Breaking News
Home / Breaking News / ಬೆಳಗಾವಿಯಲ್ಲಿ ಏಕಾಏಕಿ ಸಿಬಿಐ ದಾಳಿ….!!

ಬೆಳಗಾವಿಯಲ್ಲಿ ಏಕಾಏಕಿ ಸಿಬಿಐ ದಾಳಿ….!!

ಬೆಳಗಾವಿ ದಂಡು ಮಂಡಳಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ವಾಸನೆ; ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ..!

ಬೆಳಗಾವಿ: ಬೆಳಗಾವಿ ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ವಾಸನೆ ಆರೋಪ ಹಿನ್ನೆಲೆ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ ನಡೆಸಿದ್ದಾರೆ.

ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ದಂಡು ಮಂಡಳಿ ಸಿಇಒ ಕೆ. ಆನಂದ ಸೇರಿ ಹಿರಿಯ ಅಧಿಕಾರಿಗಳ ತೀವ್ರ ವಿಚಾರಣೆ ಅಧಿಕಾರಿಗಳು ನಡೆಸುತ್ತಿದ್ದಾರೆ.

ಬೆಂಗಳೂರು, ದೆಹಲಿ ಸಿಬಿಐ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿದ್ದು ನೇಮಕಾತಿ ಅಕ್ರಮ ಸಂಬಂಧ ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಅನ್ವಯ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೇಂದ್ರದ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ದಂಡುಮಂಡಳಿ ಬೆಳಗಾವಿಯಲ್ಲಿರುವ ರಾಜ್ಯದ ಏಕೈಕ ದಂಡುಮಂಡಳಿ ಕಚೇರಿ ಆಗಿದ್ದು ಕ್ಲರ್ಕ್, ಸ್ಟೆನೋಗ್ರಾಫರ್ ಸೇರಿ 2021ರಲ್ಲಿ ನಡೆದಿದ್ದ 19 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಅಕ್ರಮ ಎಸಗಿದ ಆರೋಪ ಕೇಳಿಬಂದಿದೆ.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *