Breaking News

Breaking News

ಇಂದು ರಾಜ್ಯಾದ್ಯಂತ ವಕ್ಫ್ ಬೋರ್ಡ್ ಚುನಾವಣೆ, ಬೆಳಗಾವಿಯಲ್ಲಿ ಮತದಾನ.

ಬೆಳಗಾವಿ – ಬಹು ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಕ್ಫ್ ಬೋರ್ಡ್ ಚುನಾವಣೆ ನಡೆಯುತ್ತಿದೆ. ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಇಂದು ಮತದಾನ ನಡೆಯಲಿದೆ. ಬೆಳಗಾವಿ ವಿಭಾಗದ ಮತದಾನ ಬೆಳಗಾವಿ ನಗರದ ರೀಜನಲ್ ಕಮಿಷ್ನರ್ ಕಚೇರಿಯಲ್ಲಿ ನಡೆಯಲಿದೆ. ಈಗಾಗಲೇ ಸಂಸದ,ಶಾಸಕಾಂಗ ಮತ್ತು ಬಾರ್ ಕೌನ್ಸಿಲ್ ವಿಭಾಗದ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ‌. ಮುತವಲ್ಲಿ ವಿಭಾಗದ ಎರಡು ಮಹತ್ವದ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಈ ಚುನಾವಣೆ ಸಚಿವ …

Read More »

ಸಾವಿಗೆ ನ್ಯಾಯ ಬೇಕು, ಗುಪ್ತ ಪತ್ರದಲ್ಲಿ ರುದ್ರಣ್ಣನ ಸಾವಿನ ರಹಸ್ಯ..!!!

ಬೆಳಗಾವಿ- ಬೆಳಗಾವಿ ತಹಶೀಲ್ದಾರ್ ಕಚೇರಿಯ SDC ಕ್ಲಾರ್ಕ್ ರುದ್ರಣ್ಣ ಯಡವಣ್ಣವರ್ ತಹಶೀಲ್ದಾರ್ ಚೇಂಬರ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ನನ್ನ ಸಾವಿಗೆ ತಹಶೀಲ್ದಾರ್ ಸೇರಿದಂತೆ ಮೂವರು ಕಾರಣ ಎಂದು ಮೆಸ್ಸೇಜ್ ಮಾಡಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ರುದ್ರಣ್ಣ ಯಡವಣ್ಣವರ ಸಾವಿಗೆ ಕಾರಣರಾದ ಬೆಳಗಾವಿ ತಹಶೀಲ್ದಾರ್ ಬಸವರಾಜ್ ನಾಗರಾಳ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿ ಈ ಮೂವರು ಆರೋಪಿಗಳು ನೀರೀಕ್ಷಣಾ ಜಾಮೀನು ಪಡೆದಿರುವ ಬೆನ್ನಲ್ಲಿಯೇ ಈಗ ಗುಪ್ತ ಪತ್ರವೊಂದು …

Read More »

ಬೆಳಗಾವಿ ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಬಳಿಯೇ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಮರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಿಹಾಳ ಹಾಗೂ ಮಾವಿನಕಟ್ಟಿ ಗ್ರಾಮದ ಬಳಿಯ ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಸಮೀಪದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ. ಯುವಕನ ಜೇಬಿನಲ್ಲಿ ದ್ವಿಚಕ್ರ ವಾಹನದ ಕೀಲಿ ಕೈ ಪತ್ತೆಯಾಗಿದೆ. ಯುವಕನ ಗುರುತು ಪತ್ತೆಯಾಗಿಲ್ಲ. ಕಲ್ಲಿನಿಂದ ತಲೆಗೆ ಜಜ್ಜಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಕಂಡು …

Read More »

