Home / Breaking News (page 332)

Breaking News

ಬೆಳಗಾವಿ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಭರ್ಜರಿ ಶಿಖಾರಿ….!!!

ಲಾಕ್ ಡೌನ್: 794 ಅಬಕಾರಿ ದಾಳಿ- ಮದ್ಯ, ವಾಹನ ಸೇರಿದಂತೆ 1.10 ಕೋಟಿ ಮೌಲ್ಯದ ವಸ್ತು ಜಪ್ತಿ ಬೆಳಗಾವಿ, ಏ.೨೭(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ. ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ …

Read More »

ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಇಲ್ಲ

ಬೆಳಗಾವಿ- ಸೋಮವಾರ ಬೆಳಗಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸೋಮವಾರ ಬೆಳಗಿನ ಹೆಲ್ತ ಬುಲಿಟೀನ್ ನಲ್ಲಿ ಒಟ್ಟು 8 ಪಾಸಿಟೀವ್ ಕೇಸ್ ಪತ್ತೆಯಾಗಿವೆ.

Read More »

ಗುಜರಾತ ಸರ್ಕಾರದ ಮನವಿಗೆ ಸ್ಪಂದಿಸಿದ ಕರ್ಣಾಟಕ ಸರ್ಕಾರ,

ಬೆಳಗಾವಿ- ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ ನೀಡಿದೆ‌. ಸಾರಿಗೆ ಸಂಸ್ಥೆಯ ಮೂರು ರಾಜಹಂಸ ಬಸ್ ಗಳಲ್ಲಿ ಸುಮಾರು 45 ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಗುಜರಾತಿಗೆ ತೆರಳಿದ್ದಾರೆ. ನಿನ್ನೆ ಸಂಜೆ ಈ ಮೂರು ಬಸ್ಸು ಗಳು ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಡಿಸೈಲ್ ತುಂಬಿಸಿಕೊಂಡು ಮುಂದಕ್ಕೆ ಸಾಗಿವೆ …

Read More »

ಕ್ವಾರಂಟೈನ್ ಅವಧಿ ಪೂರ್ಣ; ಬೆಳಗಾವಿ ಜಿಲ್ಲೆಯ 121 ಜನ ಮನೆಗೆ

ಬೆಳಗಾವಿ, ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿದ್ದ 121 ಜನರನ್ನು ಇಂದು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಗೊಳಿಸಿ ಅವರವರ ಮನೆಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ‌.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಬೆಳಗಾವಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ 87 ಹಾಗೂ ರಾಯಬಾಗ ತಾಲ್ಲೂಕಿನಲ್ಲಿದ್ದ 34 ಜನರನ್ನು ಮನೆಗೆ ಕಳುಹಿಸಲಾಗಿದೆ. ಈ ಎಲ್ಲರೂ ಹದಿನಾಲ್ಕು ದಿನಗಳ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ. ಈ ಅವಧಿಯಲ್ಲಿ ಇವರ ಗಂಟಲು ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಎಲ್ಲ …

Read More »

SUNDAY ಬೆಳಗಾವಿಯಲ್ಲಿ ಮಹಾಮಾರಿ ವೈರಸ್ ಗೆ ರಿವರ್ಸ್ ಘೇರ್….ಸಂಜೆಯೂ ನೋ ಪಾಸಿಟೀವ್

ಬೆಳಗಾವಿ- ಭಾನುವಾರ ಬೆಳಗಾವಿ ಪಾಲಿಗೆ ರಿಲ್ಯಾಕ್ಸ್ ಯಾಕಂದ್ರೆ ಇಂದು ಬೆಳಿಗ್ಗೆ ಮತ್ತು ಸಂಜೆ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ರಿವರ್ಸ್ ಘೇರ್ ನಲ್ಲಿ ಬಿದ್ದಿದೆ, ಇಂದು ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ಆದ್ರೆ ಪಾಸಿಟೀವ್ ಇದ್ದ ಹಿರೇಬಾಗೇವಾಡಿ ಯದಂಪತಿಯ ರಿಪೋರ್ಟ್ ನೆಗೆಟಿವ್ ಬಂದು ದಂಪತಿ ಡಿಸ್ಚಾರ್ಜ ಆಗಿದ್ದಾರೆ.

Read More »

ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಮುಸ್ಲಿಂ ಮುಖಂಡರ ಜತೆ ಸಾಹುಕಾರ್ ಸಭೆ

  *ರಂಜಾನ್ ಮಾಸ ಪ್ರಾರಂಭ ; ಮುಸ್ಲಿಂ ಮುಖಂಡರ ಸಭೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ‌* ಒಂದು ತಿಂಗಳು ಉಪವಾಸ ಆಚರಿಸುವ ರಂಜಾನ್ ‌ಮಾಸವು ಈಗ ಪ್ರಾರಂಭವಾಗಿದ್ದು, ತಾಳ್ಮೆ, ಶಾಂತಿ ಮತ್ತು ತ್ಯಾಗದ ಸಂಕೇತವಾದ *ರಂಜಾನ್ ಮಾಸ* ವನ್ನು ತಮ್ಮ‌ ತಮ್ಮ ಮನೆಗಳಲ್ಲಿಯೇ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಮನವಿ‌ ಮಾಡಿದರು. ಗೋಕಾಕ್ ತಾಲ್ಲೂಕಿನ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, …

