Breaking News
Home / Breaking News (page 20)

Breaking News

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ……!!

ಬೆಳಗಾವಿ- ರಾಜ್ಯರಾಜಕಾರಣದಲ್ಲಿ ಏನು ನಡೆಯುತ್ತಿದೆ ? ಯಾರಿಗೂ ಅರ್ಥವಾಗದ ಗೊಂದಲದ ಘಳಿಗೆಯಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ನಡೆದ ಕನ್ನಡದ ಜಾತ್ರೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಗಣ್ಯ ವ್ಯಕ್ತಿಯೊಬ್ಬರು ಮಹತ್ವದ ಸುಳಿವು ಕೊಟ್ಟಿದ್ದಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವದು ಎಷ್ಟು ಸತ್ಯವೋ ಮಾಸ್ಟರ್ ಮೈಂಡ್, ಸತೀಶ್ ಜಾರಕಿಹೊಳಿ ಅವರು ಮುಂದಿನ ಸಿಎಂ ಆಗುವದು ಅಷ್ಟೇ ಸತ್ಯ. ಎಂದು ಹೇಳಿದವರು ಸವದತ್ತಿ ಯಲ್ಲಮ್ಮನ ಕ್ಷೇತ್ರದ ಶಾಸಕ,ಸತೀಶ್ ಜಾರಕಿಹೊಳಿ ಪರಮಾಪ್ತ ವಿಶ್ವಾಸ್ ವೈದ್ಯ ಅವರು ಹೇಳಿದ …

Read More »

ಸುವರ್ಣಸೌಧದ ಅಂಗಳದಲ್ಲಿ ಹೆಬ್ಬಾವು ಪ್ರತ್ಯಕ್ಷ….!!

ಬೆಳಗಾವಿ- ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕಾಗಿ ಸೌಧದಲ್ಲಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಸುವರ್ಣಸೌಧದ ಅಂಗಳದಲ್ಲಿ ಉದ್ಯಾನವನದ ಸುತ್ತಮುತ್ತಲು ಸ್ವಚ್ಛತಾ ಕಾಮಗಾರಿಯೂ ಭರದಿಂದ ಸಾಗಿದ್ದು ಇಂದು ಮಧ್ಯಾಹ್ನದ ಹೊತ್ತಿಗೆ ಒಂದಲ್ಲ ಎರಡಲ್ಲ,ಮೂರ್ನಾಲ್ಕು ಹೆಬ್ಬಾವುಗಳು ಹುತ್ತದಿಂದ ಹೊರಬಂದಿವೆ. ಸುವರ್ಣಸೌಧಕ್ಕೆ ಹೋಗುವ ಮುಖ್ಯರಸ್ತೆಯಲ್ಲಿ ಪಾರ್ಕಿಂಗ್ ಸ್ಥಳಕ್ಕೆ ಟರ್ನ ತೆಗೆದುಕೊಳ್ಳುವ ಸ್ಥಳದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು ಜನರ ಕೂಗಾಟ ಕೇಳಿ ಹೆಬ್ಬಾವುಗಳು ಪಕ್ಕದ ಗಿಡಗಂಟೆಗಳಲ್ಲಿ ಮಾಯವಾಗಿವೆ. ಅಧಿವೇಶನಕ್ಕೆ ಮುನ್ನ …

Read More »

ಬೆಳಗಾವಿ ಪೋಲೀಸ್ ಕಮಿಷ್ನರ್ ಕಚೇರಿಯಲ್ಲಿ ಹೋಮ್ ಮಿನಿಸ್ಟರ್ ಪರಮೇಶ್ವರ್…

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು. …

Read More »

ಟೀಂ ಇಂಡಿಯಾಗೆ ಶುಭ ಕೋರಿದ , ಬಾಲಚಂದ್ರ ಜಾರಕಿಹೊಳಿ

ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ‌ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ ಆವೃತ್ತಿಯ ವಿಶ್ವಕಪ್ ಟ್ರೋಫಿ …

Read More »

ಚಲಿಸುತ್ತಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿಸ ಬಸ್..

ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯಹು ಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗಲುತ್ತಿದ್ದಂತೆಯೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಬರಿಯಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಪಾಯ ಸಂಭವಿಸಿಲ್ಲ. ಯಮಕನಮರಡಿ ಪೋಲಿಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ

Read More »

ಬೆಳಗಾವಿಯಲ್ಲಿ ಏಕಾಏಕಿ ಸಿಬಿಐ ದಾಳಿ….!!