ಮೀನು ಹಿಡಿಯಲು ಹೋದ ತಂದೆ, ಇಬ್ಬರು ಮಕ್ಕಳು ನೀರು ಪಾಲು

  ಬೆಳಗಾವಿ-ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ,ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಘಟಪ್ರಭಾ ನದಿಯಲ್ಲಿ ನಡೆದಿದೆ. ಬೆನಕನಹೊಳಿ ಗ್ರಾಮದ ಲಕ್ಷ್ಮಣರಾಮ ಅಂಬಲಿ (49) ರಮೇಶ್ ಅಂಬಲಿ (14),ಯಲ್ಲಪ್ಪ ಅಂಬಲಿ (12) ಘಟಪ್ರಭಾ ನದಿಯಲ್ಲಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.ಭಾನುವಾರ ಸಂಜೆ ನದಿಯಲ್ಲಿ ಬಲೆ ಹಾಕುವ ವೇಳೆ ಅವಘಡ ಸಂಭವಿಸಿದೆ.ಮೂವರಿಗೂ ಎಸ್‌ಡಿಆರ್‌ಎಫ್ ತಂಡದಿಂದ ಶೋಧಕಾರ್ಯ ನಡೆಯುತ್ತಿದೆ.ಸ್ಥಳಕ್ಕೆ ಯಕಮನಮರಡಿ ಠಾಣೆ ಪೊಲೀಸರ …

Read More »

ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಪಡಿಸಿ

ಬೆಳಗಾವಿ-ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಈ ಭಾಗದ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ಮೊದಲನೆಯ ವಾರದಿಂದ ಅಧಿವೇಶನ ಆರಂಭವಾಗಲಿದೆ ಎಂದು ವಿಧಾನಸಭಾಧ್ಯಕ್ಷರು ಮುನ್ಸೂಚನೆ ನೀಡಿದ್ದು ಸರ್ಕಾರ ಕೂಡಲೇ ಬೆಳಗಾವಿ ಅಧಿವೇಶನದ ದಿನಾಂಕ ನಿಗದಿಪಡಿಸಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ದಿನಾಂಕವನ್ನು ಇತ್ತೀಚಿಕೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ ಮಾಡಬೇಕಿತ್ತು, ಆದ್ರೆ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲೇ ಅಧಿವೇಶನ ನಡೆಸುವ …

Read More »

ಬೆಳಗಾವಿಯ KLE ಆಸ್ಪತ್ರೆಯಲ್ಲಿ, ರೊಬೋಟಿಕ ಮೂಲಕ ಶಸ್ತ್ರಚಿಕಿತ್ಸೆ

ಕೆಎಲ್ಇ ಸಾಧನೆ ಕಳೆದ 2 ವರ್ಷಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ, ಅವಶ್ಯವಿರುವ ತಪಾಸಣೆಗೊಳ್ಪಡಿಸಿದಾಗ ರೋಗಿಯು ದೀರ್ಘಕಾಲದ ಕ್ಯಾಲ್ಸಿಫಿಕ್ ಪ್ಯಾಂಕ್ರಿಯಾಟೈಟಿಸ್ ಎಂಬ ರೋಗದಿಂದ ಬಳಲುತ್ತ, ಮೇದೋಜ್ಜೀರಕ ಗ್ರಂಥಿಯ ನಾಳದಲ್ಲಿ ಹರಳುಗಳಿರುವದು ಕಂಡುಬಂದಿತು. ಅತ್ಯಂತ ಸಂಕೀರ್ಣವಾದ ಪರಿಸ್ಥಿಯಾಗಿದ್ದರಿಂದ ರೊಬೋಟಿಕ ಮೂಲಕ ಶಸ್ತ್ರಚಿಕಿತ್ಸೆ ನೆರವೇರಿಸಿ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಸರ್ಜಿಕಲ್ ಗ್ಯಾಸ್ಟ್ರೋಎಂಟ್ರಾಲಾಜಿ …

Read More »

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಬೆಳಗಾವಿ-ಬೆಳಗಾವಿ ಮಹಾನಗರದ ವಡ್ಡರವಾಡಿಯಲ್ಲಿ ಮಹಿಳೆಯ ಮೇಲೆ ಅಮಾನೀಯವಾಗಿ ಹಲ್ಲೆ ಮಾಡಲಾಗಿದೆ.ಮನಬಂದಂತೆ ಥಳಿಸಿ ಮೈಮೇಲಿನ ಬಟ್ಟೆಯನ್ನು ಹರಿದು ಅಮಾನವೀಯವಾಗಿ ನಡೆದುಕೊಂಡ ಘಟನೆ ನಡೆದಿದೆ. ಮಹಿಳೆಯ ಮೇಲೆ ಮನಬಂದಂತೆ ಥಳಿತ, ಹರಿದ ಬಟ್ಟೆ ಕೈಯಲ್ಲಿ ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿರುವ ತಾಯಿ ಈ ಎಲ್ಲ ದೃಶ್ಯ ಕಂಡುಬಂದಿದ್ದು ಬೆಳಗಾವಿ ನಗರದ ವಡ್ಡರವಾಡಿಯಲ್ಲಿ. ಹೌದು ಕಳೆದ ಮೂರು ದಿನಗಳ ಹಿಂದೆ ರಾತ್ರಿ 09ಗಂಟೆ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದುಹೋಗಿತು. ನಿಮ್ಮ ಮಗಳು ವೇಶ್ಯಾವಾಟಿಕೆ ಮಾಡ್ತಿದ್ದಾಳೆ ಅಂತಾ …

Read More »

ಕಾರು ಅಡ್ಡಗಟ್ಟಿ, ಪಿಸ್ತೂಲ್ ತೋರಿಸಿ ಕಾರಿನಲ್ಲಿದ್ದ 75 ಲಕ್ಷ ದೋಚಿ,ಕಾರಿನ ಸಮೇತ ಪರಾರಿಯಾದ ಖಧೀಮರು

ಬೆಳಗಾವಿ -ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75ಲಕ್ಷ ಎಗರಿಸಿದ ಘಟನೆ,ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳಕ್ಕೆ ಹೊರಟ್ಟಿದ ಕಾರನ್ನು ಸಿನಿಮೀಯ ರೀತಿಯಲ್ಲಿ ಹಿಂಬಾಲಿಸಿ ಅಡ್ಡಗಟ್ಟಿದ ಖದೀಮರು ಪಿಸ್ತೂಲ್ ತೋರಿಸಿ ಕಾರಿನಲ್ಲಿ ಇದ್ದವರನ್ನು ಕೆಳಗೆ ಇಳಿಸಿ ಕಾರಿನಲ್ಲಿದ್ದ 75 ಲಕ್ಷರೂ ಗಳನ್ನು ಕಾರಿನ ಸಮೇತ ದೋಚಿಕೊಂಡು ಪರಾರಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇನೋವಾ ಕಾರು ಅಡ್ಡಗಟ್ಟಿ ಬಂದೂಕು ತೋರಿಸಿ.ಕಾರು ಚಾಲಕ ಮತ್ತು …

Read More »

IPS, IAS ಅಧಿಕಾರಿಗಳ ಫೇಸ್ ಬುಕ್ ಅಕೌಂಟ್ ಹ್ಯಾಕ್ ಮಾಡಿದ ಹ್ಯಾಕರ್ಸ್ ಖಾಲಿ ಬಲೆಗೆ.

ಬೆಳಗಾವಿ: ಐಪಿಎಸ್, ಐಎಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸಬುಕ್ ಖಾತೆ ತೆರೆದು ಮೋಸ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿಗಳು ಎಸ್ಪಿ ಅವರ ಸ್ನೇಹಿತರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬೆಂಗಳೂರಿನಿಂದ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಬೇರೆಡೆ ವರ್ಗಾವಣೆ ಆಗಿದ್ದಾರೆ. ಅವರ ಮನೆಯಲ್ಲಿ‌ 12 …

Read More »

ಮೂವರು ಆರೋಪಿಗಳಿಗೆ ನೀರೀಕ್ಷಣಾ ಜಾಮೀನು ಮಂಜೂರು

ಬೆಳಗಾವಿ- ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ,ಮೂವರೂ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಪ್ತ ಸಹಾಯಕ ಸೋಮು ದೊಡವಾಡಿ, ತಹಶೀಲ್ದಾರ ಬಸವರಾಜ ನಾಗರಾಳ, ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಅಶೋಕ ಕಬ್ಬಲಿಗೇರ‌ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.ತಹಶೀಲ್ದಾರ ಬಸವರಾಜ ನಾಗರಾಳ ಪರ ನ್ಯಾಯವಾದಿ ರವಿರಾಜ ಪಾಟೀಲ ವಕಾಲತ್ತು …

Read More »