Home / Breaking News (page 72)

Breaking News

ಲಕ್ಷ್ಮಣ ಸವದಿ ಪಕ್ಷ ಬಿಟ್ಟ ಬಗ್ಗೆ ಕೊನೆಗೂ ಸತ್ಯ ಬಯಲಿಗೆಳೆದ ಅಮಿತ್ ಶಾ !

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷ ಬಿಟ್ಟ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಘಟನೆಯ ಸಂಪೂರ್ಣ ವಿವರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗಳಿಗೆ ವಿಶೇಷ ಸಂದರ್ಶನ ನೀಡಿದ ಅವರು, ಶೆಟ್ಟರ್ ಹಾಗೂ ಸವದಿ ಈ ಬಾರಿ ಹೀನಾಯ ಸೋಲು ಅನುಭವಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ …

Read More »

ಬೆಳಗಾವಿಯಲ್ಲಿ ಮಹಿಳೆಯಿಂದ ಯುವಕನ ಮರ್ಡರ್!

ಬೆಳಗಾವಿಯಲ್ಲಿ ಭೀಕರ ಕೊಲೆ ಬೆಳಗಾವಿ : ಬೆಳಗಾವಿಯಲ್ಲಿ ಭಾನುವಾರ ರಾತ್ರಿ ಯುವಕನನ್ನು ಮಹಿಳೆ ಒಬ್ಬಳು ಭೀಕರವಾಗಿ ಚುಚ್ಚಿ ಕೊಲೆಗೈದಿದ್ದಾಳೆ. ಹಳೆ ಪಿ.ಬಿ. ರಸ್ತೆಯ ಕೀರ್ತಿ ಹೋಟೆಲ್ ಬಳಿ ಘಟನೆ ನಡೆದಿದೆ. ತಾರಿಹಾಳ ಗ್ರಾಮದ ನಾಗರಾಜ ಭೀಮಶಿ ಪಾಟೀಲ (28)ಮೃತ ಯುವಕ. ರಾತ್ರಿ 2:00 ರ ಸುಮಾರಿಗೆ ಕೈಯಲ್ಲಿ ಚಾಕು ಹಿಡಿದು ಮದ್ಯಪಾನ ಮಾಡಿ ಹೋಗುತ್ತಿದ್ದ ಮಹಿಳೆಯನ್ನು ಬೈಕ್ ಸವಾರ ಯುವಕ ಪ್ರಶ್ನಿಸಿದ್ದಾನೆ. ಆಗ ಮಹಿಳೆ ಚಾಕುವಿನಿಂದ ಚುಚ್ಚಿದ್ದಾಳೆ ಎನ್ನಲಾಗಿದೆ. ಕೊಲೆಗೈದ …

Read More »

ಸಿಲಿಂಡರ್, ಹಾಲು ಉಚಿತ, ಬಿಜೆಪಿ ಪ್ರಣಾಳಿಕೆ ಬಿಡುಗಡೆ !

ಬೆಂಗಳೂರು :ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕರ್ನಾಟಕ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು. ಬಿಜೆಪಿಯ ಪ್ರಣಾಳಿಕೆ ರಚನೆ ವೇಳೆ ವಿಷಯ ತಜ್ಞರಿಂದ ಸುಮಾರು 900 ಸಲಹೆ ಬಂದಿದ್ದವು. ಜನರಿಂದ …

Read More »

ಕುಡಚಿ, ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಅವರಿಗೆ ಸಂಕಷ್ಟ…!

ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಬಲಿಸಲು ಹಾಲುಮತ ಸಮಾಜದ ಮುಖಂಡರ ನಿರ್ಧಾರ.

*ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ* *ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ* ಬಾಲಚಂದ್ರ *ಮೂಡಲಗಿ:* ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ …

Read More »

ನಾಳೆ ಬೆಳಗಾವಿಯಲ್ಲಿ ಕಿಚ್ಚ ಸುದೀಪ ರೋಡ್ ಶೋ

ಬೆಳಗಾವಿ :ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ.

Read More »

ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ !

ಅಥಣಿ :ಅಥಣಿಯ ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕ, ಹಿರಿಯ ನ್ಯಾಯವಾದಿ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾವ್ ಚಿಂಗಳೆ ಅವರಿಗೆ ಶನಿವಾರ ತಮ್ಮ ರಾಜೀನಾಮೆ ರವಾನಿಸಿದ್ದಾರೆ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳುತ್ತಿದ್ದೇನೆ. ಆದ್ದರಿಂದ ಕಾಂಗ್ರೆಸ್ ಪಕ್ಷದ …

Read More »

ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ-ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು ನನ್ನ …

Read More »

ಬೆಳಗಾವಿ: ದೊಡ್ಡವಾಡ ಜೋಡಿ ಕೊಲೆ : ಶಿಕ್ಷೆ ಪ್ರಕಟ

ಬೆಳಗಾವಿ :ಜಮೀನು ವಿವಾದದಿಂದ ದಾಯಾದಿಗಳನ್ನೇ ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 2 ಲಕ್ಷ ರೂಪಾಯಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದ ಮಹಾದೇವ ಹಾಲನ್ನವರ ಶಿಕ್ಷೆಗೊಳಗಾದ ವ್ಯಕ್ತಿ. ಮಹಾದೇವ ಅವರ ತಂದೆ ಯಲ್ಲಪ್ಪ ಮತ್ತು ಸಹೋದರ ನಡುವೆ ಜಮೀನು ವಿವಾದ ಇತ್ತು. ಈ ವಿವಾದ ಕಾರಣಕ್ಕೆ ಯಲ್ಲಪ್ಪ ಅವರ ಸಹೋದರರಾದ ಅರ್ಜುನ ಹಾಲನ್ನವರ ಮತ್ತು ಸಿದ್ದಪ್ಪ ಹಾಲನ್ನವರ …

Read More »

ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ !

ಬೆಳಗಾವಿ :ಬೆಳಗಾವಿ ನಗರದಲ್ಲಿ ಡಿಸಿಪಿ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಬೆಳಗ್ಗೆ ಒಟ್ಟು 70 ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ಕೈಗೊಳ್ಳಲಾಗಿದೆ. ಎಸಿಪಿ ಅಪರಾಧ ಮತ್ತು ಮಾರ್ಕೆಟ್‌ , ಖಡೇಬಜಾರ , ಹಾಗೂ ಬೆಳಗಾವಿ ಗ್ರಾಮೀಣ ಉಪವಿಭಾಗದ ಎಸಿಪಿ ಅವರು ಹಾಗೂ ನಗರದ ಎಲ್ಲ ಠಾಣೆಯ ಪಿಐ ಹಾಗೂ ಸಿಬ್ಬಂದಿಯವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ಕಾಲಕ್ಕೆ ಖಡೇಬಜಾರ ಪೊಲೀಸ್ ಠಾಣಾ ಹದ್ದಿಯ ಜಾಲಗಾರ ಗಲ್ಲಿಯಲ್ಲಿ ವಾಸಿಸುತ್ತಿದ್ದ ಒಬ್ಬ ರೌಡಿ …

Read More »