Breaking News
Home / Breaking News (page 220)

Breaking News

ಗಡಿನಾಡಿನಲ್ಲಿ , ಮತ್ತೆ ಬಾಲ ಬಿಚ್ವಿದ ಕಂಗಾಲ್ ಕಂಪನಿ…!!

ಬೆಳಗಾವಿ-ಸರ್ಕಾರ ಗಡಿ ಭಾಗದ ಮರಾಠಿ ಭಾಷಿಕರಿಗೆ ಎಲ್ಲ ರೀತಿಯ ಸವಲತ್ತು ನೀಡಿದ್ರೂ ನಾಡದ್ರೋಹಿ ಎಂಈಎಸ್ ಗಡಿಯಲ್ಲಿ ಪುಂಡಾಟಿಕೆ ನಿಲ್ಲಿಸುತ್ತಿಲ್ಲ,ಕೋಳಿ ಕಾಲಿಗೆ ಗೆಜ್ಜೆ ಕಟ್ಟಿದರೂ ಅದು ತಿಪ್ಪೆ ಸವರುವದನ್ನು ಬಿಡೋದಿಲ್ಲ ಎನ್ಮುವಂತೆ ಎಂಈಎಸ್ ಮತ್ತು ಶಿವಸೇನೆಯ ಕಿತಾಪತಿ ಮುಂದುವರೆದಿದೆ,ಈ ನಾಡದ್ರೋಹಿಗಳು ಮತ್ತೆ ಬಾಲ ಬಿಚ್ಚಿದ್ದಾರೆ. ಕಾಲು ಕೆರೆದು ಜಗಳಕ್ಕೆ ಬರ್ತಿರುವ ಎಂಇಎಸ್, ಶಿವಸೇನೆ ಪುಂಡರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಇಂದೂ ಸಹ ಪುಂಡಾಟಿಕೆ ಪ್ರದರ್ಶಿಸಿದರು‌. …

Read More »

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು ಘೋಷಣೆ ಕೂಗುತ್ತ …

Read More »

ಬೆಳಗಾವಿಯಲ್ಲಿ 6.675 ಟನ್ ಸ್ಪೋಟಕ ಪತ್ತೆ

ಬೆಳಗಾವಿ-ನಿಯಮಗಳನ್ನು ಉಲಂಘಿಸಿ ನಿರ್ಲಕ್ಷ್ಯತನ ಹಾಗೂ ಮಾನವ ಪ್ರಾಣಕ್ಕೆ ಅಪಾಯವಾಗುವತೆ ಸಾಗಿಸುತ್ತಿದ ಅಂದಾಜು ಸುಮಾರು 4 ಲಕ್ಷ ಮೌಲ್ಯದ 6.675 ಟನ್ ಬಾರಿ ಸ್ಪೋಟಕ ವಸ್ತುಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಕಾಕತಿ ಪೊಲೀಸ್ ನಿರೀಕ್ಷಕರು ಹಳ್ಳೂರ ರವರ ನೇತ್ರತ್ವದ ತಂಡವು ಸ್ಪೋಟಕ ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಾಗಿ ಹಾಗೂ ಮಾನವ ಪ್ರಾಣಕ್ಕೆ ಅಪಾಯವಾಗುವಂತೆ ಸಾಗಿಸುತ್ತಿದ್ದ ಅಂದಾಜು 4 ಲಕ್ಷ ಮೌಲ್ಯದ 6.675 ಟನ್ ಸ್ಪೋಟಕ ವಸ್ತುಗಳನ್ನು ಹೊನಗಾ ಗ್ರಾಮದ ಸ್ಪೂರ್ತಿ ದಾಬಾದ …

Read More »

ಆಸ್ತಿಗಾಗಿ ತಂದೆಯನ್ನೇ ಮರ್ಡರ್ ಮಾಡಿದ ಕಿರಾತಕ ಮಗ..!

ಬೆಳಗಾವಿ- ಆಸ್ತಿಗಾಗಿ,ದುಡ್ಡಿಗಾಗಿ ತಂದೆಯನ್ನೇ ಮಗನೊಬ್ಬ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿತ್ತು,ಮಗ ಮಾಡಿದ ಹಲ್ಲೆಯಿಂದ ತಂದೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ಹದ್ದಿಯ ಪಾಟೀಲ ಮಾಳಾದಲ್ಲಿ ವಾಸವಿರುವ ಲಕ್ಷ್ಮಣ ಲಕ್ಕಪ್ಪ ಶಿರೂರ, ವಯಾ-50 ವರ್ಷ ಇವರ ಮಗ ಆರೋಪಿ ಸೋಮನಾಥ ಲಕ್ಷ್ಮಣ ಶಿರೂರ, ಸಾ-ಕೊತ್ವಾಲ್ ಗಲ್ಲಿ, ಬೆಳಗಾವಿ ಇವನು …

Read More »

ಬೆಳಗಾವಿಗೆ ಸಿಂಗಾಪೂರ್ ಲುಕ್…!!

