Home / Breaking News (page 96)

Breaking News

ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ- ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಡಿ ಸಾವರ್ಕರ್ ಭಾವಚಿತ್ರ ವಿವಾದ ಪ್ರತಿಭಟನೆಯ ಕಿಡಿ ಹೊತ್ತಿಸಿದೆ. ಮೊದಲ ದಿನವೇ ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಪ್ರಯತ್ನಿಸಿದೆ. ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ಸುವರ್ಣಸೌಧದ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜವಾಹರ್ ಲಾಲ್ ನೆಹರೂ, …

Read More »

ಬೆಳಗಾವಿಯಲ್ಲಿ ಎಂಇಎಸ್ ಮೇಳಾವ್ ಪ್ಯಾಕಪ್…!!

ಬೆಳಗಾವಿ-ಇತಿಹಾಸದಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳವ್ ಬ್ರೇಕ್ ಬಿದ್ದಿದೆ.ಪ್ರತಿ ವರ್ಷ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳವ್ ಆಯೋಜನೆ ಮಾಡುತ್ತಿದ್ದ ನಾಡದ್ರೋಹಿ ಎಂಇಎಸ್ ಗೆಸಿಎಂ ಬಸವರಾಜ ಬೊಮ್ಮಾಯಿ ಶಾಕ್ ಕೊಟ್ಟಿದ್ದು,ಖಾಕಿ ಪಡೆ ಮೇಳಾವ್ ಗೆ ಹಾಕಲಾಗಿದ್ದ ವೇದಿಕೆಯನ್ನು ವಶಪಡಿಸಿಕೊಂಡಿದೆ. ಬೆಳಗಾವಿಯಲ್ಲಿ ಇದೇ ಮೊದಲ ಸಲ ಎಂಇಎಸ್ ‌ಮಹಾಮೇಳಾವ್ ಪ್ಯಾಕಪ್ ಆಗಿದ್ದು, ಎಂಇಎಸ್ ಮುಖಂಡರ ಮೇಲೆ ಪೊಲೀಸರಿಂದ ತೀವ್ರ ನಿಗಾ ಇಡಲಾಗಿದೆ.ಅನೇಕ ಮುಖಂಡರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.ಪಾಲಿಕೆ ಸದಸ್ಯ ರವಿ ಸಾಂಳುಕೆ, …

Read More »

ಬೆಳಗಾವಿಯಲ್ಲಿ ಇಂದಿನಿಂದ ಹತ್ತು ದಿನಗಳ ಕಾಲ ರಾಜಧಾನಿಯ ಕಳೆ..!!

ಬೆಳಗಾವಿ-ರಾಜ್ಯದ ಎರಡನೇಯ ರಾಜಧಾನಿ ಆಗಲಿರುವ ಬೆಳಗಾವಿ ಮಹಾನಗರ ಇಂದಿನಿಂದ ಹತ್ತು ದಿನಗಳ ಕಾಲ ರಾಜಧಾನಿಯ ಸ್ವರೂಪ ಪಡೆಯಲಿದೆ.ರಾಜ್ಯಸರ್ಕಾರ ಗಂಟು ಮೂಟೆ ಕಟ್ಟಿಕೊಂಡು ಬೆಳಗಾವಿಗೆ ಶಿಪ್ಟ್ ಆಗಿದೆ. ಇಂದು ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ.ಅದಕ್ಕಾಗಿ ಅಭೂತಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು,ಇಂದಿನಿಂದ ಕಲಾಪಗಳು ಆರಂಭವಾಗಲಿವೆ. ಇಂದು ಅಧಿವೇಶನದ ಪ್ರಥಮ ದಿನ,ಅಧಿವೇಶನದ ಕಲಾಪಗಳು ಶುರು ಆಗುವ ಮುನ್ನ ವಿಧಾನಸಭೆಯ ಸಭಾಂಗಣದಲ್ಲಿ ಅಳವಡಿಸಿರುವ ಏಳು ಜನ ಮಹಾತ್ಮರ ಭಾವಚಿತ್ರಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಏಳು …

Read More »

ಸುವರ್ಣವಿಧಾನಸೌಧದ ಸಭಾಂಗಣದಲ್ಲಿ, ಪರದೇ ಕೇ ಪಿಚೇ ಕ್ಯಾ ಹೈ…!!!