Read More »

ಹಿರೇಬಾಗೇವಾಡಿಯ, ದಂಪತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಏ.೨೬(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ೫೦ ವರ್ಷದ ವ್ಯಕ್ತಿ(ಪಿ-೧೮೨) ಹಾಗೂ ಅವರ ಪತ್ನಿಯಾಗಿರುವ ೪೦ ವರ್ಷದ (ಪಿ-೧೯೨) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು …

Read More »

ಬೆಳಗಾವಿ ಜಿಲ್ಲೆಯ ಯಾವ ಊರಲ್ಲಿ ಎಷ್ಟು ಜನ ಸೊಂಕಿತರು ಗೊತ್ತಾ…???

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಹೆಚ್ಚಾಗುತ್ತಲೇ ಇದೆ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮವೊಂದರಲ್ಲಿಯೇ 25 ಜನ ಸೊಂಕಿತರು ಪತ್ತೆಯಾಗಿದ್ದು,ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. :ಹಿರೇಬಾಗೇವಾಡಿ: ಈವರೆಗೆ ಪತ್ತೆಯಾಗಿರು ಸೊಂಕಿತರ ಸಂಖ್ಯೆ -25 ಮೃತ -1 ಡಿಸ್ಚಾರ್ಜ- 1 :ರಾಯಬಾಗ ಕುಡಚಿ: ಸೊಂಕಿತರ ಸಂಖ್ಯೆ-18 ಡಿಸ್ಚಾರ್ಜ್- 2 ಬೆಳಗಾವಿ ನಗರ: ಕ್ಯಾಂಪ್ ಪ್ರದೇಶ-4 ಅಮನ್ ನಗರ-1 ಸಂಗಮೇಶ್ವರ ನಗರ-1 ಆಝಾದ್ ಗಲ್ಲಿ-1 ಸಂಕೇಶ್ವರ-1 ಯಳ್ಳೂರ-1 ಪೀರನವಾಡಿ-1 ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ …

Read More »

ಆಝಾನ್ ಇಲ್ಲ , ರೋಜಾ ಸಮಯ ಕುರಿತು ಅನೌನ್ಸ್ ಗೆ ಮಾತ್ರ ಸಮ್ಮತಿ…..!!!!

ಬೆಳಗಾವಿ – ಬೆಳಗಾವಿ ಜಿಲ್ಲಾಡಳಿತ ಇತ್ತೀಚಿಗೆ ನಗರದ ಪ್ರವಾಸಿ ಮಂದಿರದಲ್ಲಿ ಮುಸ್ಲೀಂ ಮುಖಂಡರು ,ಜಮಾತಿನ ಪದಾಧಿಕಾರಿಗಳು ಹಾಗೂ ಪ್ರಮುಖ ಮೌಲ್ವಿಗಳ ಜೊತೆ ಸುದೀರ್ಘವಾಗಿ ಚರ್ಚೆ ಮಾಡಿ ರಮಾಜಾನ್ ಅವಧಿಯಲ್ಲಿ ಪಾಲಿಸಬೇಕಾದ ವಿಷಯಗಳು ಕುರಿತು ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ರಮಜಾನ್ ತಿಂಗಳಲ್ಲಿ ಯಾರೊಬ್ಬರು ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ,ಆಝಾನ್ ಕೊಡುವಂತಿಲ್ಲ,ಆದ್ರೆ ಪವಿತ್ರ ರಮಜಾನ್ ತಿಂಗಳಲ್ಲಿ ಮುಸ್ಲೀಂ ಬಾಂಧವರು ಉಪವಾಸದ ಆಚರಣೆ ಮಾಡುತ್ತಾರೆ ,ಬೆಳಗಿನ ಜಾವ ಸೆಹರಿ ಅಂದ್ರೆ ಉಪವಾಸ ಆರಂಭ ಮಾಡುತ್ತಾರೆ …

Read More »

ಸರ್ವೆ ಮಾಡಲು ಹೋದ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು ಬೆಳಗಾವಿ – ಇಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಪತ್ತೆಯಾದ ಆರು ಜನರಲ್ಲಿ ನಾಲ್ಕು ಜನ ಮಹಿಳೆಯರಿದ್ದು ಈ ನಾಲ್ಕು ಜನ ಮಹಿಳೆಯರಲ್ಲಿ ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು ತಗಲಿರುವದು ದೃಡವಾಗಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ ಕೊರೋನಾ ಸೊಂಕು ಕಾಣಿಸಿದ ಬಳಿಕ ಈ ಅಂಗನವಾಡಿ ಕಾರ್ಯಕರ್ತೆ ಸೊಂಕಿತನ ದ್ವಿತೀಯ ಸಂಪರ್ಕದ ಕುರಿತು ಮಾಹಿತಿ ಸಂಗ್ರಹಿಸಲು ಸರ್ವೇ ಮಾಡಿದ್ದರು ಎಂದು ಗೊತ್ತಾಗಿದೆ.

Read More »