ಬೆಳಗಾವಿ- ಬೆಳಗಾವಿಯಲ್ಲಿ ಅಗಣಿತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ,ಕುಂದಾನಗರಿ ಬೆಳಗಾವಿ ಈಗ ಹೊಸ ಸ್ವರೂಪ ಪಡೆದುಕಿಳ್ಳುತ್ತಿದೆ.ಸ್ಮಾರ್ಟಿ ಸಿಟಿಯ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದ ಬಳಿಕ ಬೆಳಗಾವಿಯ ಚಿತ್ರಣವೇ ಬದಲಾಗಲಿದೆ. ಈ ಸುದ್ಧಿಯಲ್ಲಿನ ಪೋಟೋ ನೋಡಿದ್ರೆ ಸಾಕು,ಬೆಳಗಾವಿ ಯಾವ ರೀತಿ ಶೈನೀಂಗ್ ಆಗ್ತಾ ಇದೆ,ಅಂತಾ ನಾವು ಲೆಕ್ಕ ಹಾಕಬಹುದು,ಯಾಕಂದ್ರೆ ಇದು ಬೆಳಗಾವಿಯಲ್ಲಿ ಆರಂಭಗೊಂಡ ಹೊಸ ಮಾರುಕಟ್ಟೆಯ ಚಿತ್ರ…. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಬೆಳಗಾವಿ ನಗರಕ್ಕೆ ಸಿಂಗಾಪೂರ ಲುಕ್ ಕೊಡುವ ಯೋಜನೆಗಳನ್ನು …

Read More »

ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ…..!!!

ಬೆಳಗಾವಿ- ರಾಜ್ಯ ಸರ್ಕಾರ ಸೋಮವಾರ ಬಜೆಟ್ ಮಂಡಿಸಲಿದ್ದು ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಬೆಳಗಾವಿ ಜಿಲ್ಲೆಗೆ ಏನೇನು ಸಿಗಬಹುದು ಎನ್ನುವ ನಿರೀಕ್ಷೆಯ ಲೆಕ್ಕಾಚಾರ ಈಗ ಶುರುವಾಗಿದೆ. ರಾಜ್ಯ ಸರ್ಕಾರದ ಬಜೆಟ್ ಕೊಡುಗೆಯಾಗಿ ಈಗಾಗಲೇ ಬೆಳಗಾವಿಯಲ್ಲಿ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ,ಹೈಟೆಕ್ ಕೇಂದ್ರ ಬಸ್ ನಿಲ್ಧಾಣ ನಿರ್ಮಾಣ ಆಗುತ್ತಿದೆ.ಈ ಬಾರಿಯ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೆ ಏನೇನು ಸಿಗಬಹುದು ಎನ್ನುವದಕ್ಕೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ.ಈಸಮಸ್ಯೆ …

Read More »

ವೀರ ಮದಕರಿ ನಾಯಕರ ಪ್ರತಿಮೆ,ಸ್ಥಾಪನೆಗೆ ಕ್ರಮ

ಬೆಳಗಾವಿ-  ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಮಾ.5) ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ/ವರ್ಗಗಳ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಧನ ಮಂಜೂರು …

Read More »

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ರೆ ಕರದಂಟು, ದುಬೈನಲ್ಲೂ ಸಿಗುತ್ತೆ.

ಬೆಳಗಾವಿ-ಬೆಳಗಾವಿ ಕುಂದಾ ಜೊತೆ ಗೋಕಾಕ್ ಕರದಂಟು ಚೆನ್ನಾಗಿರುತ್ತದೆ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ವಿಚಾರ ಈಗ ಮತ್ತೆ ಚರ್ಚೆಗೆ ಗುರಿಯಾಗಿದೆ ಯಾಕಂದ್ರೆಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇವತ್ತು ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯ ಭೂತರಾಮನಹಟ್ಟಿ ರಾಣಿ ಚನ್ನಮ್ಮ ಝೂನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರದಂಟು ಬೇಕಾದರೆ ಗೋಕಾಕ್‌ನಲ್ಲೂ ಸಿಗುತ್ತೆ, ಬೆಳಗಾವಿಯಲ್ಲೂ ಸಿಗುತ್ತೆ,ಮೆಜೆಸ್ಟಿಕ್ ನಲ್ಲಿಯೂ ಸಿಗುತ್ತೆ, ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ರೆ ದುಬೈನಲ್ಲೂ,ಗೋಕಾಕಿನ ಪ್ರಸಿದ್ಧ ಕರದಂಟು …

Read More »

ಅಕ್ರಮ ಕ್ವಾರಿ, ಸ್ಫೋಟಕಗಳ ಅಕ್ರಮ ಸಾಗಾಟ ನಿಯಂತ್ರಣಕ್ಕೆ ಕ್ರಮ: ಎಸ್ಪಿ ಲಕ್ಷ್ಮಣ ನಿಂಬರಗಿ

ಬೆಳಗಾವಿ, ): ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಹಿರೆನಗವೆಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರಿಕೆ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ವಿವಿಧ ಇಲಶಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಬುಧವಾರ (ಫೆ. 24) …

Read More »

ಸ್ಮಾರ್ಟ್ ಸಿಟಿ ಕಾಮಗಾರಿ,ಮೂರು ತಿಂಗಳಲ್ಲಿ ಮುಗಿಸಲು ವಾರ್ನಿಂಗ್…!!

ಸ್ಮಾರ್ಟ್ ಸಿಟಿ ಕಾಮಗಾರಿ: ಪ್ರಗತಿ ಪರಿಶೀಲನೆ ———————————————————- ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಗಡುವು ಬೆಳಗಾವಿ,: ರಸ್ತೆ ನಿರ್ಮಾಣ ಸೇರಿದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಪ್ರಮುಖ ಕಾಮಗಾರಿಗಳನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ‌.ಅತೀಕ್ ಅವರು ಸೂಚನೆ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಬುಧವಾರ (ಫೆ‌.24) ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …

Read More »