ಗಾಂಜಾ ವಿರುದ್ಧ ಸಿಸಿಬಿ ಸಮರ ,ನಾಲ್ವರ ಬಂಧನ

ಬೆಳಗಾವಿ- ಬೆಳಗಾವಿ ನಗರದಲ್ಲಿ ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಖದೀಮರನ್ನು ಬಂಧಿಸುವಲ್ಲಿ ಸಿಸಿಬಿ ಪೋಲೀಸರು ಯಶಸ್ವಿಯಾಗಿದ್ದಾರೆ

ಬೆಳಗಾವಿ ನಗರದಲ್ಲಿ ವಿದ್ಯಾರ್ಥಿಗಳು ಗಾಂಜಾ ಚಟಕ್ಕೆ ಬಲಿಯಾಗುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೋಲೀಸ್ ಗಾಂಜಾ ಮಾರಾಟಗಾರರ ವಿರುದ್ಧ ಸಮರ ಸಾರಿದೆ.

ಬೆಳಗಾವಿಯ ಗ್ಯಾಂಗ್ ವಾಡಿಯಲ್ಲಿ ದುರ್ಗಾದೇವಿ ಮಂದಿರದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಅಶೋಕ ನಗರ ಮತ್ತು ಫೋರ್ಟ್ ರಸ್ತೆಯ ನಿವಾಸಿಗಳಾದ ಸರ್ಜು ಗೋವಿಂದ ಲೋಂಡೆ‌,ನಿಖಾಬ ಪೀರಜಧೆ,ತಬ್ರೇಜ್ ನರಗುಂದ,ಸಾದಾಬ ಪೀರಜಾದೆ ಎಂಬ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಒಂದೂವರೆ ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ

ದಾಳಿ ನಡೆಸಿದ ಸಿಸಿಬಿ ಸಿಪಿಐ ಗಡ್ಡೇಕರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ

ಸಿಸಿಬಿ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಾಗಿರುವದು ವಿಶೇಷ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *