ಬೆಂಗಳೂರು: ಇಸ್ರೋ ಮಾಜಿ ಮುಖ್ಯಸ್ಥ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ‘ಪದ್ಮವಿಭೂಷಣ’ ಪ್ರಶಸ್ತಿ ಪುರಸ್ಕೃತ ಡಾ.ಕೆ.ಕಸ್ತೂರಿರಂಗನ್ (84) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಭಾನುವಾರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಸ್ತೂರಿರಂಗನ್ 1994ರಿಂದ 2003ರ ಅವಧಿಯಲ್ಲಿ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಇಸ್ರೋ ಹಲವು ಸಾಧನೆಗಳನ್ನು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಭಾರತದ ಪ್ರತಿಷ್ಠಿತ ಉಡಾವಣಾ …
Read More »ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!
ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿಗೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ ಹೆಸರಿನ ಎರಡು ಗಂಡು ಹುಲಿಗಳು …
Read More »ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…
ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. …
Read More »ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತಿಯ ಜೊತೆ ಮಿನಿಸ್ಟರ್….!!!
ಬೆಳಗಾವಿ – ಸ್ನೇಹಕ್ಕೆ ಗೆಳೆತನಕ್ಕೆ ಆಸ್ತಿ,ಅಂತಸ್ತು,ಅಧಿಕಾರ ಅಡ್ಡಿ ಬರೋದಿಲ್ಲ, ಮಂತ್ರಿಯಾದರೇನು ಬಾಲ್ಯದ ಗೆಳತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೋರಿಸಿದ್ದಾರೆ ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತೆಯ ಜೊತೆ ಜಾತ್ರೆಯಲ್ಲಿ ಹರಟೆ ಹೊಡೆದು ಬಾಲ್ಯದ ನೆನಪುಗಳನ್ನು ಮೆಲಕುಹಾಕಿದ್ದಾರೆ. ಚಿಕ್ಕಹಟ್ಟಿಹೊಳಿ ಗ್ರಾಮ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಹುಟ್ಟೂರು ಈ ಗ್ರಾಮದಲ್ಲಿ ಶ್ರೀ ವೀರಭದ್ರ ದೇವರ ಜಾತ್ರೆ ನಡೆಯುತ್ತಿದೆ. ಜಾತ್ರೆಗಾಗಿ ಊರಿಗೆ ಹೋದ ಲಕ್ಷ್ಮೀ ಹೆಬ್ಬಾಳಕರ್ ಬಾಲ್ಯದ ಸ್ನೇಹಿತೆ …
Read More »ಮೂರು ಮಕ್ಕಳ ತಾಯಿಗೆ ಭೀಕರವಾಗಿ ಹತ್ಯೆ ಮಾಡಿದ ಅಕ್ಕನ ಗಂಡ
ಬೆಳಗಾವಿ -ಕುಡಿದ ಮತ್ತಿನಲ್ಲಿ ಮೂರು ಮಕ್ಕಳ ತಾಯಿ ಬರ್ಬರ ಹತ್ಯೆ ಮಾಡಿದ ಘಟನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೆ ಸುಜಾತಾ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ. ಉಂಡು ಮಲಗಿದ ಮೇಲೆ ಮನೆ ಬಾಗಿಲು ಬಡಿದು ಮಲಗಲು ಅಕ್ಕನ ತಂಗಿಯನ್ನು ಕರೆದಿದ್ದ ಈರಯ್ಯಗೆ ನಿರಾಕರಿಸಿದ್ದಕ್ಕೆ ಚಾಕು ಇರಿದಿದ್ದಾನೆ. ಅಕ್ಕ ತಂಗಿ ಇಬ್ಬರನ್ನ ಒಂದೇ ಊರಿನ ಅಕ್ಕಪಕ್ಕದ ಮನೆಯವರಿಗೆ ಮದುವೆ ಮಾಡಿಕೊಟ್ಟಿದ್ದ ಪೋಷಕರು. ಅಕ್ಕ ಸುಜಾತಾ ಮಂಜುನಾಥ ಚತ್ರಕೋಟಿ(24) ಕೊಲೆಯಾದ …
Read More »ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!
ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ ಹಿಡಿದು ಪ್ರೇಮಿಗಳ ಪ್ರಯಾಣ. ಹೌದು ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು ಅಂತಾರೆ. ಅವರು ಕಳೆದ ಐದಾರು ವರ್ಷದಿಂದ ರೋಹಿತ್, ನಂದಿನಿ ಪರಸ್ಪರ ಪ್ರೀತಿ ಮಾಡಿ ಕಳೆದ ಐದು ದಿನಗಳ ಹಿಂದೆ ಮದುವೆಯಾಗಿದ್ದಾರೆ. ಆದರೆ ಯುವತಿಯ ಮನೆಯವರು ನಮ್ಮ ಮೇಲೆ ಪೊಲೀಸ್ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. …
Read More »ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್
ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು ಹುಬ್ಬಳ್ಳಿಯಲ್ಲಿ ನೈರುತ್ಯ ವಲಯದ ರೇಲ್ವೆ ಮಹಾ ಪ್ರಬಂಧಕರೊಂದಿಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಆಗಬೇಕಾದ ವಿವಿಧ ರೇಲ್ವೆ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆಯಲು ಸಭೆಯನ್ನು ನಡೆಸಿದರು. 1) ಬೆಳಗಾವಿ ಮತಕ್ಷೇತ್ರದ ಸುಳೇಬಾವಿ ಗ್ರಾಮದ ಎಲ್. ಸಿ ನಂ: 79/ಎ ಹತ್ತಿರ ನೂತನವಾಗಿ ನಿರ್ಮಿಸಲಾಗಿರುವ ರಸ್ತೆ ಕೆಳ ಸೇತುವೆ ಅವೈಜ್ಞಾನಿಕನಿಕವಾಗಿದ್ದು, …
Read More »ಬೆಳಗಾವಿ- ಧಾರವಾಡ ನಡುವೆ ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಬೇಡಿಕೆಗೆ ರಕ್ಕೆ….!!!
ಬೆಳಗಾವಿ- ಮುರುಗೇಶ್ ನಿರಾಣಿ ಅವರು ರಾಜ್ಯದ ಕೈಗಾರಿಕಾ ಸಚಿವರಾಗಿದ್ದಾಗ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಕಿತ್ತೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ಧಾಣ ನಿರ್ಮಾಣ ಮಾಡುವ ವಿಚಾರವನ್ನು ಪ್ರಸ್ತಾಪ ಮಾಡಿದ ಸಂಧರ್ಭದಲ್ಲಿ ಇದು ಸಾಧ್ಯವೇ ಎನ್ನುವ ಚರ್ಚೆ ನಡೆದಿತ್ತು ಆದ್ರೆ ಈ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರದ ವಿಮಾನಯಾನ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ …
Read More »ಶಹಬ್ಬಾಷ್….ಬೆಳಗಾವಿ ಮಹಾಪೌರ ಮಂಗೇಶ್ ಪವಾರ್….!!
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಅಂದ್ರೆ ಕನ್ನಡ- ಮರಾಠಿ ಜಗಳ, ಎಂಈಎಸ್ ಕೇಂದ್ರ ಎನ್ಬುವ ಕಾಲ ಇತ್ತು ಆದ್ರೆ ಈಗ ಕಾಲ ಬದಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಚಿತ್ರಣವೇ ಬದಲಾಗಿದ್ದು ಪಾಲಿಕೆಯಲ್ಲಿ ಈಗ ನಾಡಗೀತೆ ನಿರಂತರವಾಗಿ ಕೇಳಿಸುತ್ತಿದೆ. ಮರಾಠಿ ಭಾಷಿಕ, ಮರಾಠಾ ಸಮಾಜದ ಮಂಗೇಶ್ ಪವಾರ್ ಬೆಳಗಾವಿಯ ಮೇಯರ್ ಆಗಿದ್ದು ಅವರ ಸಾರಥ್ಯದಲ್ಲಿ ಇಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯನ್ನು ಕನ್ನಡದಲ್ಲೇ ನಡೆಸುವ ಮೂಲಕ ಮೇಯರ್ …
Read More »ಲೋಕಸಭೆಯಲ್ಲಿ ಬೆಳಗಾವಿ ಗಡಿ ಕುರಿತು ಶಿವಸೇನೆ ಕ್ಯಾತೆ
ಬೆಳಗಾವಿ- ಬೆಳಗಾವಿ ಗಡಿವಿವಾದದ ಕುರಿತು ನಿರಂತರವಾಗಿ ಕಾಲು ಕೆದರಿ ಜಗಳ ತೆಗೆಯುವ ಉದ್ಧವ ಠಾಕ್ರೆ ನೇತ್ರತ್ವದ ಶಿವಸೇನೆ,ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಸ್ತಾಪಿಸಿ ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದೆ. ಬೆಳಗಾವಿ ಸೇರಿ ಗಡಿ ವಿವಾದ ಇರೋ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಆಗಬೇಕು ಎಂದು ಹೇಳಿ,ಲೋಕಸಭೆಯಲ್ಲಿ,ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಉದ್ಧವ ಠಾಕ್ರೆ ಬಣದ ಶಿವಸೇನೆ ಸಂಸದ ಪುಂಡಾಟಿಕೆ …
Read More »