಾವಿ: ಬಿಜೆಪಿ ನಾಯಕರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಂಪುಟಕ್ಕೆ ಸೇರ್ಪಡೆ ಕುರಿತು ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಚಳಿಗಾಲದ ಅಧಿವೇಶನ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ. ದೆಹಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರಕಾರವು …

Read More »

ನಿನ್ನೆ ರಾತ್ರಿ ಬೆಳಗಾವಿಯಲ್ಲಿ ಡಬಲ್ ಮರ್ಡರ್…

ಬೆಳಗಾವಿ-ಬೆಳಗಾವಿ ಪಕ್ಕದ ಸಿಂದೊಳ್ಳಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.ಮಾರಿಹಾಳ ಪೋಲೀಸ್ರು ನಿನ್ನೆ ರಾತ್ರಿ 11-00 ಗಂಟೆಗೆ, ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಎಸ್ಕಾಟ್ ಮಾಡುವ ಹೊತ್ತಿನಲ್ಲಿಯೇ ಸಾಂಬ್ರಾ ಪಕ್ಕದ ಮಾರಿಹಾಳದಲ್ಲಿ ಡಬಲ್ ಮರ್ಡರ್ ಆಗಿದೆ. ಸಿಂಧೊಳ್ಳಿಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಇಪ್ಪತ್ತು ನಾಲ್ಕು ವರ್ಷದ ಯುವಕನೊಬ್ಬನ ಹತ್ಯೆಯಾಗಿದ್ದು ಇನ್ನೋರ್ವ ಯುವಕನ ಸ್ಥಿತಿ ಚಿಂತಾಜನಕವಾಗಿತ್ತು ನಿನ್ನೆ ಮಧ್ಯರಾತ್ರಿ ಆತನೂ ಪ್ರಾಣಬಿಟ್ಟಿದ …

Read More »

ಬೆಳಗಾವಿ : ಯುವಕನ ಮರ್ಡರ್ ಇನ್ನೋರ್ವನ ಸ್ಥಿತಿ ಚಿಂತಾಜನಕ..

ಬೆಳಗಾವಿ-ಬೆಳಗಾವಿ ಪಕ್ಕದ ಸಿಂದೊಳ್ಳಿ ಗ್ರಾಮದಲ್ಲಿ ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಇಪ್ಪತ್ತು ನಾಲ್ಕು ವರ್ಷದ ಯುವಕನೊಬ್ಬನ ಹತ್ಯೆಯಾಗಿದ್ದು ಇನ್ನೋರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬಸವರಾಜ್ ಬೆಳಗಾಂವಕರ 24 ಎಂಬ ಯುವಕನ ಕೊಲೆಯಾಗಿದ್ದು ಗಿರೀಶ್ ಎಂಬ ಯುವಕನ ಸ್ಣತಿ ಚಿಂತಾಜನಕವಾಗಿದೆ.ಹಲ್ಲೆಯಾದ ತಕ್ಷಣ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು. ಬಸವರಾಜ್ ಬೆಳಗಾಂವಕರ ಎಂಬಾತ ಮೃತಪಟ್ಟಿದ್ದು ಗಿರೀಶ್ ಎಂಬಾತನ ಸ್ಣಿತಿ ಚಿಂತಾಜನಕವಾಗಿದೆ. ಕೊಲೆಗೆ ವಾಹನದ ವ್ಯವಹಾರ, ವ್ಯಯಕ್ತಿಕ ದ್ವೇಷವೇ ಕಾರಣ …

Read More »

ಎಡಿಜಿಪಿ ಕಮಾಲ್, ಕನ್ನಡ ,ಮರಾಠಿ ಹೋರಾಟಗಾರರು ಈಗ ಭಾಯೀ,ಭಾಯೀ…!!

ಬೆಳಗಾವಿ-ಬೆಳಗಾವಿಯ ಗಡಿವಿವಾದದ ಹೋರಾಟದ ಇತಿಹಾಸದಲ್ಲಿ ಕನ್ನಡಪರ ಸಂಘಟನೆಗಳ ನಾಯಕರು ಮತ್ತು ಎಂಇಎಸ್ ನಾಯಕರು ಒಂದೇ ಕಡೆ ಕುಳಿತುಕೊಂಡು, ಪರಸ್ಪರ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು,ಕ್ಯಾಮರಾ ಎದುರು ನಗುತ್ತಲೇ ಪೋಜು ಕೊಟ್ಟ ಉದಾಹರಣೆ ಇಲ್ಲ.ಆದ್ರೆ ಶುಕ್ರವಾರ ಇದು ಎಡಿಜಿಪಿ ಅಲೋಕ್ ಕುಮಾರ್ ಅವರ ವಿಶೇಷ ಕಾಳಜಿ ಮತ್ತು ಮುತವರ್ಜಿಯಿಂದ ಇದು ಸಾಧ್ಯವಾಗಿದೆ. ಶುಕ್ರವಾರ ಬೆಳಗಾವಿಯ ಟಿಳಕವಾಡಿ ಪೋಲೀಸ್ ಠಾಣೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಕನ್ಬಡಪರ ಸಂಘಟನೆಗಳ ನಾಯಕರು ಹಾಗೂ ಎಂಇಎಸ್ ನಾಯಕರ …

Read More »

ಕ್ಯಾಬಿನೇಟ್ ಮೀಟೀಂಗ್ ನಲ್ಲಿ ಬಂಪರ್ ಗಿಪ್ಟ್..!!

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ* *ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ ಅರಭಾವಿ ವಿಧಾನ ಸಭಾ …

Read More »

ಪಂಚಮಸಾಲಿ ಮೀಸಲಾತಿ ಬಗ್ಗೆ ಇವತ್ತು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದೇನು ಗೊತ್ತಾ..??

*ವರದಿ ಬಂದ ತಕ್ಷಣ ಕ್ರಮ :* ಪಂಚಮಸಾಲಿ ಮೀಸಲಾತಿ ಕುರಿತು ನಾಳೆ ಅಂತಿಮ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರೆಲ್ಲರೂ ನಮ್ಮವರೇ, ನಾನು ಹಿಂದುಳಿದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಸಂಪರ್ಕದಲ್ಲಿದ್ದೇನೆ. ಕೂಡಲೇ ಈ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ವರದಿ ನೀಡಿದ ತಕ್ಷಣ ಮುಂದಿನ ಕ್ರಮಗಳನ್ನು ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿ ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನ ಸಭೆಯಲ್ಲಿ ಮತ್ತು ಹೊರಗಡೆ …

Read More »

ಸಿಎಂ ಜೊತೆ ರಮೇಶ್ ಜಾರಕಿಹೊಳಿ,ಈಶ್ವರಪ್ಪ ಮೀಟೀಂಗ್..!!

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ವರಿಷ್ಠರು ಹಸಿರು ನಿಶಾನೆ ತೋರಿದರೆ ಸಚಿವ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು ಎನ್ನಲಾಗಿದೆ. ಸಂಪುಟ …

Read More »