ಬೆಳಗಾವಿ- ಬೆಳಗಾವಿಯ ಸುವರ್ಣವಿಧಾನಸೌಧದ ಅಸೆಂಬ್ಲಿ ಸಭಾಂಗಣದಲ್ಲಿ ನಾಳೆ ಏಳು ಜನ ಮಹಾಪುರುಷರ ಭಾವಚಿತ್ರಗಳು ಅನಾವರಣಗೊಳ್ಳಲಿದ್ದು ಈ ಏಳು ಪೋಟೋಗಳನ್ನು ಪರದೆಯಿಂದ ಮುಚ್ಚಲಾಗಿದ್ದು ಏಳು ಜನ ಮಹಾಪುರುಷರು ಯಾರು ? ಎನ್ನುವ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಮಹಾತ್ಮಾ ಗಾಂಧಿ,ವಿಶ್ವರತ್ನ ಬಾಬಾಸಾಹೇಬ್ ಅಂಬೇಡ್ಕರ್,ಜಗಜ್ಯೋತಿ ಬಸವೇಶ್ವರ,ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಗಳು ಇವೆ ಎಂದು ಹೇಳಲಾಗಿದ್ದು ಇವರ ಜೊತೆ ಸಾವರ್ಕರ್ ಪೋಟೋ ಕೂಡಾ ಇದೆ ಎಂದು ದೃಶ್ಯ ಮಾದ್ಯಮಗಳಲ್ಲಿ ಸುದ್ದಿ …

Read More »

ಮಹಾರಾಷ್ಟ್ರದಿಂದ ಬರುವ ಯಾರಿಗೂ ನಾಳೆ ಬೆಳಗಾವಿ ಪ್ರವೇಶಕ್ಕೆ ಅನುಮತಿ ಇಲ್ಲಾ.

ಬೆಳಗಾವಿ- ನಾಳೆ,ಡಿ.19ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದುಅಧಿವೇಶನದ ದಿನವೇ ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ,ಮಹಾಮೇಳಾವ್ ನಡೆಯುವ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ಸ್ಥಳ ಪರಶೀಲನೆ ಮಾಡಿದ್ದಾರೆ. ಬೆಳಗಾವಿಯ ಟೀಳಕವಾಡಿಯಲ್ಲಿರುವ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮರಾಠಿ ಮೇಳಾವ್ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮಕ್ಕೆ ಪೊಲೀಸ್ ಭದ್ರತೆ ಸೇರಿದಂತೆ ಜಾಗ ಪರಿಶೀಲನೆ ಮಾಡಿದ ಎಡಿಜಿಪಿ ಅಲೋಕ್ ಕುಮಾರ್ ಸಿಸಿಟಿವಿ ಕ್ಯಾಮರಾ ಅಳವಡಿಸಿ, ಡ್ರೋಣ್ ಕಣ್ಗಾವಲು ಇರಿಸುವಂತೆ ಸೂಚನೆ ನೀಡಿದ್ದಾರೆ.ಮಹಾಮೇಳಾವ್ ಕಾರ್ಯಕ್ರಮಕ್ಕೆ ಬೆಳಗಾವಿಗೆ ಮಹಾರಾಷ್ಟ್ರದ ಸಂಸದ …

Read More »

ಬೆಳಗಾವಿ ಅಧಿವೇಶನಕ್ಕೆ ಬಿಗ್ ಪೋಲೀಸ್ ಫೋರ್ಸ್‌….!!!

ಬೆಳಗಾವಿ-ಬೆಳಗಾವಿಯಲ್ಲಿ ನಡೆಯುವ 10 ದಿನಗಳ ವರೆಗೂ ಚಳಿಗಾಲದ ಅಧಿವೇಶನದ ಬಂದೋಬಸ್ತಗಾಗಿ ಸುಮಾರು 4931 ಪೊಲೀಸ್ ಸಿಬ್ಬಂದಿಗಳನ್ನು ‌ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸುಸಜ್ಜಿತವಾಗಿ ನಡೆಯುವ ಉದ್ದೇಶದಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆರು ಜನ ಎಸ್ಪಿ, 11 ಹೆಚ್ಚುವರಿ ಎಸ್ಪಿ, 43 ಡಿಎಸ್ ಪಿ, 95 ಸಿಪಿಐ, 241 ಪಿಎಸ್ ಐ, 298 ಎಎಸ್ಐ, 2829 ಹೆಡ್ ಕಾನ್ ಸ್ಟೇಬಲ್, …

Read More »

ಕಾಂಗ್ರೆಸ್ ಚುನಾವಣಾ ಸಮೀತಿಯ ಮೊದಲ ಸಭೆ ಬೆಳಗಾವಿಯಲ್ಲಿ…!!

ಬೆಳಗಾವಿ-ರಾಜ್ಯದ ಎರಡನೇಯ ರಾಜಧಾನಿಯಾಗಲಿರುವ ಬೆಳಗಾವಿಗೆ ಈಗ ಎಲ್ಲ ರಾಜಕೀಯ ಪಕ್ಷಗಳು ಮಹತ್ವ ಕೊಡುತ್ತಿವೆ. ಕಾಂಗ್ರೆಸ್ ಪಕ್ಷದ ಚುನಾವಣಾ ಸಮೀತಿಯ ಮೊದಲ ಸಭೆ ಬೆಳಗಾವಿಯಲ್ಲೇ ನಡೆಯಲಿದೆ. ನಾಳೆ ಭಾನುವಾರ ದಿನಾಂಕ 18 ರಂದು ಸಂಜೆ 5 ಗಂಟೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ, ಕಾಂಗ್ರೆಸ್ ಪಕ್ಷದ ಚುನಾವಣಾ ಸಮೀತಿಯ ಪ್ರಥಮ ಸಭೆ ನಡೆಯಲಿದ್ದು ಭಾನುವಾರ ಬೆಳಗ್ಗೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ …

Read More »

ಹೋದ ಕಡೆಯೆಲ್ಲಾ ಸಿದ್ದರಾಮಯ್ಯ ಅವರು ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ- ಸತೀಶ್ ಜಾರಕಿಹೊಳಿ

ಕೊಪ್ಪಳ: ಹೋದ ಕಡೆಯೆಲ್ಲಾ ಸಿದ್ದರಾಮಯ್ಯ ಅವರು ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೊಪ್ಪಳದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜಿ ಹಾಕಿದವರಿಗೆ ತಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಆದರೆ ಸಿದ್ದರಾಮಯ್ಯ ಅವರು ಏಕಾಏಕಿ ಟಿಕೆಟ್ ಘೋಷಣೆ ಮಾಡುವುದರಿಂದ ಅರ್ಜಿ ಹಾಕಿದವರಿಗೆ ತೊಂದರೆಯಾಗುತ್ತದೆ. ಒಂದು ಕಡೆ ಅರ್ಜಿಗಳ ಇತ್ಯರ್ಥವಾಗಿಲ್ಲ, ಮತ್ತೊಂದು ಕಡೆ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ ಎಂದರು. …

Read More »

ಕುಡಿದು, ಬ್ಯುಲೆರೋ ಆ್ಯಕ್ಸಿಡೆಂಟ್ ಮಾಡಿದ್ದ, ಮರಾಠಿಗರು ಕಲ್ಲು ಎಸೆದಿದ್ದಾರೆ ಅಂತ ಕಥೆ ಕಟ್ಟಿದ್ದ ಭೂಪ..!!

ಬೆಳಗಾವಿ-ಸರ್ಕಾರಿ ವಾಹನದ ಮೇಲೆ ಕಲ್ಲು ತೂರಿದ್ದ ಪ್ರಕರಣಕ್ಕೆ ಟ್ವಿಸ್ಟ್ ಪಡೆದಿದೆ,ಕುಡಿದ ಅಮಲಿನಲ್ಲಿಬುಲೆರೋ ವಾಹನ ಅಪಘಾತ ಮಾಡಿ ಬೆಳಗಾವಿಯ ಸುವರ್ಣವಿಧಾನಸೌಧದ ಬಳಿ ನನ್ನ ವಾಹನದ ಮೇಲೆ ಮರಾಠಿ ಭಾಷಿಕರು ಕಲ್ಲು ತೂರಾಟ ಮಾಡಿ ವಾಹನ ಜಖಂ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ ಚಾಲಾಕಿ ಚಾಲಕನ ನಿಜ ಬಣ್ಣವನ್ನು ಹಿರೇಬಾಗೇವಾಡಿ ಪೋಲೀಸರು ಬಯಲು ಮಾಡಿದ್ದಾರೆ. ಕಟ್ಟು ಕಥೆ ಕಟ್ಟಿದ ಡ್ರೈವರ್ ಚೇತನ್ ವಿಚಾರಿಸಿದ ಹಿರಿಯ ಪೋಲೀಸ್ ಅಧಿಕಾರಿಗಳು ಸತ್ಯಾಂಶವನ್ನು ಹೊರಹಾಕಿದ್ದಾರೆ.ಬೆಳಗಾವಿಯ ಸುವರ್ಣ …

Read More »

ಪಂಚಮಸಾಲಿ ಸಂಘಟನೆಯಲ್ಲಿ ಗುಂಡು ಪಾಟೀಲರಿಗೆ ಪ್ರಮೋಶನ್..!!

ಬೆಳಗಾವಿ-ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು ಬಸವ /ಜಯ ಮೃತ್ಯುಂಜಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ರಾಜ್ಯ ಪಂಚಮಸಾಲಿ ಕಾರ್ಯಕಾರಿನಿ ಸಭೆ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆಯಿತು. ಸಭೆ ಮುಗಿದ ಬಳಿಕ ಪಂಚಮಸಾಲಿ ಸಂಘಟನೆಯ ಕೆಲವು ಪದಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಯಿತು.ಪಂಚಮಸಾಲಿ ಸಂಘಟನೆಯ ಹುಕ್ಕೇರಿ ತಾಲ್ಲೂಕಾ ಅಧ್ಯಕ್ಷರಾಗಿ ಸಂಘಟನೆಯನ್ನು ಬಲಿಷ್ಠಗೊಳಿಸಿದ ಗುಂಡು ಪಾಟೀಲ ಅವರನ್ನು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ …

Read More »