ಬೆಳಗಾವಿ ದಂಡು ಮಂಡಳಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ವಾಸನೆ; ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ..! ಬೆಳಗಾವಿ: ಬೆಳಗಾವಿ ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ವಾಸನೆ ಆರೋಪ ಹಿನ್ನೆಲೆ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ ನಡೆಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ದಂಡು ಮಂಡಳಿ ಸಿಇಒ ಕೆ. ಆನಂದ ಸೇರಿ ಹಿರಿಯ ಅಧಿಕಾರಿಗಳ …

Read More »

ಬೆಳಗಾವಿಯಲ್ಲಿ ಹಾಲಿನ ವಾಹನ ಪಲ್ಟಿ ಇಬ್ಬರಿಗೆ ಗಾಯ

ಬೆಳಗಾವಿ- ಕಾಂಗ್ರೆಸ್ ರಸ್ತೆ ಮಿಲಿಟರಿ ‌ಮಹಾದೇವ ಎದುರಿಗೆ. ಹಾಲಿನ ವಾಹನ ತೀರ ಚಲಾವಣೆಯೇ ಅಪಘಾತಕ್ಕೆ ಕಾರಣ. ವಾಹನ ಖಾನಾಪೂರ ಮಾರ್ಗವಾಗಿ ತೆರಳುವಾಗ ಎದುರಿಗಿದ್ದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವೇಗ ನಿಯಂತ್ರಣ ಸಾಧ್ಯವಾಗದೇ ರಸ್ತೆ ಮಧ್ಯ ಪಲ್ಟಿ ಆಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಗೆ ಹಾಗು ಮಗುವಿಗೆ ತೀವ್ರಗಾಯಗಳಾಗಿವೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿದ ಟ್ರಾಫಿಕ್ ಪೋಲಿಸ್ ರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿ ಸಂಚಾರಕ್ಕೆ …

Read More »

ಚಿಂದಿಚೋರನ ತಂದು,ಆ ಹುಲಿ ಈ ಹುಲಿ ಅನ್ನಬ್ಯಾಡ್ರಿ…!!

ಬೆಂಗಳೂರು- ಪತ್ರಕರ್ತರು ಏನ್ ಕೇಳಬೇಕೋ ಅದನ್ನ ಕೇಳಬೇಕು,ಯಾವುದೋ ಚಿಂದಿಚೋರನ ತಂದೂ ಆ ಹುಲಿ,ಈ ಹುಲಿ ಅನ್ನಬ್ಯಾಡ್ರಿ ನೀವ್ ಹಂಗ್ ಅಂದ್ರ ಜನ ತಿಳ್ಕೋತಾರ್ ನೀವೆಲ್ಲ ಯಾರ್ಯಾರ್ ಕಡೆದವರು ಅಂತ ಗೊತ್ತಿಲ್ಲ.ಅದಕ್ಕೆಲ್ಲ ನಾನು ಉತ್ತರ ಕೊಡೋದಿಲ್ಲ ಅಂತ ಬಸನಗೌಡ ಯತ್ನಾಳ್ ಮಾದ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ವಿಜಯೇಂದ್ರ ಅಧ್ಯಕ್ಷರಾದಬಳಿಕ ಯಡಿಯೂರಪ್ಪ ನಿಮ್ಮ ಜೊತೆ ಮಾತಾಡಿದ್ರಾ.? ಎಂದು ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಅರಿಗೆ ಬೇಕಾದಾಗ ಮಾತಾಡ್ತಾರೆ,ಯಾವಾಗ …

Read More »

ತೆಲಂಗಾಣದಲ್ಲಿ ರಾಜುಸೇಠ ಭರ್ಜರಿ ಪ್ರಚಾರ…!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ. ತೆಲಂಗಾಣದ ಭೊಧಾನ್ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಲಾಭಗಳ ಬಗ್ಗೆ ತಿಳಿಸಿ ರಾಜು ಸೇಠ ಕಾಂಗ್ರೆಸ್ ಪರವಾಗಿ ಮತಯಾಚಿಸಿದರು. ಮೂರು ದಿನಗಳ ಕಾಲ ತೆಲಂಗಾಣದಲ್ಲಿ …

Read More »

ಬೆಳಗಾವಿ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕನ ವರಸೆ….

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಇವರ ವರಸೆ ಶುರುವಾಗಲಿದೆ.good ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ …

Read More »